AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರನಲ್ಲಿ 3 ಎಕರೆ ಜಮೀನು; 8ನೇ ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿಗೆ ಭರ್ಜರಿ ಗಿಫ್ಟ್ ಕೊಟ್ಟ ಪತಿ

ನಮ್ಮ ಪಾರ್ಟಿಯ ಸೆಟ್ ಕೂಡಾ ಸಖತ್ ಆಗಿತ್ತು. ನಾವು ಚಂದ್ರನಲ್ಲಿ ಇದ್ದೇವೆ ಎಂದು ಭಾಸವಾಗುವಂತೆ ವೇದಿಕೆಯನ್ನು ಸಿದ್ಧಪಡಿಸಲಾಗಿತ್ತು. ಪಾರ್ಟಿಯಲ್ಲಿ ನನ್ನ ಪತಿ ಚಂದ್ರನಲ್ಲಿ ಖರೀದಿಸಿರುವ ಜಮೀನಿನ ದಾಖಲೆ ನನ್ನ ಕೈಗೆ ನೀಡಿದ್ದರು ಎಂದು ಸಪ್ನಾ ಹೇಳಿದ್ದಾರೆ.

ಚಂದ್ರನಲ್ಲಿ 3 ಎಕರೆ ಜಮೀನು; 8ನೇ ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿಗೆ ಭರ್ಜರಿ ಗಿಫ್ಟ್ ಕೊಟ್ಟ ಪತಿ
ಧರ್ಮೇಂದ್ರ- ಸಪ್ನಾ ದಂಪತಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 27, 2020 | 7:02 PM

Share

ಅಜ್ಮೇರ್: ‘ನಿನ್ನನ್ನು ಚಂದ್ರನಲ್ಲಿ ಕರೆದುಕೊಂಡು ಹೋಗುವೆ, ತಾರೆಗಳನ್ನೇ ಮುಡಿಸುವೆ’ ಎಂದು ಭರವಸೆ ನೀಡುವ ಪ್ರೇಮಿಗಳ ಸಂಭಾಷಣೆಯನ್ನು ನಾವು ಪ್ರೇಮಕಥೆ, ಕಾವ್ಯಗಳಲ್ಲಿ ಓದಿರುತ್ತೇವೆ. ಆದರೆ ರಾಜಸ್ಥಾನದ ಅಜ್ಮೇರ್ ನಿವಾಸಿಯೊಬ್ಬರು ತನ್ನ ಪತ್ನಿಗೆ ವಿವಾಹ ವಾರ್ಷಿಕೋತ್ಸವದ ಉಡುಗೊರೆಯಾಗಿ ಚಂದ್ರನಲ್ಲಿ 3 ಎಕರೆ ಜಮೀನು ಕೊಡಿಸಿದ್ದಾರೆ.

ಡಿ.24ರಂದು ಧರ್ಮೇಂದ್ರ ಅನಿಜಾ ಮತ್ತು ಸಪ್ನಾ ಅನಿಜಾ ದಂಪತಿ ತಮ್ಮ 8ನೇ ವರ್ಷದ ವಿವಾಹ ವಾರ್ಷಿಕ ಆಚರಿಸಿಕೊಂಡಿದ್ದಾರೆ. ನನ್ನ ಪತ್ನಿಗೆ ಏನಾದರೂ ವಿಶೇಷವಾದ ಉಡುಗೊರೆ ನೀಡಬೇಕು ಎಂದು ಬಯಸಿದ್ದೆ. ಎಲ್ಲರೂ ಕಾರು ಅಥವಾ ಆಭರಣಗಳನ್ನು ಉಡುಗೊರೆಯಾಗಿ ಕೊಡುತ್ತಾರೆ. ಆದರೆ ನನ್ನ ಉಡುಗೊರೆ ವಿಶೇಷವಾಗಿಯೇ ಇರಬೇಕು ಎಂದು ಚಂದ್ರನಲ್ಲಿ ಜಮೀನು ಖರೀದಿಸಿದೆ ಎಂದು ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಧರ್ಮೇಂದ್ರ ಹೇಳಿದ್ದಾರೆ.

ನ್ಯೂಯಾರ್ಕ್ ನಗರದಲ್ಲಿರುವ ಲೂನಾ ಸೊಸೈಟಿ ಇಂಟರ್​ನ್ಯಾಷನಲ್ ಮೂಲಕ ಧರ್ಮೇಂದ್ರ ಚಂದ್ರನಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಜಮೀನು ಖರೀದಿ ಪ್ರಕ್ರಿಯೆ ಪೂರ್ಣಗೊಳ್ಳಲು ಒಂದು ವರ್ಷ ಬೇಕಾಗಿ ಬಂತು. ನನಗೆ ತುಂಬಾ ಖುಷಿ ಆಗಿದೆ. ಚಂದ್ರನಲ್ಲಿ ಜಮೀನು ಖರೀದಿಸಿದ ರಾಜಸ್ಥಾನದ ಮೊದಲ ವ್ಯಕ್ತಿ ನಾನೇ ಅಂತಾರೆ ಧರ್ಮೇಂದ್ರ.

ಹೀಗೊಂದು ಉಡುಗೊರೆ ಸಿಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ನನಗೆ ತುಂಬಾ ಖುಷಿ ಆಗಿದೆ. ನಮ್ಮ ಪಾರ್ಟಿಯ ಸೆಟ್ ಕೂಡಾ ಸಖತ್ ಆಗಿತ್ತು. ನಾವು ಚಂದ್ರನಲ್ಲಿ ಇದ್ದೇವೆ ಎಂದು ಭಾಸವಾಗುವಂತೆ ವೇದಿಕೆಯನ್ನು ಸಿದ್ಧಪಡಿಸಲಾಗಿತ್ತು. ಪಾರ್ಟಿಯಲ್ಲಿ ನನ್ನ ಪತಿ ಚಂದ್ರನಲ್ಲಿ ಖರೀದಿಸಿರುವ ಜಮೀನಿನ ದಾಖಲೆ ನನ್ನ ಕೈಗೆ ನೀಡಿದ್ದರು ಎಂದು ಸಪ್ನಾ ಹೇಳಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಭೋದ್ ಗಯಾ ನಿವಾಸಿ ನೀರಜ್ ಕುಮಾರ್ ತಮ್ಮ ಹುಟ್ಟುಹಬ್ಬಕ್ಕೆ ಚಂದ್ರನಲ್ಲಿ 1 ಎಕರೆ ಜಮೀನು ಖರೀದಿಸಿ ಸುದ್ದಿಯಾಗಿದ್ದರು.

ಚಂದ್ರನಲ್ಲಿ ಇಳಿಯಲು ಹೊಸ ದಾರಿ ಹುಡುಕೋಣ; ಇಸ್ರೋ ವಿಜ್ಞಾನಿಗಳಿಗೆ ಮೋದಿ ಆತ್ಮಸ್ಥೈರ್ಯ

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ