AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಕ್ಷಿಗಳನ್ನು ಮಂಗ ಹೊತ್ತೊಯ್ದಿದೆ’; ಕೊಲೆ ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯದ ಮುಂದೆ ಪೊಲೀಸರ ಹೇಳಿಕೆ

Murder Case | Rajasthan: ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯದ ಮುಂದೆ ರಾಜಸ್ಥಾನದ ಪೊಲೀಸರು ಈ ವಿಚಿತ್ರ ವಿವರಣೆಯನ್ನು ನೀಡಿದ್ದಾರೆ. ಈ ಪ್ರಕರಣದಲ್ಲಿ ತಾವು ಸಂಗ್ರಹಿಸಿದ ಸಾಕ್ಷ್ಯವನ್ನು ಮಂಗವೊಂದು ಕದ್ದೊಯ್ದಿದೆ ಎಂದು ಪೊಲೀಸರು ಹೇಳಿದ್ದಾರೆ. ಏನಿದು ಪ್ರಕರಣ? ಇಲ್ಲಿದೆ ನೋಡಿ.

‘ಸಾಕ್ಷಿಗಳನ್ನು ಮಂಗ ಹೊತ್ತೊಯ್ದಿದೆ’; ಕೊಲೆ ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯದ ಮುಂದೆ ಪೊಲೀಸರ ಹೇಳಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: shivaprasad.hs|

Updated on:May 06, 2022 | 3:49 PM

Share

ಕೊಲೆ ಪ್ರಕರಣದಲ್ಲಿ ಪ್ರಕರಣಕ್ಕೆ ಬಳಸಲಾದ ಚಾಕು ಸೇರಿದಂತೆ ಪ್ರಮುಖ ಸಾಕ್ಷಾಧಾರಗಳನ್ನು ಮಂಗವೊಂದು ಹೊತ್ತೊಯ್ದಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರೆ ಹೇಗಿದ್ದೀತು? ಇಂಥದ್ದೊಂದು ಘಟನೆ ನಡೆಯುವುದು ಅಸಾಧ್ಯ ಎಂದು ನೀವು ಯೋಚಿಸಬಹುದು. ಆದರೆ ರಾಜಸ್ಥಾನದಲ್ಲಿ (Rajasthan) ಇದು ವರದಿಯಾಗಿದೆ. ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯದ ಮುಂದೆ ರಾಜಸ್ಥಾನದ ಪೊಲೀಸರು ಈ ವಿಚಿತ್ರ ವಿವರಣೆಯನ್ನು ನೀಡಿದ್ದಾರೆ. ಈ ಪ್ರಕರಣದಲ್ಲಿ ತಾವು ಸಂಗ್ರಹಿಸಿದ ಸಾಕ್ಷ್ಯವನ್ನು ಮಂಗವೊಂದು ಕದ್ದೊಯ್ದಿದೆ ಎಂದು ಪೊಲೀಸರು ಹೇಳಿದ್ದನ್ನು ಟೈಮ್ಸ್ ಆಫ್ ಇಂಡಿಯಾ ವರದಿಮಾಡಿದೆ. ಸೆಪ್ಟೆಂಬರ್ 2016 ರಲ್ಲಿ ರಾಜಸ್ಥಾನದ ರಾಜಧಾನಿ ಜೈಪುರದ ಚಾಂದ್ವಾಜಿ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಶಿಕಾಂತ್ ಶರ್ಮಾ ಎಂಬುವರ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಅವರ ಶವ ಪತ್ತೆಯಾಗುವ ಮೊದಲು ಮೂರು ದಿನಗಳ ಕಾಲ ಅವರು ನಾಪತ್ತೆಯಾಗಿದ್ದರು. ಶರ್ಮಾ ಅವರ ಕುಟುಂಬವು ಈ ಸಾವನ್ನು ಕೊಲೆ ಎಂದು ಆರೋಪಿಸಿತ್ತು.

ಆರೋಪಿಗಳ ಬಂಧನ:

ಕುಟುಂಬಸ್ಥರ ಪ್ರತಿಭಟನೆಯ ನಂತರ ಪೊಲೀಸರು ರಾಹುಲ್ ಮತ್ತು ಮೋಹನ್ ಲಾಲ್ ಕಂಡೇರಾ ಎಂಬ ಇಬ್ಬರನ್ನು 5 ದಿನಗಳ ನಂತರ ಬಂಧಿಸಿದರು. ಇಬ್ಬರೂ ಚಂದವಾಜಿಯ ನಿವಾಸಿಗಳಾಗಿದ್ದರು. ಆರೋಪಿಗಳನ್ನು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಕೊಲೆಯ ಆಯುಧ ಸೇರಿದಂತೆ ಎಲ್ಲಾ ಪುರಾವೆಗಳನ್ನು ಹೊಂದಿರುವ ಬ್ಯಾಗ್ ಅನ್ನು ಪೊಲೀಸ್ ಠಾಣೆಯಲ್ಲಿ ಮರದ ಕೆಳಗೆ ಇಡಲಾಗಿತ್ತು. ಕಾರಣ ಅದನ್ನು ಬೇರೆಡೆ ಇಡಲು ಜಾಗವಿರಲಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ
Image
ಶವರ್ಮಾ ತಿಂದು ಬಾಲಕಿ ಸಾವು; ಆಕೆ ಸೇವಿಸಿದ ಆಹಾರದಲ್ಲಿತ್ತು ಶಿಗೆಲ್ಲ ಬ್ಯಾಕ್ಟೀರಿಯಾ, ಏನಿದು? ಇದೆಷ್ಟು ಅಪಾಯಕಾರಿ?
Image
World’s tallest Dog: ಪ್ರಪಂಚದ ಅತ್ಯಂತ ಎತ್ತರದ ಶ್ವಾನ ಎಂಬ ದಾಖಲೆ ಬರೆದ ‘ಜೀಯಸ್’; ಇಲ್ಲಿದೆ ಕುತೂಹಲಕರ ವಿಚಾರ
Image
ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಕೆ ಮೂಲಭೂತ ಹಕ್ಕು ಅಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು
Image
Swiggy: ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಬೆಂಗಳೂರು ಯುವಕ; ಡೆಲಿವರಿ ಬಾಯ್ ಏನು ಮಾಡಿದ ಗೊತ್ತಾ?

ಪ್ರಕರಣಕ್ಕೆ ಟ್ವಿಸ್ಟ್; ಸಾಕ್ಷಿ ಸಮೇತ ಓಡಿಹೋದ ಮಂಗ:

ವಿಚಾರಣೆಯು ವರ್ಷಗಳ ಕಾಲ ಹಲವಾರು ಹಂತಗಳಲ್ಲಿ ಸಾಗಿತ್ತು. ಇತ್ತೀಚೆಗೆ ನ್ಯಾಯಾಲಯವು ಸಾಕ್ಷ್ಯವನ್ನು ಪ್ರಸ್ತುತಪಡಿಸಲು ಪೊಲೀಸರನ್ನು ಕೇಳಿದಾಗ, ಅವರು ಅದನ್ನು ಕೋತಿ ಕದ್ದಿದೆ ಎಂದು ಹೇಳಿದ್ದಾರೆ. ಬ್ಯಾಗ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ 15 ಪ್ರಮುಖ ಸಾಕ್ಷ್ಯಗಳಿದ್ದವು. ಅವುಗಳು ಸಹ ಕಾಣೆಯಾಗಿವೆ. ಪೊಲೀಸರು ಕೆಳ ನ್ಯಾಯಾಲಯದಲ್ಲಿ ಲಿಖಿತ ಹೇಳಿಕೆ ನೀಡಿ ತಮ್ಮ ಬಳಿಯಿರುವ ಸಾಕ್ಷ್ಯಾಧಾರಗಳನ್ನು ಕಳವು ಮಾಡಲಾಗಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಪೊಲೀಸರ ಹೇಳಿಕೆಯಿಂದ ನ್ಯಾಯಾಲಯವು ಅಸಮಾಧಾನಗೊಂಡಿದ್ದು, ಪೊಲೀಸರಿಗೆ ನೋಟಿಸ್ ನೀಡಿದೆ. ನಂತರ ಇಲಾಖೆಯು ‘ಅಜಾಗರೂಕ’ ಕಾರ್ಯನಿರ್ವಹಣೆ ತೋರಿದ ಕಾನ್‌ಸ್ಟೆಬಲ್ ಅವರನ್ನು ದೂಷಿಸಿದೆ. ಘಟನೆಯ ನಂತರ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿದೆ. ನಂತರದಲ್ಲಿ ಅವರು ನಿವೃತ್ತರಾದರು ಮತ್ತು ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಇನ್ನಷ್ಟು ಕುತೂಹಲಕರ ವಿಚಾರ ಓದಲು ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Fri, 6 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ