ರಾಜಸ್ಥಾನ ಸರ್ಕಾರದ ಮಹತ್ವದ ನಿರ್ಧಾರ; ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ

ರಾಜಸ್ಥಾನದಲ್ಲಿ ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಲಾಗುವುದು. ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೇ, ವರ್ಗಾವಣೆ ನೀತಿಯಲ್ಲಿ ವೈದ್ಯಕೀಯ ಇಲಾಖೆಯನ್ನು ಶಿಕ್ಷಣದೊಂದಿಗೆ ಜೋಡಿಸಲಾಗುತ್ತದೆ. ಹಾಗೇ, ಸೌರಶಕ್ತಿ ಯೋಜನೆಗಳಿಗೆ ಭೂಮಿಯನ್ನು ಮಂಜೂರು ಮಾಡಿದೆ

ರಾಜಸ್ಥಾನ ಸರ್ಕಾರದ ಮಹತ್ವದ ನಿರ್ಧಾರ; ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ
ಭಜನ್ ಲಾಲ್ ಶರ್ಮ
Follow us
|

Updated on: Sep 04, 2024 | 7:32 PM

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜಸ್ಥಾನ ಸರ್ಕಾರವು ತನ್ನ ಇತ್ತೀಚಿನ ಕ್ಯಾಬಿನೆಟ್ ಸಭೆಯಲ್ಲಿ ಪೊಲೀಸ್ ಪಡೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಅನುಮೋದಿಸಿದೆ. ಇದರ ಜೊತೆಗೆ, ರಾಜ್ಯಕ್ಕೆ ಕೈಗಾರಿಕಾ ಹೂಡಿಕೆಗಳನ್ನು ಆಕರ್ಷಿಸುವ ಪ್ರಯತ್ನಗಳ ಜೊತೆಗೆ ರಾಜ್ಯದ ಉದ್ಯೋಗಿಗಳು ಮತ್ತು ಕ್ರೀಡಾಪಟುಗಳಿಗೆ ಹೆಚ್ಚುವರಿ ಪ್ರಯೋಜನಗಳನ್ನು ಸಹ ಘೋಷಿಸಲಾಯಿತು.

ಭಜನ್ ಲಾಲ್ ಶರ್ಮ ಸರ್ಕಾರ ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ನಿರ್ಧಾರಕ್ಕೆ ಅನುಮೋದನೆ ನೀಡಿದೆ. ಇದಕ್ಕಾಗಿ ರಾಜ್ಯ ಸರಕಾರವು 1989ರ ಪೊಲೀಸ್ ಅಧೀನ ಸೇವಾ ಕಾಯಿದೆಗೆ ತಿದ್ದುಪಡಿ ತಂದಿದ್ದು, ಇದರ ಮೂಲಕ ಮಹಿಳೆಯರಿಗೆ ಈ ಪ್ರಯೋಜನವನ್ನು ನೀಡಲಾಗುವುದು. ಶಿಕ್ಷಣದ ಜತೆಗೆ ವೈದ್ಯಕೀಯ ಇಲಾಖೆಯನ್ನೂ ವರ್ಗಾವಣೆ ನೀತಿಯಲ್ಲಿ ಸೇರಿಸಿ ಪ್ರತ್ಯೇಕ ವರ್ಗಾವಣೆ ನೀತಿ ರೂಪಿಸಲಾಗುವುದು. ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗಾಗಿ, ರಾಜ್ಯ ಸರ್ಕಾರದಿಂದ ಅಧಿಕೃತ ಅಧಿಸೂಚನೆಯನ್ನು ಶೀಘ್ರದಲ್ಲೇ ಹೊರಡಿಸಲಾಗುತ್ತದೆ.

ಇದನ್ನೂ ಓದಿ: PM Modi in Singapore: ಸಿಂಗಾಪುರದಲ್ಲಿ ಪ್ರಧಾನಿ ಮೋದಿಯವರನ್ನು ನೋಡಲು ಮುಗಿಬಿದ್ದ ಭಾರತೀಯರು

ಸಂಪುಟ ಸಭೆಯ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಮಾತನಾಡಿ, ಈ ವರ್ಷ 1 ಲಕ್ಷ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ಮಹಿಳೆಯರಿಗೆ ಮೀಸಲಾತಿಯ ಲಾಭ ಸಿಗಲಿದೆ. ರಾಜಸ್ಥಾನ ಪೊಲೀಸರು ನಿನ್ನೆ ಸೆಪ್ಟೆಂಬರ್ 3ರಂದು ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಅಧಿಕೃತ ವೆಬ್‌ಸೈಟ್ police.rajasthan.gov.in ನಲ್ಲಿ ಈ ಬಗ್ಗೆ ಪರಿಶೀಲಿಸಬಹುದು.

ಸುಸ್ಥಿರ ಇಂಧನ ಉತ್ಪಾದನೆಯನ್ನು ಹೆಚ್ಚಿಸಲು, ಸೌರಶಕ್ತಿ ಯೋಜನೆಗಳಿಗೆ ಕ್ಯಾಬಿನೆಟ್ ಭೂಮಿಯನ್ನು ಹಂಚಿಕೆ ಮಾಡಿದೆ. ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆಯನ್ನು ಉತ್ತೇಜಿಸುವ ಸಂದರ್ಭದಲ್ಲಿ ರೈತರು ಮತ್ತು ಸಾರ್ವಜನಿಕರು ಸಾಕಷ್ಟು ವಿದ್ಯುತ್ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ಉಪಕ್ರಮವು ಗುರಿಯನ್ನು ಹೊಂದಿದೆ.

ಇದನ್ನೂ ಓದಿ: PM Modi Singapore Visit: 6 ವರ್ಷಗಳ ನಂತರ ಮೊದಲ ಬಾರಿಗೆ ಸಿಂಗಾಪುರಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಇದರ ಜೊತೆಗೆ, ಪ್ಯಾರಾಲಿಂಪಿಕ್ಸ್ ಮತ್ತು ಇತರ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ಹೆಚ್ಚುವರಿ ಮೀಸಲಾತಿಯನ್ನು ಸರ್ಕಾರ ಘೋಷಿಸಿತು. ನೌಕರರ ಕಲ್ಯಾಣಕ್ಕೆ ಸಂಬಂಧಿಸಿದಂತೆ, ರಾಜ್ಯ ನೌಕರರಿಗೆ ಗ್ರಾಚ್ಯುಟಿ ಮತ್ತು ಮರಣ ಗ್ರಾಚ್ಯುಟಿಯನ್ನು 20 ಲಕ್ಷದಿಂದ 25 ಲಕ್ಷಕ್ಕೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ. ಇದಲ್ಲದೆ, ಕೇಂದ್ರ ಸರ್ಕಾರದ ನಿಬಂಧನೆಗಳಿಗೆ ಅನುಗುಣವಾಗಿ ಕುಟುಂಬ ಪಿಂಚಣಿಯನ್ನು 10 ವರ್ಷಗಳವರೆಗೆ ವರ್ಧಿತ ದರದಲ್ಲಿ ಒದಗಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ