AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಬಜೆಟ್ ಕಪ್ಪು ಬಣ್ಣದ ವಧುವಿಗೆ ಮೇಕಪ್ ಮಾಡಿದಂತಿದೆ; ವಿವಾದಕ್ಕೀಡಾಯ್ತು ಬಿಜೆಪಿ ನಾಯಕನ ಹೇಳಿಕೆ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಡಿಸಿದ ಬಜೆಟ್ ಕಪ್ಪನೆಯ ವಧುವಿಗೆ ಮೇಕಪ್ ಮಾಡಲು ಬ್ಯೂಟಿ ಪಾರ್ಲರ್‌ಗೆ ಕರೆದೊಯ್ಯುವಂತಿದೆ. ಅದರಿಂದಲೇ ಅವಳು ಸುಂದರವಾಗಿ ಕಾಣುತ್ತಾಳೆ ಎಂದು ಬಿಜೆಪಿ ಶಾಸಕ ಸತೀಶ್ ಪುನಿಯಾ ಟೀಕಿಸಿದ್ದಾರೆ.

ರಾಜಸ್ಥಾನದ ಬಜೆಟ್ ಕಪ್ಪು ಬಣ್ಣದ ವಧುವಿಗೆ ಮೇಕಪ್ ಮಾಡಿದಂತಿದೆ; ವಿವಾದಕ್ಕೀಡಾಯ್ತು ಬಿಜೆಪಿ ನಾಯಕನ ಹೇಳಿಕೆ
ಸತೀಶ್ ಪುನಿಯಾ
TV9 Web
| Edited By: |

Updated on: Feb 23, 2022 | 7:02 PM

Share

ಜೈಪುರ: ರಾಜಸ್ಥಾನದ ಬಜೆಟ್ ಕಪ್ಪು ಬಣ್ಣದ ವಧು-ವರರನ್ನು ಸುಂದರವಾಗಿ ಕಾಣುವಂತೆ ಬ್ಯೂಟಿ ಪಾರ್ಲರ್‌ಗೆ ಕರೆದುಕೊಂಡು ಹೋಗಿ ಬಿಳಿ ಮಾಡಿದಂತಿದೆ ಎಂದು ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಸತೀಶ್ ಪುನಿಯಾ (Satish Punia) ಇಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಜೆಟ್ ಅನ್ನು ಟೀಕಿಸಿರುವ ವಿರೋಧ ಪಕ್ಷ ಬಿಜೆಪಿ, ರಾಜಸ್ಥಾನ ಸರ್ಕಾರವು ಹಲವಾರು ಘೋಷಣೆಗಳನ್ನು ಮಾಡಿದ್ದರೂ ಅದನ್ನು ಪೂರೈಸಲು ಹಣವಿಲ್ಲ ಎಂದು ಆರೋಪಿಸಿದೆ. “ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಮಂಡಿಸಿದ ಬಜೆಟ್ ಕಪ್ಪನೆಯ ವಧುವಿಗೆ ಮೇಕಪ್ ಮಾಡಲು ಬ್ಯೂಟಿ ಪಾರ್ಲರ್‌ಗೆ ಕರೆದೊಯ್ಯುವಂತಿದೆ. ಅದರಿಂದಲೇ ಅವಳು ಸುಂದರವಾಗಿ ಕಾಣುತ್ತಾಳೆಯೇ ವಿನಃ ಅದು ನೈಜ ಸೌಂದರ್ಯವಲ್ಲ” ಎಂದು ಬಿಜೆಪಿ ಶಾಸಕ ಸತೀಶ್ ಪುನಿಯಾ ಟೀಕಿಸಿದ್ದಾರೆ.

ರಾಜಸ್ಥಾನ ಸರ್ಕಾರ ಒಂದರ ಹಿಂದೆ ಒಂದರಂತೆ ಭರವಸೆಗಳನ್ನು ನೀಡುತ್ತಿದೆ. ಆದರೆ, ಆ ಭರವಸೆಗಳನ್ನು ಈಡೇರಿಸಲು ಹಣ ಎಲ್ಲಿದೆ ಎಂದು ತಿಳಿಯಲು ನಾನು ಬಯಸುತ್ತೇನೆ. ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ನನಗೆ ಖಚಿತವಾಗಿ ಗೊತ್ತಿದೆ ಎಂದು ವಿರೋಧ ಪಕ್ಷದ ನಾಯಕ ಗುಲಾಬ್‌ಚಂದ್ ಕಟಾರಿಯಾ ಹೇಳಿದ್ದರು.

ರಾಜಕಾರಣಿಗಳು ಸದಾ ಒಂದಿಲ್ಲೊಂದು ಒಂದು ಕಾರಣಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ. ಕಳೆದ ನವೆಂಬರ್‌ನಲ್ಲಿ ರಾಜಸ್ಥಾನದ ಕಾಂಗ್ರೆಸ್ ಶಾಸಕ ರಾಜೇಂದ್ರ ಸಿಂಗ್ ಗುಧಾ ಅವರು ತಮ್ಮ ಕ್ಷೇತ್ರದ ರಸ್ತೆಗಳು “ಕತ್ರೀನಾ ಕೈಫ್‌ನ ಕೆನ್ನೆಗಳಂತಿರಬೇಕು” ಎಂದು ಹೇಳುವ ಮೂಲಕ ಪೇಚಿಗೆ ಸಿಲುಕಿದ್ದರು. ಈ ಕಾಮೆಂಟ್ ಟ್ವಿಟ್ಟರ್‌ನಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

2005ರಲ್ಲಿ ಲಾಲು ಪ್ರಸಾದ್ ಯಾದವ್ ಅವರು ಬಿಹಾರದ ರಸ್ತೆಗಳು “ಹೇಮಾ ಮಾಲಿನಿ ಅವರ ಕೆನ್ನೆಗಳಂತೆ” ಸುಗಮವಾಗಿರುತ್ತವೆ ಎಂದು ಭರವಸೆ ನೀಡಿದ್ದರು. 2013ರಲ್ಲಿ ಉತ್ತರ ಪ್ರದೇಶ ಸರ್ಕಾರದ ಸಚಿವರೊಬ್ಬರು ರಾಜ್ಯದ ಪ್ರತಾಪಗಢ ಜಿಲ್ಲೆಯಲ್ಲಿ “ನಟಿಯರಾದ ಹೇಮಾ ಮಾಲಿನಿ ಮತ್ತು ಮಾಧುರಿ ದೀಕ್ಷಿತ್ ಅವರ ಕೆನ್ನೆಗಳಂತೆ” ರಸ್ತೆಗಳನ್ನು ನಿರ್ಮಿಸುವ ಭರವಸೆ ನೀಡುವ ಮೂಲಕ ಕೋಲಾಹಲಕ್ಕೆ ಕಾರಣರಾಗಿದ್ದರು. ಅಂತಿಮವಾಗಿ ಅವರ ಹೇಳಿಕೆಗಾಗಿ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿತ್ತು.

ಅದೇ ವರ್ಷ, ಬಿಜೆಪಿ ನಾಯಕ ಮತ್ತು ಆಗಿನ ಛತ್ತೀಸ್‌ಗಢ ಸಚಿವ ಬ್ರಿಜ್‌ಮೋಹನ್ ಅಗರ್‌ವಾಲ್ ರಾಜ್ಯದ ರಸ್ತೆಗಳನ್ನು ನಟಿ ಹೇಮಾ ಮಾಲಿನಿಗೆ ಹೋಲಿಸಿದ್ದರು. ಅವರ ಬೆಂಬಲಿಗರು ಹೇಮಾ ಮಾಲಿನಿಯ ಚಿತ್ರಗಳು ಮತ್ತು ರಾಜ್ಯದ ರಸ್ತೆಗಳ ಪೂರ್ಣ ಪುಟದ ಜಾಹೀರಾತುಗಳನ್ನು ನೀಡಿದ್ದರು. “ಸ್ವಪ್ನ್ ಸುಂದರಿ ಸಮಾನ್ ಪ್ರದೇಶ್ ಕಿ ಚಮ್ಚಮತಿ ಸದ್ಕೇನ್ (ಕನಸಿನ ಹುಡುಗಿಯಂತೆ ಹೊಳೆಯುತ್ತಿರುವ ರಾಜ್ಯದ ಸುಂದರ ರಸ್ತೆಗಳು)” ಎಂದು ಜಾಹೀರಾತು ನೀಡಿದ್ದರು.

ಇದನ್ನೂ ಓದಿ: School Bus Accident: ರಾಜಸ್ಥಾನದಲ್ಲಿ ಶಾಲಾ ಬಸ್ ಅಪಘಾತ; ಇಬ್ಬರು ಮಕ್ಕಳು ಸಾವು, 40 ಜನರಿಗೆ ಗಾಯ

ಹರ್ಷನ ಕೊಲೆ ವಿರುದ್ಧ ಹಿಂದೂ-ಪರ ಸಂಘಟನೆ ಕಾರ್ಯಕರ್ತರೊಂದಿಗೆ ಪ್ರತಿಭಟನೆಗಿಳಿದ ಬಿಜೆಪಿ ಶಾಸಕನಿಗೆ ಮುಖಭಂಗ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ