AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾದಿ ಬಗ್ಗೆ ನೂಪುರ್ ಶರ್ಮಾರ ಹೇಳಿಕೆ ಖಂಡಿಸಿ ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ರಾಜೀನಾಮೆ

ನಾನು ಬಿಜೆಪಿಯ ಸದಸ್ಯೆಯಾಗಿ ಮುಂದುವರಿದರೆ ಮತ್ತು ಪ್ರವಾದಿ ವಿರುದ್ಧ ಹೇಳಿಕೆಯನ್ನು ಬೆಂಬಲಿಸಿದರೆ ನನಗಿಂತ ದೊಡ್ಡ ಅಪರಾಧಿ ಮತ್ತೊಬ್ಬರಿಲ್ಲ. ಈಗ ನನ್ನ ಪ್ರಜ್ಞೆಯು ಜಾಗೃತಗೊಂಡಿದೆ. ನಾನು ಇನ್ನು ಮುಂದೆ ಪಕ್ಷದಲ್ಲಿ ಮುಂದುವರಿಯಲು ಬಯಸುವುದಿಲ್ಲ..

ಪ್ರವಾದಿ ಬಗ್ಗೆ ನೂಪುರ್ ಶರ್ಮಾರ ಹೇಳಿಕೆ ಖಂಡಿಸಿ ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ರಾಜೀನಾಮೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 14, 2022 | 4:25 PM

Share

ದೆಹಲಿ: ಬಿಜೆಪಿಯಿಂದ (BJP) ಅಮಾನತುಗೊಂಡಿರುವ ಪಕ್ಷದ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರು ಪ್ರವಾದಿ ಮೊಹಮ್ಮದ್ (Prophet Muhammad) ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ರಾಜಸ್ಥಾನದಲ್ಲಿ ಬಿಜೆಪಿ ಪುರಸಭೆ ಸದಸ್ಯರೊಬ್ಬರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದಕ್ಷಿಣದ ಕೋಟಾ ಮುನ್ಸಿಪಲ್ ಕಾರ್ಪೋರೇಶನ್‌ನ ವಾರ್ಡ್ ಸಂಖ್ಯೆ 14 ರ ಬಿಜೆಪಿಯ ಕೌನ್ಸಿಲರ್ ತಬಸ್ಸುಮ್ ಮಿರ್ಜಾ ಅವರು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸತೀಶ್ ಪೂನಿಯಾ ಮತ್ತು ಕೋಟಾ ಜಿಲ್ಲಾ ಅಧ್ಯಕ್ಷ ಕ್ರಿಶನ್ ಕುಮಾರ್ ಸೋನಿ ಅವರಿಗೆ ಕಳುಹಿಸಿದ್ದು ತಮ್ಮ ರಾಜೀನಾಮೆ ಹಿಂದಿನ ಕಾರಣವನ್ನು ಉಲ್ಲೇಖಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾದ ಮಿರ್ಜಾ ಅವರು ಸೋನಿ ಅವರಿಗೆ ಬರೆದ ಪತ್ರದಲ್ಲಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಪಕ್ಷದೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ ಅವರಿಗೆ ಬರೆದ ಪ್ರತ್ಯೇಕ ಪತ್ರದಲ್ಲಿ ಮಿರ್ಜಾ ಅವರು ಪಕ್ಷದ ಸದಸ್ಯರಾಗಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು ನಬಿಯನ್ನು ಟೀಕಿಸುತ್ತಿರುವ ತನ್ನ ಕಾರ್ಯಕರ್ತರನ್ನು ನಿಯಂತ್ರಿಸಲು ಪಕ್ಷವು ವಿಫಲವಾಗಿದೆ ಎಂದು ಹೇಳಿದ್ದಾರೆ.

ನಾನು ಬಿಜೆಪಿಯ ಸದಸ್ಯೆಯಾಗಿ ಮುಂದುವರಿದರೆ ಮತ್ತು ಪ್ರವಾದಿ ವಿರುದ್ಧ ಹೇಳಿಕೆಯನ್ನು ಬೆಂಬಲಿಸಿದರೆ ನನಗಿಂತ ದೊಡ್ಡ ಅಪರಾಧಿ ಮತ್ತೊಬ್ಬರಿಲ್ಲ. ಈಗ ನನ್ನ ಪ್ರಜ್ಞೆಯು ಜಾಗೃತಗೊಂಡಿದೆ. ನಾನು ಇನ್ನು ಮುಂದೆ ಪಕ್ಷದಲ್ಲಿ ಮುಂದುವರಿಯಲು ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ದಿ ಇಂಡಿಯನ್ ಎಕ್ಸ್​​ಪ್ರೆಸ್ ಮಿರ್ಜಾ ಅವರನ್ನು ಸಂಪರ್ಕಿಸಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಇಮೇಲ್ ಮತ್ತು ಪೋಸ್ಟ್ ಮೂಲಕ ಪೂನಿಯಾ ಮತ್ತು ಸೋನಿ ಅವರಿಗೆ ಕಳುಹಿಸಿರುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಕಾಂಗ್ರೆಸ್ ಸರ್ಕಾರದಲ್ಲೂ ಪಠ್ಯ ಪರಿಷ್ಕರಣೆಯಲ್ಲಿ ಎಡವಟ್ಟು; ರಾಷ್ಟ್ರ ಮಟ್ಟಕ್ಕೆ ಹಬ್ಬಿದ ವಿವಾದ!
Image
ಬಿಜೆಪಿಯ ಹಿರಿಯ ಮುಖಂಡ ಎ.ಜಿ.ಕೊಡ್ಗಿ ನಿಧನ
Image
ಅಂಡಮಾನ್‌ ಜೈಲು ನೋಡಿದ್ರೆ ರಾಹುಲ್‌ ಗಾಂಧಿ ಚಡ್ಡಿ ಪ್ಯಾಂಟ್‌ ಒದ್ದೆ ಆಗುತ್ತೆ, ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಸಮವಿಲ್ಲ – ಸಿ.ಟಿ.ರವಿ
Image
ಮೊಹಮ್ಮದ್ ಪೈಗಂಬರ್‌ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಖಂಡನೆ; ಬೆಥುಧಾರಿಯಲ್ಲಿ ರೈಲಿನ ಮೇಲೆ ನೂರಾರು ಜನರಿಂದ ಕಲ್ಲೆಸೆತ

ಏತನ್ಮಧ್ಯೆ, ಇಮೇಲ್ ಅಥವಾ ಅಂಚೆ ಮೂಲಕ ಯಾವುದೇ ರಾಜೀನಾಮೆ ಪತ್ರವನ್ನು ಸ್ವೀಕರಿಸಲಿಲ್ಲ ಎಂದು ಸೋನಿ ಪ್ರತಿಕ್ರಿಯಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 14 June 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!