AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾದಿ ಬಗ್ಗೆ ನೂಪುರ್ ಶರ್ಮಾರ ಹೇಳಿಕೆ ಖಂಡಿಸಿ ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ರಾಜೀನಾಮೆ

ನಾನು ಬಿಜೆಪಿಯ ಸದಸ್ಯೆಯಾಗಿ ಮುಂದುವರಿದರೆ ಮತ್ತು ಪ್ರವಾದಿ ವಿರುದ್ಧ ಹೇಳಿಕೆಯನ್ನು ಬೆಂಬಲಿಸಿದರೆ ನನಗಿಂತ ದೊಡ್ಡ ಅಪರಾಧಿ ಮತ್ತೊಬ್ಬರಿಲ್ಲ. ಈಗ ನನ್ನ ಪ್ರಜ್ಞೆಯು ಜಾಗೃತಗೊಂಡಿದೆ. ನಾನು ಇನ್ನು ಮುಂದೆ ಪಕ್ಷದಲ್ಲಿ ಮುಂದುವರಿಯಲು ಬಯಸುವುದಿಲ್ಲ..

ಪ್ರವಾದಿ ಬಗ್ಗೆ ನೂಪುರ್ ಶರ್ಮಾರ ಹೇಳಿಕೆ ಖಂಡಿಸಿ ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ರಾಜೀನಾಮೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 14, 2022 | 4:25 PM

ದೆಹಲಿ: ಬಿಜೆಪಿಯಿಂದ (BJP) ಅಮಾನತುಗೊಂಡಿರುವ ಪಕ್ಷದ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರು ಪ್ರವಾದಿ ಮೊಹಮ್ಮದ್ (Prophet Muhammad) ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ರಾಜಸ್ಥಾನದಲ್ಲಿ ಬಿಜೆಪಿ ಪುರಸಭೆ ಸದಸ್ಯರೊಬ್ಬರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದಕ್ಷಿಣದ ಕೋಟಾ ಮುನ್ಸಿಪಲ್ ಕಾರ್ಪೋರೇಶನ್‌ನ ವಾರ್ಡ್ ಸಂಖ್ಯೆ 14 ರ ಬಿಜೆಪಿಯ ಕೌನ್ಸಿಲರ್ ತಬಸ್ಸುಮ್ ಮಿರ್ಜಾ ಅವರು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸತೀಶ್ ಪೂನಿಯಾ ಮತ್ತು ಕೋಟಾ ಜಿಲ್ಲಾ ಅಧ್ಯಕ್ಷ ಕ್ರಿಶನ್ ಕುಮಾರ್ ಸೋನಿ ಅವರಿಗೆ ಕಳುಹಿಸಿದ್ದು ತಮ್ಮ ರಾಜೀನಾಮೆ ಹಿಂದಿನ ಕಾರಣವನ್ನು ಉಲ್ಲೇಖಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾದ ಮಿರ್ಜಾ ಅವರು ಸೋನಿ ಅವರಿಗೆ ಬರೆದ ಪತ್ರದಲ್ಲಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಪಕ್ಷದೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ ಅವರಿಗೆ ಬರೆದ ಪ್ರತ್ಯೇಕ ಪತ್ರದಲ್ಲಿ ಮಿರ್ಜಾ ಅವರು ಪಕ್ಷದ ಸದಸ್ಯರಾಗಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು ನಬಿಯನ್ನು ಟೀಕಿಸುತ್ತಿರುವ ತನ್ನ ಕಾರ್ಯಕರ್ತರನ್ನು ನಿಯಂತ್ರಿಸಲು ಪಕ್ಷವು ವಿಫಲವಾಗಿದೆ ಎಂದು ಹೇಳಿದ್ದಾರೆ.

ನಾನು ಬಿಜೆಪಿಯ ಸದಸ್ಯೆಯಾಗಿ ಮುಂದುವರಿದರೆ ಮತ್ತು ಪ್ರವಾದಿ ವಿರುದ್ಧ ಹೇಳಿಕೆಯನ್ನು ಬೆಂಬಲಿಸಿದರೆ ನನಗಿಂತ ದೊಡ್ಡ ಅಪರಾಧಿ ಮತ್ತೊಬ್ಬರಿಲ್ಲ. ಈಗ ನನ್ನ ಪ್ರಜ್ಞೆಯು ಜಾಗೃತಗೊಂಡಿದೆ. ನಾನು ಇನ್ನು ಮುಂದೆ ಪಕ್ಷದಲ್ಲಿ ಮುಂದುವರಿಯಲು ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ದಿ ಇಂಡಿಯನ್ ಎಕ್ಸ್​​ಪ್ರೆಸ್ ಮಿರ್ಜಾ ಅವರನ್ನು ಸಂಪರ್ಕಿಸಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಇಮೇಲ್ ಮತ್ತು ಪೋಸ್ಟ್ ಮೂಲಕ ಪೂನಿಯಾ ಮತ್ತು ಸೋನಿ ಅವರಿಗೆ ಕಳುಹಿಸಿರುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಕಾಂಗ್ರೆಸ್ ಸರ್ಕಾರದಲ್ಲೂ ಪಠ್ಯ ಪರಿಷ್ಕರಣೆಯಲ್ಲಿ ಎಡವಟ್ಟು; ರಾಷ್ಟ್ರ ಮಟ್ಟಕ್ಕೆ ಹಬ್ಬಿದ ವಿವಾದ!
Image
ಬಿಜೆಪಿಯ ಹಿರಿಯ ಮುಖಂಡ ಎ.ಜಿ.ಕೊಡ್ಗಿ ನಿಧನ
Image
ಅಂಡಮಾನ್‌ ಜೈಲು ನೋಡಿದ್ರೆ ರಾಹುಲ್‌ ಗಾಂಧಿ ಚಡ್ಡಿ ಪ್ಯಾಂಟ್‌ ಒದ್ದೆ ಆಗುತ್ತೆ, ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಸಮವಿಲ್ಲ – ಸಿ.ಟಿ.ರವಿ
Image
ಮೊಹಮ್ಮದ್ ಪೈಗಂಬರ್‌ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಖಂಡನೆ; ಬೆಥುಧಾರಿಯಲ್ಲಿ ರೈಲಿನ ಮೇಲೆ ನೂರಾರು ಜನರಿಂದ ಕಲ್ಲೆಸೆತ

ಏತನ್ಮಧ್ಯೆ, ಇಮೇಲ್ ಅಥವಾ ಅಂಚೆ ಮೂಲಕ ಯಾವುದೇ ರಾಜೀನಾಮೆ ಪತ್ರವನ್ನು ಸ್ವೀಕರಿಸಲಿಲ್ಲ ಎಂದು ಸೋನಿ ಪ್ರತಿಕ್ರಿಯಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 14 June 22

ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್