AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನ

ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ಅವರು ದೆಹಲಿಯ ಏಮ್ಸ್‌ನಲ್ಲಿ ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಬುಧವಾರ ಬೆಳಿಗ್ಗೆ ವರದಿ ಮಾಡಿದೆ.

ರಾಜಸ್ಥಾನದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನ
ಗುರ್ಮೀತ್ ಸಿಂಗ್ ಕೂನರ್ ನಿಧನ
ಅಕ್ಷಯ್​ ಪಲ್ಲಮಜಲು​​
|

Updated on:Nov 15, 2023 | 11:20 AM

Share

ರಾಜಸ್ಥಾನದಲ್ಲಿ (rajasthan) ಈಗಾಗಲೇ ವಿಧಾನಸಭೆ ಚುನಾವಣೆ ರಂಗೇರಿದ್ದು, ಎಲ್ಲ ಪಕ್ಷಗಳು ಭರದಿಂದ ಪ್ರಚಾರ ಶುರು ಮಾಡಿದೆ. ಈ ನೆಡುವೆ ಕಾಂಗ್ರೆಸ್​​​ಗೆ ಒಂದು ಅಘಾತ ಎದುರಾಗಿದೆ. ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ಅವರು ದೆಹಲಿಯ ಏಮ್ಸ್‌ನಲ್ಲಿ ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಬುಧವಾರ ಬೆಳಿಗ್ಗೆ ವರದಿ ಮಾಡಿದೆ. ಗುರ್ಮೀತ್ ಸಿಂಗ್ ಕೂನರ್ ಅವರಿಗೆ 75 ವರ್ಷವಾಗಿದ್ದು, ಕರಣಪುರದ ಹಾಲಿ ಶಾಸಕರಾಗಿದ್ದರು.

ಕೂನರ್ ಅವರನ್ನು ನವೆಂಬರ್ 12 ರಂದು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ಜೆರಿಯಾಟ್ರಿಕ್ ಮೆಡಿಸಿನ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಅವರು ಸೆಪ್ಟಿಕ್ ಆಘಾತ ಮತ್ತು ಮೂತ್ರಪಿಂಡದ ಕಾಯಿಲೆಯಿಂದ ಸೆಪ್ಸಿಸ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ನೀಡಿದ ಮರಣ ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ. ಇದರ ಜತೆಗೆ ಅಧಿಕ ರಕ್ತದೊತ್ತಡದಿಂದಲೂ ಬಳಲುತ್ತಿದ್ದರು ಎಂದು ಹೇಳಲಾಗಿದೆ. ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ನಾಲ್ಕು ಸ್ಥಾನಗಳಲ್ಲಿ ಕುಟುಂಬದ ಸದಸ್ಯರ ನಡುವೆಯೇ ಪೈಪೋಟಿ

ರಾಜಸ್ಥಾನದ ಶ್ರೀಗಂಗಾನಗರದ ಪದಂಪುರ ತೆಹಸಿಲ್‌ನಲ್ಲಿ ಜನಿಸಿದ ಕೂನರ್, ಜಿಲ್ಲಾ ಘಟಕದಲ್ಲಿ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರು. 2018 ರಲ್ಲಿ, ಕೂನರ್ ಪ್ರತಿಸ್ಪರ್ಧಿ ಪೃಥ್ವಿಪಾಲ್ ಸಿಂಗ್ ಸಂಧು ಅವರನ್ನು ಸೋಲಿಸಿ, ಭಾರಿ ಬಹುಮತದಿಂದ ಗೆದ್ದರು. ಇದೀಗ ಅವರು ಮರಣದ ನಂತರ ಶ್ರೀಕರನ್‌ಪುರ ಕ್ಷೇತ್ರದ ಚುನಾವಣೆಯ ದಿನಾಂಕವನ್ನು ಮುಂದೂಡಲಾಗುತ್ತದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Wed, 15 November 23

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ