AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ಚುನಾವಣೆ: ತಾಲಿಬಾನ್‌ ಅಂತ್ಯಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ, ಕಾಂಗ್ರೆಸ್​​​​ನ್ನು ಕುಟುಕಿದ ಯೋಗಿ

ರಾಜಸ್ಥಾನದ ಅಲ್ವಾರ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಸ್ರೇಲ್-ಹಮಾಸ್ ಯುದ್ಧ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಹೋರಾಟದ ನಡುವೆ ಸಮಾನಾಂತರವಾಗಿದೆ ಎಂದು ಹೇಳಿದ್ದಾರೆ. ಗಾಜಾದಲ್ಲಿ ಇಸ್ರೇಲ್​​​​​ ಹಮಾಸ್​​​ ಮನಸ್ಥಿತಿಯ್ನು ಹೇಗೆ ಹತ್ತಿಕ್ಕಲಾಗುತ್ತಿದೆ ಎಂಬುದನ್ನು ನೀವು ನೋಡುತ್ತೀರಾ. ಇದರ ಹಿಂದೆ ಗಾಜಾ ಜನರು ಮಾಡಿದ ತಪ್ಪು ಇದೆ. ಅವರು ಹಮಾಸ್​​ ಎಂಬ ಉಗ್ರ ಸಂಘಟನೆಯನ್ನು ಗೆಲ್ಲಿಸಿದಕ್ಕೆ ಈ ಪರಿಸ್ಥಿತಿ ಬಂದಿದೆ. ಇನ್ನು ಇದಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ ಎಂದು ಹೇಳಿದ್ದಾರೆ. ಇನ್ನು ಈ ತಪ್ಪುವನ್ನು ನೀವು ಮಾಡಬೇಡಿ ಎಂದು ಕಾಂಗ್ರೆಸ್​​ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ರಾಜಸ್ಥಾನ ಚುನಾವಣೆ: ತಾಲಿಬಾನ್‌ ಅಂತ್ಯಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ, ಕಾಂಗ್ರೆಸ್​​​​ನ್ನು ಕುಟುಕಿದ ಯೋಗಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Nov 02, 2023 | 12:57 PM

Share

ಪಂಚ ರಾಜ್ಯಗಳ ಚುನಾವಣೆ ಘೋಷಣೆಯಾಗಿದ್ದು, ರಾಷ್ಟ್ರೀಯ ಪಕ್ಷಗಳ ಪ್ರಚಾರ ಶುರುವಾಗಿದೆ. ಇದರಲ್ಲಿ ರಾಜಸ್ಥಾನದ ಚುನಾವಣೆ (rajasthan election) ಭಾರೀ ಗಮನಿಯವಾಗಿದೆ. ರಾಜಸ್ಥಾನದ ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (yogi adityanath) ಹೋಗಿದ್ದರು. ರಾಜಸ್ಥಾನದ ಅಲ್ವಾರ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಇಸ್ರೇಲ್-ಹಮಾಸ್ ಯುದ್ಧ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಹೋರಾಟದ ನಡುವೆ ಸಮಾನಾಂತರವಾಗಿದೆ ಎಂದು ಹೇಳಿದ್ದಾರೆ. ಗಾಜಾದಲ್ಲಿ ಇಸ್ರೇಲ್​​​​​ ಹಮಾಸ್​​​ ಮನಸ್ಥಿತಿಯ್ನು ಹೇಗೆ ಹತ್ತಿಕ್ಕಲಾಗುತ್ತಿದೆ ಎಂಬುದನ್ನು ನೀವು ನೋಡುತ್ತೀರಾ. ಇದರ ಹಿಂದೆ ಗಾಜಾ ಜನರು ಮಾಡಿದ ತಪ್ಪು ಇದೆ. ಅವರು ಹಮಾಸ್​​ ಎಂಬ ಉಗ್ರ ಸಂಘಟನೆಯನ್ನು ಗೆಲ್ಲಿಸಿದಕ್ಕೆ ಈ ಪರಿಸ್ಥಿತಿ ಬಂದಿದೆ. ಇನ್ನು ಇದಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ ಎಂದು ಹೇಳಿದ್ದಾರೆ. ಇನ್ನು ಈ ತಪ್ಪುವನ್ನು ನೀವು ಮಾಡಬೇಡಿ ಎಂದು ಕಾಂಗ್ರೆಸ್​​ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇನ್ನು ಕಾಂಗ್ರೆಸ್​​ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ “ಅರಾಜಕತೆ, ಗೂಂಡಾಗಿರಿ ಮತ್ತು ಭಯೋತ್ಪಾದನೆ ಸಮಾಜಕ್ಕೆ ಶಾಪವಾಗಿದೆ, ಸುಸಂಸ್ಕೃತ ಸಮಾಜದ ಮೇಲೆ ರಾಜಕೀಯ ದಾಳಿಗಳು ನಡೆದಾಗ ಸುಸಂಸ್ಕೃತ ಸಮಾಜದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡುತ್ತದೆ ಎಂದು ಹೇಳಿದರು. ಇನ್ನು ಕಾಂಗ್ರೆಸ್​​ ಮಾಡಿದ ತಪ್ಪುಗ ಬಗ್ಗೆ ಮಾತನಾಡಿದ ಯೋಗಿ “ಸರ್ದಾರ್ ಪಟೇಲ್ ಅವರು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿಸಿದರು. ಆದರೆ ಕಾಂಗ್ರೆಸ್​​​ ನಾಯಕ ನೆಹರು ಅವರು ಅದೊಂದು ದೊಡ್ಡ ಸಮಸ್ಯೆ ಎಂದು ಬಿಂಬಿಸಿದರು. ಇದೀಗ ಅಲ್ಲಿ ಭಯೋತ್ಪಾದನೆ ಎಂದು ದೊಡ್ಡ ಭೂತ ಸೃಷ್ಟಿಯಾಗಿದೆ. ಇದೀಗ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಅವರು ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: 5 ವರ್ಷದಲ್ಲಿ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಯೋಗಿ ಪಣ, ಸಲಹೆಗಾರರ ನೇಮಕಕ್ಕೆ ಬಿಡ್ ಕರೆದ ಉತ್ತರ ಪ್ರದೇಶ ಸರ್ಕಾರ!

ಇನ್ನು ರಾಜಸ್ಥಾನದಲ್ಲಿ ಮಹಿಳೆಯ ಮೇಲಿ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ರಾಜಸ್ಥಾನ ಸರ್ಕಾರವನ್ನು ತರಟೆಗೆ ತೆಗೆದುಕೊಂಡಿದ್ದಾರೆ. ಒಂದು ವೇಳೆ ಮತ್ತೆ ಕಾಂಗ್ರೆಸ್​​ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಬಂದರೆ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗುತ್ತಾರೆ ಎಂಬುದನ್ನು ನೆನಪಿಡಿ. ತಾಲಿಬಾನ್​​​​ ಮನಸ್ಥಿತಿಯ ಕಾಂಗ್ರೆಸ್​​​ ಅಧಿಕಾರಿಕ್ಕೆ ಬರಬಾರದು. ರಾಜಸ್ಥಾನ ಸರ್ಕಾರದ ಆಡಳಿತದಿಂದ ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಜನರು ಬದಲಾವಣೆ ಬಬಯಸಿದ್ದರೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಎಂದು ಪ್ರಧಾನಿ ಮೋದಿ ಅವರು ಈ ಹಿಂದೆ ಹೇಳಿದರು ಎಂದು ಯೋಗಿ ಆದಿತ್ಯನಾಥ್​​​ ಪ್ರಚಾರದ ವೇಳೆ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:57 pm, Thu, 2 November 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ