AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಬಿಜೆಪಿ ಶಾಸಕಿ ಸಾವು; ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್​ ಓಂ ಬಿರ್ಲಾ ಸಂತಾಪ

ಕಿರಣ್ ಮಹೇಶ್ವರಿ 2004ರಿಂದ 2009ರವರೆಗೆ ರಾಜಸ್ಥಾನದ ಉದಯ್​ಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದವರೂ ಹೌದು. ಅಕ್ಟೋಬರ್​ನಲ್ಲಿ ನಡೆದ ಕೋಟಾ ಉತ್ತರ ಮುನ್ಸಿಪಲ್ ಕಾರ್ಪೋರೇಶನ್​ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದ ಕಿರಣ್​ ಮಹೇಶ್ವರಿ, ಅದಾದ ಬಳಿಕ ಕೊರೊನಾ ಸೋಂಕಿಗೆ ಒಳಗಾಗಿದ್ದರು.

ಕೊರೊನಾ ಸೋಂಕಿನಿಂದ ಬಿಜೆಪಿ ಶಾಸಕಿ ಸಾವು; ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್​ ಓಂ ಬಿರ್ಲಾ ಸಂತಾಪ
ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ
Lakshmi Hegde
|

Updated on:Nov 30, 2020 | 10:13 AM

Share

ರಾಜಸಮಂದ್​ (ರಾಜಸ್ಥಾನ): ಕೊರೊನಾ ಸೋಂಕಿನಿಂಧ ಅದೆಷ್ಟೋ ಪ್ರಮುಖ ರಾಜಕಾರಣಿಗಳು ಜೀವ ಕಳೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್​ ಹಿರಿಯ ನಾಯಕ ಅಹ್ಮದ್​ ಪಟೇಲ್​ ಸೋಂಕಿನಿಂದ ಮೃತಪಟ್ಟಿದ್ದರು. ಇದೀಗ ಬಿಜೆಪಿಯ ಶಾಸಕಿಯೋರ್ವರು ಇದೇ ಸೋಂಕಿಗೆ ಬಲಿಯಾಗಿದ್ದಾರೆ.

ರಾಜಸ್ಥಾನದ ರಾಜಸಮಂದ್​ ಕ್ಷೇತ್ರದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ನಿನ್ನೆ ಸಂಜೆ ಹರ್ಯಾಣದ ಗುರುಗ್ರಾಮದಲ್ಲಿರುವ ಮೇದಾಂತಾ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್​ ಓಂ ಬಿರ್ಲಾ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಿರಣ್​ ಮಹೇಶ್ವರಿ ನವೆಂಬರ್​ ಪ್ರಾರಂಭದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಸ್ವಲ್ಪದಿನ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ ಕ್ರಮೇಣ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕಿರಣ್ ಮಹೇಶ್ವರಿ 2004ರಿಂದ 2009ರವರೆಗೆ ರಾಜಸ್ಥಾನದ ಉದಯ್​ಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದವರೂ ಹೌದು. ಅಕ್ಟೋಬರ್​ನಲ್ಲಿ ನಡೆದ ಕೋಟಾ ಉತ್ತರ ಮುನ್ಸಿಪಲ್ ಕಾರ್ಪೋರೇಷನ್​ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದ ಕಿರಣ್​ ಮಹೇಶ್ವರಿ, ಅದಾದ ಬಳಿಕ ಕೊರೊನಾ ಸೋಂಕಿಗೆ ಒಳಗಾಗಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಸಂತಾಪ ಕಿರಣ್​ ಮಹೇಶ್ವರಿ ಅವರ ಅಕಾಲಿಕ ಮರಣ ನೋವು ತಂದಿದೆ. ಬಿಜೆಪಿ ಶಾಸಕಿ, ಸಂಸದೆ, ರಾಜಸ್ಥಾನದ ಸಚಿವೆಯಾಗಿ ಬಡವರ, ಹಿಂದುಳಿದವರ ಸಬಲೀಕರಣಕ್ಕಾಗಿ ಶ್ರಮಿಸಿದವರು. ರಾಜಸ್ಥಾನ ಅಭಿವೃದ್ಧಿಗಾಗಿ ಪ್ರಯತ್ನಿಸಿದವರು. ಓಂ ಶಾಂತಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Published On - 10:12 am, Mon, 30 November 20

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ