AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋರ್​ವೆಲ್​ಗೆ ಬಿದ್ದಿದ್ದ ಬಾಲಕನನ್ನು 55 ಗಂಟೆಗಳ ಬಳಿಕ ಹೊರತೆಗೆದರೂ ಪ್ರಾಣ ಉಳಿಲಿಲ್ಲ

ರಾಜಸ್ಥಾನದ ದೌಸಾದಲ್ಲಿ ಬೋರ್​ವೆಲ್​ಗೆ ಬಿದ್ದಿದ್ದ ಬಾಲಕನನ್ನು 55 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಹೊರಗೆ ತೆಗೆದರೂ ಪ್ರಾಣ ಉಳಿಯಲಿಲ್ಲ. 150 ಅಡಿ ಆಳದ ಬೋರ್​ವೆಲ್​ಗೆ ಆತ ಬಿದ್ದಿದ್ದ, 5 ವರ್ಷದ ಬಾಲಕನನ್ನು ಆರ್ಯನ್ ಎಂದು ಗುರುತಿಸಲಾಗಿದೆ. ಆತನನ್ನು ಹೊರ ತೆಗೆಯುವಷ್ಟರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು.

ಬೋರ್​ವೆಲ್​ಗೆ ಬಿದ್ದಿದ್ದ ಬಾಲಕನನ್ನು 55 ಗಂಟೆಗಳ ಬಳಿಕ ಹೊರತೆಗೆದರೂ ಪ್ರಾಣ ಉಳಿಲಿಲ್ಲ
ಬೋರ್​ವೆಲ್
ನಯನಾ ರಾಜೀವ್
|

Updated on:Dec 12, 2024 | 9:41 AM

Share

ರಾಜಸ್ಥಾನದ ದೌಸಾದಲ್ಲಿ ಬೋರ್​ವೆಲ್​ಗೆ ಬಿದ್ದಿದ್ದ ಬಾಲಕನನ್ನು 55 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಹೊರಗೆ ತೆಗೆದರೂ ಪ್ರಾಣ ಉಳಿಯಲಿಲ್ಲ. 150 ಅಡಿ ಆಳದ ಬೋರ್​ವೆಲ್​ಗೆ ಆತ ಬಿದ್ದಿದ್ದ, 5 ವರ್ಷದ ಬಾಲಕನನ್ನು ಆರ್ಯನ್ ಎಂದು ಗುರುತಿಸಲಾಗಿದೆ.

ಆತನನ್ನು ಹೊರ ತೆಗೆಯುವಷ್ಟರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ತಂದೆ ಹಾಲಿನ ಬಾಟಲಿ ಹಿಡಿದು ಮಗನ ಬರುವಿಕೆಗಾಗಿ ಕಾದಿದ್ದರು ಆದರೆ ಬದುಕಿ ಬರಲೇ ಇಲ್ಲ.

ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಲಿಖಾಡ್ ಗ್ರಾಮದ ಗದ್ದೆಯಲ್ಲಿ ಆಟವಾಡುತ್ತಿದ್ದ ಬಾಲಕ ಬೋರ್‌ವೆಲ್‌ಗೆ ಬಿದ್ದಿದ್ದ. ಒಂದು ಗಂಟೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ಮಗುವನ್ನು ತಲುಪಲು ಡ್ರಿಲ್ಲಿಂಗ್ ಯಂತ್ರಗಳನ್ನು ಬಳಸಿ ಸಮಾನಾಂತರ ಹೊಂಡವನ್ನು ತೆಗೆಯಲಾಯಿತು.

ರಕ್ಷಣಾ ಕಾರ್ಯಗಳ ಕುರಿತು ಮಾಹಿತಿ ನೀಡಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಅಸಂಖ್ಯಾತ ಸವಾಲುಗಳಿವೆ ಎಂದು ಹೇಳಿದ್ದರು ನೀರಿನ ಮಟ್ಟ ಸುಮಾರು 160 ಅಡಿ ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಓದಿ: ಹಾವೇರಿ: ಚರಂಡಿಯಲ್ಲಿ ಬಿದ್ದು ಬಾಲಕ ಸಾವು, ಇಬ್ಬರು ಅಧಿಕಾರಿಗಳು ಅಮಾನತು

ಕಾರ್ಯಾಚರಣೆ ಸಂದರ್ಭದಲ್ಲಿ ಯಂತ್ರವು ಕೆಟ್ಟು ಹೋಗಿ ಹೊಸ ಯಂತ್ರವನ್ನು ತರಿಸಲಾಗಿತ್ತು. ಈ ವರ್ಷದ ಆರಂಭದಲ್ಲಿ ಸೆಪ್ಟೆಂಬರ್‌ನಲ್ಲಿ, ದೌಸಾದ ಬಂಡಿಕುಯಿ ಪ್ರದೇಶದಲ್ಲಿ 35 ಅಡಿ ತೆರೆದ ಬೋರ್‌ವೆಲ್‌ನಿಂದ ಎರಡು ವರ್ಷದ ಬಾಲಕಿಯನ್ನು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ 18 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿತ್ತು.ಬಾಲಕಿ 28 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:29 am, Thu, 12 December 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ