AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಾ: ನಾಪತ್ತೆಯಾಗಿ 9 ದಿನಗಳ ಬಳಿಕ ಅರಣ್ಯದಲ್ಲಿ ವಿದ್ಯಾರ್ಥಿಯ ಶವ ಪತ್ತೆ

ರಾಜಸ್ಥಾನದ ಕೋಟಾದಲ್ಲಿ ಜೆಇಇ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿ ರಚಿತ್ ಸೋಂಧಿಯಾ ನಾಪತ್ತೆಯಾದ ಎಂಟು ದಿನಗಳ ನಂತರ ಸಮೀಪದ ಕಾಡಿನಲ್ಲಿ ಶವ ಪತ್ತೆಯಾಗಿದೆ. ಒಂದು ವಾರದಲ್ಲಿ ಇದು ಎರಡನೇ ಪ್ರಕರಣವಾಗಿದೆ. ಕೋಟಾದಲ್ಲಿ ನೀಟ್​ ಸೇರಿದಂತೆ ಹಲವು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುತ್ತಿರುವ ಹಲವು ವಿದ್ಯಾರ್ಥಿಗಳು ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗಿದೆ.

ಕೋಟಾ: ನಾಪತ್ತೆಯಾಗಿ 9 ದಿನಗಳ ಬಳಿಕ ಅರಣ್ಯದಲ್ಲಿ ವಿದ್ಯಾರ್ಥಿಯ ಶವ ಪತ್ತೆ
ವಿದ್ಯಾರ್ಥಿ ಸಾವು
ನಯನಾ ರಾಜೀವ್
|

Updated on: Feb 20, 2024 | 8:25 AM

Share

ನಾಪತ್ತೆಯಾಗಿ 9 ದಿನಗಳ ಬಳಿಕ ಅರಣ್ಯದಲ್ಲಿ ಕೋಟಾ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಕೋಟಾದಿಂದ ನಾಪತ್ತೆಯಾಗಿದ್ದ 16 ವರ್ಷದ ಪ್ರವೇಶ ತರಬೇತಿ ವಿದ್ಯಾರ್ಥಿಯ ಶವ ಸಮೀಪದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಜಂಟಿ ಪ್ರವೇಶ ಪರೀಕ್ಷೆಗೆ (ಜೆಇಇ) ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ರಚಿತ್ ಸೋಂಧಿಯಾ ಫೆಬ್ರವರಿ 11 ರಿಂದ ಕೋಚಿಂಗ್ ಸೆಂಟರ್‌ಗೆ ಹಾಸ್ಟೆಲ್‌ನಿಂದ ಹೊರಟು ನಾಪತ್ತೆಯಾಗಿದ್ದರು.

ಗಾರ್ಡಿಯಾ ಮಹಾದೇವ ಮಂದಿರದ ಬಳಿಯ ಅರಣ್ಯ ಪ್ರದೇಶಕ್ಕೆ ಅವರು ಪ್ರವೇಶಿಸುತ್ತಿರುವುದು ಸಿಸಿಟಿವಿಯಲ್ಲಿ ಕೊನೆಯದಾಗಿ ಸೆರೆಯಾಗಿದೆ. ಸಿಸಿಟಿವಿ ಫೂಟೇಜ್ ಅವರು ದೇವಾಲಯದ ಪ್ರದೇಶಕ್ಕೆ ಕ್ಯಾಬ್ ತೆಗೆದುಕೊಂಡು ಹೋಗುವುದನ್ನು ತೋರಿಸಿದೆ, ಅಲ್ಲಿಂದ ಅವರು ಕೊನೆಯದಾಗಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ ಎಂದು ಪೊಲೀಸರು ಮೊದಲು ತಿಳಿಸಿದ್ದಾರೆ.

ಪೊಲೀಸರು ಸೋಂಧಿಯಾ ಅವರ ಕೊಠಡಿಯಿಂದ ದೇವಸ್ಥಾನಕ್ಕೆ ಹೋಗುವ ಯೋಜನೆಯನ್ನು ಉಲ್ಲೇಖಿಸಿರುವ ಟಿಪ್ಪಣಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಹಿಂದೆ ದೇವಸ್ಥಾನದ ಬಳಿ ಸೋಂಧಿಯಾ ಅವರ ಬ್ಯಾಗ್, ಮೊಬೈಲ್ ಫೋನ್, ಕೊಠಡಿಯ ಕೀಗಳು ಮತ್ತು ಇತರ ವಸ್ತುಗಳು ಪೊಲೀಸರಿಗೆ ಪತ್ತೆಯಾಗಿವೆ.

ಮೂಲತಃ ಮಧ್ಯಪ್ರದೇಶದ ವಿದ್ಯಾರ್ಥಿಯ ಪತ್ತೆಗಾಗಿ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳಿಂದ ತೀವ್ರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಸೋಂಡಿಯಾ ಒಂದು ವರ್ಷದಿಂದ ಪ್ರವೇಶ ಕೋಚಿಂಗ್ ಹಬ್‌ನಲ್ಲಿ ಓದುತ್ತಿದ್ದ. ಒಂದು ವಾರದಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ.

ಮತ್ತಷ್ಟು ಓದಿ: ಕೋಟಾ: ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪೋಷಕರೇ ಕಾರಣ ಎಂದ ಸುಪ್ರೀಂಕೋರ್ಟ್​

ಅನಾರೋಗ್ಯದಿಂದ ನೀಟ್ ಆಕಾಂಕ್ಷಿ ಸಾವು ರಾಜಸ್ಥಾನದ ಕೋಟಾದಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ನಿವಾಸಿ ಶಿವಂ ರಾಘವ ಎಂಬುವವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಅಧಿಕ ರಕ್ತದೊತ್ತಡ ಮತ್ತು ರಕ್ತದಲ್ಲಿ ಸಕ್ಕರೆಯ ಮಟ್ಟ ಹೆಚ್ಚಾಗಿದ್ದ ಕಾರಣ ಶಿವಂ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿವಂ ಅವರು ಕಳೆದ ಮೂರು ವರ್ಷಗಳಿಂದ ಕೋಟಾದಲ್ಲಿ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು ನೀಟ್​ಗೆ ತಯಾರಿ ನಡೆಸುತ್ತಿದ್ದರು. ಕೋಟಾದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೃತಪಟ್ಟ ಎರಡನೇ ವಿದ್ಯಾರ್ಥಿ ಇವರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?