AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ದಿನಗಳಲ್ಲಿ ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ

Ashok Gehlot: ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲು ಮತ್ತು ಮಂಡಳಿಗಳು ಮತ್ತು ನಿಗಮಗಳಿಗೆ ರಾಜಕೀಯ ನೇಮಕಾತಿಗಳನ್ನು ಮಾಡಲು ಗೆಹ್ಲೋಟ್ ಅವರಿಗೆ ಸೂಚಿಸಲು ಹೈಕಮಾಂಡ್ ಸಜ್ಜಾಗಿದೆ. ಎಲ್ಲವೂ ಯೋಜನೆಯ ಪ್ರಕಾರ ನಡೆದರೆ, ಮುಂದಿನ ವಾರ ಗೆಹ್ಲೋಟ್ ಕ್ಯಾಬಿನೆಟ್ ವಿಸ್ತರಿಸಲಾಗುವುದು ಎಂದು ದೆಹಲಿಯ ಮೂಲಗಳು ತಿಳಿಸಿವೆ

ಕೆಲವೇ ದಿನಗಳಲ್ಲಿ ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 25, 2021 | 2:15 PM

ಚಂಡೀಗಢ:  ಪಂಜಾಬ್ ಘಟಕದಲ್ಲಿನ ಬಿಕ್ಕಟ್ಟನ್ನು ಇತ್ಯರ್ಥಪಡಿಸಿದ ಕಾಂಗ್ರೆಸ್ ಹೈಕಮಾಂಡ್ ರಾಜಸ್ಥಾನದತ್ತ ದೃಷ್ಟಿ ಹಾಯಿಸಿದೆ. ಪಕ್ಷ ಆಡಳಿತ ನಡೆಸುತ್ತಿರುವ ಮತ್ತೊಂದು ರಾಜ್ಯವಾದ ರಾಜಸ್ಥಾನದಲ್ಲಿ ಬಣಗಳ ನಡುವಿನ ಭಿನ್ನಾಭಿಪ್ರಾಯ ಈಗ ಒಂದು ವರ್ಷಕ್ಕೂ ಹೆಚ್ಚು ಕಾಲ ನಡೆಯುತ್ತಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಅವರ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಮತ್ತು ಪಕ್ಷದ ಇತರ ಮುಖಂಡರೊಂದಿಗೆ ಸಭೆ ನಡೆಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ  ಸಿ ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ಅಜಯ್ ಮಾಕೇನ್ ಶನಿವಾರ ರಾತ್ರಿ ಜೈಪುರಕ್ಕೆ ಆಗಮಿಸಿದ್ದಾರೆ .

ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲು ಮತ್ತು ಮಂಡಳಿಗಳು ಮತ್ತು ನಿಗಮಗಳಿಗೆ ರಾಜಕೀಯ ನೇಮಕಾತಿಗಳನ್ನು ಮಾಡಲು ಗೆಹ್ಲೋಟ್ ಅವರಿಗೆ ಸೂಚಿಸಲು ಹೈಕಮಾಂಡ್ ಸಜ್ಜಾಗಿದೆ. ಎಲ್ಲವೂ ಯೋಜನೆಯ ಪ್ರಕಾರ ನಡೆದರೆ, ಮುಂದಿನ ವಾರ ಗೆಹ್ಲೋಟ್ ಕ್ಯಾಬಿನೆಟ್ ವಿಸ್ತರಿಸಲಾಗುವುದು ಎಂದು ದೆಹಲಿಯ ಮೂಲಗಳು ತಿಳಿಸಿವೆ. ಪ್ರಸ್ತುತ, ಮಂತ್ರಿ ಮಂಡಳಿಯಲ್ಲಿ ಗೆಹ್ಲೋಟ್ ಸೇರಿದಂತೆ 21 ಸದಸ್ಯರು ಇದ್ದಾರೆ. ಅಂದರೆ ಅವರು ಇನ್ನೂ ಒಂಬತ್ತು ಜನರನ್ನು ತೆಗೆದುಕೊಳ್ಳಬಹುದು. ಪೈಲಟ್ ಕ್ಯಾಂಪ್ ಈ ಒಂಬತ್ತರಲ್ಲಿ ಸಿಂಹ ಪಾಲನ್ನು ಬಯಸುತ್ತಿದ್ದು ಇದನ್ನು ಗೆಹ್ಲೋಟ್ ವಿರೋಧಿಸುತ್ತಿದ್ದಾರೆ.

ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುವ 10 ಸ್ವತಂತ್ರರು, ಬಿಎಸ್ಪಿಯಿಂದ ಕಾಂಗ್ರೆಸ್​ಗೆ ಪಕ್ಷಾಂತರಗೊಂಡ ಆರು ಶಾಸಕರು ಸಹ ಸಚಿವ ಸ್ಥಾನಗಳಿಗೆ ಸ್ಪರ್ಧೆಯಲ್ಲಿದ್ದಾರೆ. ಪೈಲಟ್‌ನನ್ನು ದೆಹಲಿಗೆ ಕರೆತಂದು ಪ್ರಮುಖ ಹುದ್ದೆ ನೀಡಬಹುದೆಂಬುದು ಪಕ್ಷದಲ್ಲಿ ವದಂತಿ ಹರಿದಾಡುತ್ತಿದೆ. ಪೈಲಟ್ ಶಿಬಿರದ ಮೂಲಗಳು ಅವರ ಬೆಂಬಲಿಗರಿಗೆ ಸೂಕ್ತವಾಗಿ ಅವಕಾಶ ಕಲ್ಪಿಸಿದ ನಂತರವೇ ದೆಹಲಿಯಲ್ಲಿ ಅಥವಾ ಯಾವುದೇ ಪಕ್ಷದ ನಿಯೋಜನೆಯನ್ನು ತೆಗೆದುಕೊಳ್ಳುವುದಾಗಿ ಹೇಳಿದರು.

“ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಂವಿಧಾನ ಮತ್ತು ರಾಜಕೀಯ ನೇಮಕಾತಿಗಳ ಜೊತೆಗೆ ಕ್ಯಾಬಿನೆಟ್ ವಿಸ್ತರಣೆ ಕುರಿತು ಚರ್ಚಿಸಲು ವೇಣುಗೋಪಾಲ್ ಮತ್ತು ಮಾಕೇನ್ ರಾಜಸ್ಥಾನಕ್ಕೆ ಬರುತ್ತಿದ್ದಾರೆ” ಎಂದು ಹಿರಿಯ ಕಾಂಗ್ರೆಸ್ ಶಾಸಕರೊಬ್ಬರು ಸಂಡೇ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ. ಮುಂದಿನ ವಾರದಲ್ಲಿ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಮಾಕೇನ್ ಇತ್ತೀಚೆಗೆ ಅನೇಕ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಆದಾಗ್ಯೂ ಕ್ಯಾಬಿನೆಟ್ ವಿಸ್ತರಣೆಗೆ ಸಿಎಂ ಸಮ್ಮತಿಸಿರಲಿಲ್ಲ. ಆದರೆ ಪ್ರಧಾನ ಕಾರ್ಯದರ್ಶಿ  ಹುದ್ದೆಯನ್ನು ಅಲಂಕರಿಸಿರುವ ವೇಣುಗೋಪಾಲ್ ಅವರು ರಾಹುಲ್ ಗಾಂಧಿಗೆ ಆಪ್ತರಾಗಿದ್ದಾರೆ ಮತ್ತು ಅವರ ಮೂಲಕ ಅವರ ನಿರ್ದೇಶನಗಳನ್ನು ಗೆಹ್ಲೋಟ್‌ಗೆ ತಿಳಿಸಲು ಹೈಕಮಾಂಡ್ ನಿರ್ಧರಿಸಿದೆ ಎಂದು ತೋರುತ್ತದೆ, ”ಎಂದು ಕಾಂಗ್ರೆಸ್ಸಿನ ಮತ್ತೊಬ್ಬ ಶಾಸಕ ಹೇಳಿದರು. ಖಾಲಿ ಇರುವ ಎಲ್ಲಾ ಒಂಬತ್ತು ಕ್ಯಾಬಿನೆಟ್ ಸ್ಥಾನಗಳನ್ನು ಪೈಲಟ್ ತಂಡ ಪಡೆಯುವುದು ಅಸಂಭವ ವಿಷಯ ಎಂದು ಅವರು ಹೇಳಿದ್ದಾರೆ.

ಪ್ರವಾಸೋದ್ಯಮ, ಲೋಕೋಪಯೋಗಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜುಗಳಂತಹ ಪ್ರಮುಖ ಖಾತೆಗಳು ಪೂರ್ಣ ಸಮಯದ ಸಚಿವರಿಲ್ಲದೆ ಕಾರ್ಯನಿರ್ವಹಿಸುತ್ತಿವೆ. ಮಹಿಳಾ ಆಯೋಗ ಮತ್ತು ಅಲ್ಪಸಂಖ್ಯಾತರ ಆಯೋಗಕ್ಕೂ  ನೇಮಕಾತಿಗಳನ್ನು ಮಾಡಬೇಕಾಗಿದೆ.

ಕಳೆದ ವರ್ಷ ಜುಲೈನಲ್ಲಿ, ಅಂದಿನ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪೈಲಟ್ ಮತ್ತು ಅವರನ್ನು ಬೆಂಬಲಿಸಿದ 18 ಶಾಸಕರು ಜೈಪುರದಿಂದ ಹರಿಯಾಣದ ಮನೇಸರ್ನಲ್ಲಿ ಶಿಬಿರಕ್ಕೆ ತೆರಳಿದ ನಂತರ ರಾಜಸ್ಥಾನ್ ಕಾಂಗ್ರೆಸ್ ಬಿಕ್ಕಟ್ಟು ಶುರುವಾಗಿತ್ತು. ರಾಹುಲ್ ಗಾಂಧಿ ಪೈಲಟ್‌ನನ್ನು ಹಿಂಜರಿಸಲು ಮಧ್ಯಪ್ರವೇಶಿಸಿದರು, ಆದರೆ ಗೆಹ್ಲೋಟ್ ಆ ಸುತ್ತಿನಲ್ಲಿ ಗೆದ್ದರು, ಬಹುಪಾಲು ಶಾಸಕರು ಅವರನ್ನು ಬೆಂಬಲಿಸಿದರು. ಪೈಲಟ್ ತನ್ನ ಎರಡೂ ಹುದ್ದೆಗಳನ್ನು ಕಳೆದುಕೊಂಡರು. ಅವರ ಇಬ್ಬರು ಬೆಂಬಲಿಗರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಯಿತು. ಆದರೆ ಶಾಸಕರು ಸೇರಿದಂತೆ ಅವರ ಬೆಂಬಲಿಗರಿಗೆ ನಂತರ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಲಾಯಿತು.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಪೈಲಟ್ ಎತ್ತಿದ ಸಮಸ್ಯೆಗಳನ್ನು ಪರಿಶೀಲಿಸಲು ದಿವಂಗತ ಅಹ್ಮದ್ ಪಟೇಲ್, ವೇಣುಗೋಪಾಲ್ ಮತ್ತು ಮಾಕೇನ್ ಅವರನ್ನು ಒಳಗೊಂಡ ಮೂರು ಸದಸ್ಯರ ಸಮಿತಿಯನ್ನು ರಚಿಸಿದ್ದರು, ಆದರೆ ಅದೂ ಸ್ವಲ್ಪ ಸಮಯದ ನಂತರ ಪ್ರಭಾವ ಕಳೆದುಕೊಂಡಿತು.

ಇದನ್ನೂ ಓದಿ: ಗೆಹ್ಲೋಟ್- ಪೈಲಟ್ ಭಿನ್ನಾಭಿಪ್ರಾಯದ ನಡುವೆಯೇ ಬಿಎಸ್ಪಿಯಿಂದ ಪಕ್ಷಕ್ಕೆ ಸೇರಿದ 6 ಶಾಸಕರಿಂದ ಕಾಂಗ್ರೆಸ್​ಗೆ ಹೊಸ ತಲೆನೋವು

(Rajasthan CM Ashok Gehlot may expand Cabinet within days)

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್