AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಇಟ್ಟಿಗೆ ಗೂಡಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ, ಅತ್ಯಾಚಾರ ಶಂಕೆ

14 ವರ್ಷದ ಬಾಲಕಿಯ ಸುಟ್ಟ ದೇಹವೊಂದು ರಾಜಸ್ಥಾನದ ಭಿಲ್ವಾರದ ಇಟ್ಟಿಗೆ ಗೂಡೊಂದರಲ್ಲಿ ಪತ್ತೆಯಾಗಿದೆ. ಇದೀಗ ಈ ಘಟನೆ ರಾಜಸ್ಥಾನ ರಾಜಕೀಯದಲ್ಲಿ ದೊಡ್ಡ ತಲ್ಲಣ ಸೃಷ್ಟಿಸಿದೆ.

ರಾಜಸ್ಥಾನ: ಇಟ್ಟಿಗೆ ಗೂಡಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ, ಅತ್ಯಾಚಾರ ಶಂಕೆ
ಸಾಂದರ್ಭಿಕ ಚಿತ್ರ Image Credit source: Unsplash
ಅಕ್ಷಯ್​ ಪಲ್ಲಮಜಲು​​
|

Updated on: Aug 03, 2023 | 1:19 PM

Share

ಜೈಪುರ್, ಆ.3: 14 ವರ್ಷದ ಬಾಲಕಿಯ ಸುಟ್ಟ ದೇಹವೊಂದು ರಾಜಸ್ಥಾನ (Rajasthan) ಭಿಲ್ವಾರದ ಇಟ್ಟಿಗೆ ಗೂಡೊಂದರಲ್ಲಿ ಪತ್ತೆಯಾಗಿದೆ. ಇದೀಗ ಈ ಘಟನೆ ರಾಜಸ್ಥಾನ ರಾಜಕೀಯದಲ್ಲಿ ದೊಡ್ಡ ತಲ್ಲಣ ಸೃಷ್ಟಿಸಿದೆ. ರಾಜಸ್ಥಾನ ವಿಧಾನ ಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಇಂತಹ ಘಟನೆಗಳು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರವಿದ್ದು, ಇಂತಹ ಘಟನೆಗಳಿಗೆ ಸರ್ಕಾರ ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಮತ್ತು ಆಕೆಯ ತಾಯಿ ಗುಡ್ದದ ಕಡೆ ಮೇಕೆಗಳನ್ನು ಮೇಯಿಸಲು ಬಂದಿದ್ದು, ಈ ಸಮಯದಲ್ಲಿ ಮಗಳು ತಾಯಿಯಿಂದ ಬೇರ್ಪಟ್ಟು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಾಯಿ ತಿಳಿಸಿದ್ದಾರೆ. ಆದರೆ ಇಂದು ಬೆಳಿಗ್ಗೆ ಬಾಲಕಿ ಭಿಲ್ವಾರದ ಇಟ್ಟಿ ಗೂಡಿನಲ್ಲಿ ಹೆಣವಾಗಿ ಪತ್ತೆಯಾಗಿದ್ದಾಳೆ. ನಾಪತ್ತೆಯಾದ ದಿನದಂದು ತಾಯಿ ಮನೆಗೆ ಬಂದು ಎಲ್ಲರಿಗೂ ಈ ವಿಚಾರವನ್ನು ತಿಳಿಸಿದ್ದಾರೆ. ಆಕೆಯ ಕುಟುಂಬ ಮತ್ತು ಗ್ರಾಮಸ್ಥರು ಎಲ್ಲರೂ ಸೇರಿ ಈ ಗುಡ್ಡದಲ್ಲಿ ಬುಧವಾರ ರಾತ್ರಿಯಿಂದ ಗುರುವಾರದವರೆಗೆ (ಇಂದು) ಹುಡುಕಾಟ ನಡೆಸಿದ್ದು, ಪೊಲೀಸರಿಗೂ ದೂರು ನೀಡಿದ್ದಾರೆ. ಆದರೆ ಪೊಲೀಸರ ಈ ಬಗ್ಗೆ ತಕ್ಷಣಕ್ಕೆ ಸ್ಪಂಧಿಸಿಲ್ಲ ಎಂದು ಹೇಳಿದ್ದಾರೆ. ಆದರೆ ಇಂದು (ಆ.3) ಮುಂಜಾನೆ ಮನೆಯ ಪಕ್ಕದಲ್ಲಿರುವ ಹೊಲದಲ್ಲಿರುವ ಇಟ್ಟಿಗೆ ಗೂಡಿನಲ್ಲಿ ಸುಟ್ಟ ದೇಹವೊಂದು ಪತ್ತೆಯಾಗಿದೆ.

ಇನ್ನು ಪೊಲೀಸರು ತಿಳಿಸಿರುವಂತೆ ಬಾಲಕಿಯನ್ನು ಸುಡುವ ಮುನ್ನ ಆಕೆಯ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಶಂಕಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ಗ್ರಾಮಸ್ಥರು ಪೊಲೀಸರ ಕ್ರಮಕ್ಕೆ ಅಕ್ರೋಶ ವ್ಯಕ್ತಪಡಿಸಿದ್ದು, ನಮಗೆ ನ್ಯಾಯ ನೀಡಬೇಕು ಎಂದು ಪ್ರತಿಭಟನೆ ಮಾಡಿದ್ದಾರೆ. ನಾವು ದೂರು ನೀಡಿದ ಒಂದು ದಿನದ ನಂತರ ನಮ್ಮ ದೂರಿಗೆ ಸ್ಪಂದಿಸಿದ್ದಾರೆ. ಮಗಳು ನಾಪತ್ತೆಯಾಗಿದ್ದಾಳೆ, ಹುಡುಕಿಕೊಡಿ ಎಂದರೆ ಅವಳ ಗುರುತಿನ ಚೀಟಿ ನೀಡಿ, ಜನನ ಪ್ರಮಾಣ ಪತ್ರ ನೀಡಿ ಎಂದು ಬೇಜಾವಾಬ್ದಾರಿಯಿಂದ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಆರೋಪಗಳಿಗೆ ಕಾರಣವಾಗಿದೆ, ಬಿಜೆಪಿಯ ಮಾಜಿ ಸಚಿವರೊಬ್ಬರು ಘಟನಾ ಸ್ಥಳಕ್ಕೆ ಭೇಟಿ ನೀಡಿ. ಅಲ್ಲಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇಂತಹ ಅನೇಕ ಘಟನೆಗಳು ರಾಜಸ್ಥಾನದಲ್ಲಿ ನಡೆಯುತ್ತಿದೆ. ಜುಲೈ 14ರಂದು ನಡೆದ ಕೌರಳಿಯಲ್ಲಿ ಬಾಲಕಿಯ ಮೇಲೆ ಗುಂಡು ಹಾರಿಸಿ ಆಸಿಡ್ ಎರಚಿ ಬಾವಿಗೆ ಎಸೆದಿದ್ದರು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸರಿಯಾಗಿ ಕಾನೂನು ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಜೋಧ್‌ಪುರದಲ್ಲಿ ಜುಲೈ 19 ರಂದು ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಕೊಂದು ಅವರ ದೇಹಕ್ಕೆ ಬೆಂಕಿ ಹಚ್ಚಲಾಗಿತ್ತು ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಈ ಟೀಕೆಗೆ ತಿರುಗೆಟು ನೀಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಅತಿ ಹೆಚ್ಚು ಕೊಲೆಗಳು ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕಣಗಳು ನಡೆಯುತ್ತಿವೆ ಎಂದು ಅಂಕಿಅಂಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!