AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ನಿಯಂತ್ರಣ ತಪ್ಪಿ ಸೇತುವೆಯಿಂದ ರೈಲ್ವೆ ಹಳಿ ಮೇಲೆ ಬಿದ್ದ ಖಾಸಗಿ ಬಸ್, ನಾಲ್ವರು ಸಾವು, 24 ಮಂದಿಗೆ ಗಾಯ

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಖಾಸಗಿ ಬಸ್ ರೈಲ್ವೆ ಹಳಿ ಮೇಲೆ ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ದೌಸಾ ಕಲೆಕ್ಟರೇಟ್ ಸರ್ಕಲ್ ಬಳಿ ಈ ದುರಂತ ಸಂಭವಿಸಿದೆ. ಹರಿದ್ವಾರದಿಂದ 30 ಮಂದಿ ಪ್ರಯಾಣಿಕರೊಂದಿಗೆ ಜೈಪುರಕ್ಕೆ ತೆರಳುತ್ತಿದ್ದ ಬಸ್‌, ಜೈಪುರ-ದೆಹಲಿ ರೈಲ್ವೆ ಮಾರ್ಗದಲ್ಲಿ ಸ್ಕಿಡ್ ಆಗಿ ರೈಲು ಹಳಿ ಮೇಲೆ ಬಿದ್ದಿದೆ. ಅಪಘಾತದ ನಂತರ ತಕ್ಷಣವೇ ಅವ್ಯವಸ್ಥೆ ಉಂಟಾಯಿತು.

ರಾಜಸ್ಥಾನ: ನಿಯಂತ್ರಣ ತಪ್ಪಿ ಸೇತುವೆಯಿಂದ ರೈಲ್ವೆ ಹಳಿ ಮೇಲೆ ಬಿದ್ದ ಖಾಸಗಿ ಬಸ್, ನಾಲ್ವರು ಸಾವು, 24 ಮಂದಿಗೆ ಗಾಯ
ಬಸ್ Image Credit source: India.postsen
Follow us
ನಯನಾ ರಾಜೀವ್
|

Updated on:Nov 06, 2023 | 7:55 AM

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇತುವೆಯಿಂದ ರೈಲ್ವೆ ಹಳಿ ಮೇಲೆ ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ದೌಸಾ ಕಲೆಕ್ಟರೇಟ್ ಸರ್ಕಲ್ ಬಳಿ ಈ ದುರಂತ ಸಂಭವಿಸಿದೆ. ಹರಿದ್ವಾರದಿಂದ 30 ಮಂದಿ ಪ್ರಯಾಣಿಕರೊಂದಿಗೆ ಜೈಪುರಕ್ಕೆ ತೆರಳುತ್ತಿದ್ದ ಬಸ್‌, ಜೈಪುರ-ದೆಹಲಿ ರೈಲ್ವೆ ಮಾರ್ಗದಲ್ಲಿ ಸ್ಕಿಡ್ ಆಗಿ ರೈಲು ಹಳಿ ಮೇಲೆ ಬಿದ್ದಿದೆ. ಅಪಘಾತದ ನಂತರ ತಕ್ಷಣವೇ ಅವ್ಯವಸ್ಥೆ ಉಂಟಾಯಿತು.

ಸ್ಥಳೀಯರು ತಕ್ಷಣ ಧಾವಿಸಿ ರಕ್ಷಣೆ ಮಾಡಿದ್ದಾರೆ, ಕೆಲ ನಿಮಿಷದಲ್ಲೇ ಪೊಲೀಸರು, ಆ್ಯಂಬುಲೆನ್ಸ್​ ಸ್ಥಳಕ್ಕೆ ಆಗಮಿಸಿತ್ತು. ಗಾಯಗೊಂಡ ಸಂತ್ರಸ್ತರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವರದಿಗಳ ಪ್ರಕಾರ, ಗಾಯಗೊಂಡ ಹಲವರ ಪರಿಸ್ಥಿತಿ ಗಂಭೀರವಾಗಿದೆ. ಗಂಭೀರ ಸ್ಥಿತಿಯಲ್ಲಿದ್ದವರನ್ನು ಜೈಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ನಂತರ, 28 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು, ಅದರಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಮತ್ತಷ್ಟು ಓದಿ: ಹಳ್ಳಕ್ಕೆ ಬಿದ್ದ ಟೂರಿಸ್ಟ್ ಬಸ್: ಓರ್ವ ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಲುಧಿಯಾನದಲ್ಲಿ ಟ್ರಕ್‌ಗೆ ಕಾರು ಡಿಕ್ಕಿ: ನಾಲ್ವರು ಸಾವು ಭಾನುವಾರ ಪಂಜಾಬ್‌ನ ಮೋಗಾ ಜಿಲ್ಲೆಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವರ ಮತ್ತು ಅವರ 4 ವರ್ಷದ ಬಾಲಕ ಸೇರಿದಂತೆ ಕನಿಷ್ಠ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು 23 ವರ್ಷದ ಸುಖ್ವಿಂದರ್ ಸಿಂಗ್, 4 ವರ್ಷದ ಅಂಶದೀಪ್ ಕೌರ್, ಅಂಗ್ರೇಜ್ ಸಿಂಗ್ ಮತ್ತು ಸಿಮ್ರಾನ್ ಎಂದು ಗುರುತಿಸಲಾಗಿದೆ.

Published On - 7:54 am, Mon, 6 November 23

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು