AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರೀನಾ ಕೈಫ್ ಕೆನ್ನೆಯಂತಹ ನುಣುಪಾದ ರಸ್ತೆ ನಿರ್ಮಿಸಬೇಕು; ವಿವಾದಾತ್ಮಕ ಹೇಳಿಕೆ ನೀಡಿದ ರಾಜಸ್ಥಾನ ಸಚಿವ 

ರಾಜಸ್ಥಾನದ ಹೊಸ ಸಚಿವರೊಬ್ಬರು, ರಸ್ತೆಗಳು ಕತ್ರಿನಾ ಕೈಫ್ ಕೆನ್ನೆಯಂತೆ ನಿರ್ಮಾಣವಾಗಬೇಕು ಎಂದು ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಸಚಿವರ ಹೇಳಿಕೆ ವಿವಾದ ಸೃಷ್ಟಿಸಿದೆ.

ಕತ್ರೀನಾ ಕೈಫ್ ಕೆನ್ನೆಯಂತಹ ನುಣುಪಾದ ರಸ್ತೆ ನಿರ್ಮಿಸಬೇಕು; ವಿವಾದಾತ್ಮಕ ಹೇಳಿಕೆ ನೀಡಿದ ರಾಜಸ್ಥಾನ ಸಚಿವ 
ಸಚಿವ ರಾಜೇಂದ್ರ ಸಿಂಗ್, ಮಟಿ ಕತ್ರಿನಾ ಕೈಫ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Nov 24, 2021 | 3:19 PM

Share

ರಾಜಸ್ಥಾನ: 2005ರಲ್ಲಿ ಆಗಿನ ರೈಲ್ವೆ ಮಂತ್ರಿಯಾಗಿದ್ದ ಲಾಲು ಪ್ರಸಾದ್ ಯಾದವ್, ಬಿಹಾರದ ರಸ್ತೆಗಳು ಹೇಮಾ ಮಾಲಿನಿಯವರ ಕೆನ್ನೆಯಂತಾಗಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಹೇಳಿಕೆ ದೇಶಾದ್ಯಂತ ತೀವ್ರ ವಿವಾದ ಹುಟ್ಟುಹಾಕಿತ್ತು. ಇದೇ ಮಾದರಿಯಲ್ಲಿ ಸೈನಿಕ ಕಲ್ಯಾಣ ಖಾತೆ ರಾಜ್ಯ ಸಚಿವ ರಾಜೇಂದ್ರ ಸಿಂಗ್ ಗುಢ ಇತ್ತೀಚೆಗೆ ಹೇಳಿಕೆ ನೀಡಿದ್ದು, ರಸ್ತೆಗಳು ಕತ್ರಿನಾ ಕೈಫ್ ಕೆನ್ನೆಯಂತಾಗಬೇಕು ಎಂದಿದ್ದಾರೆ. ಇದು ಎಲ್ಲೆಡೆ ವಿವಾದಕ್ಕೆ ಕಾರಣವಾಗಿದೆ. ಮಂಗಳವಾರದಂದು ಜುಂಜು ಜಿಲ್ಲೆಯ ಪಾಂಖ್ ಗ್ರಾಮದಲ್ಲಿ ಗ್ರಾಮ ಅಭಿಯಾನವಿತ್ತು. ಅದರಲ್ಲಿ ಪಿಡಬ್ಲ್ಯುಡಿ ಇಲಾಖೆಯ ಎನ್​ಕೆ ಜೋಶಿ ವಿವರಣೆ ನೀಡುತ್ತಿದ್ದರು. ಮಧ್ಯದಲ್ಲಿ ಅವರಿಂದ ಮೈಕ್ ತೆಗೆದುಕೊಂಡ ಸಚಿವ ರಾಜೇಂದ್ರ ಸಿಂಗ್, ‘‘ರಸ್ತೆಗಳನ್ನು ಹೇಮಾ ಮಾಲಿನಿಯ ಕೆನ್ನೆಯಂತೆ ಮಾಡಬೇಕು’’ ಎಂದು ಹೇಳಿದರು. ಆದರೆ ನಂತರ ಅವರು, ಇದೀಗ ಹೇಮಾ ಮಾಲಿನಿ ಅವರಿಗೆ ವಯಸ್ಸಾಗಿದೆ ಎಂದರು. ನೆರೆದಿದ್ದ ಸಭಿಕರಲ್ಲಿ, ಈಗಿನ ಖ್ಯಾತ ನಟಿ ಯಾರು ಎಂದು ಸಚಿವರು ಕೇಳಿದರು.

ಸಭಿಕರು, ಕತ್ರಿನಾ ಕೈಫ್ ಎಂದು ಉತ್ತರಿಸಿದಾಗ, ಸಚಿವ ರಾಜೇಂದ್ರ ಸಿಂಗ್ ‘‘ರಸ್ತೆಗಳನ್ನು ಕತ್ರಿನಾ ಕೈಫ್ ಕೆನ್ನೆಯಂತೆ ಮಾಡಬೇಕು’’ ಎಂದು ನಗುತ್ತಾ ನಿರ್ದೇಶಿಸಿದರು. ಇದು ಸಭೆಯಲ್ಲೂ ನಗು ಉಕ್ಕಲು ಕಾರಣವಾಗಿದೆ. ಆದರೆ ಇದು ಎಲ್ಲೆಡೆ ವೈರಲ್ ಆಗುತ್ತಿದ್ದಂತೆ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಸಚಿವ ರಾಜೇಂದ್ರ ಸಿಂಗ್ ಮಾತನಾಡಿರುವ ವಿಡಿಯೋ ಇಲ್ಲಿದೆ:

‘ಹೇಮಾ ಮಾಲಿನಿಯವರ ಕೆನ್ನೆಯಂತೆ ರಸ್ತೆ ನಿರ್ಮಿಸಬೇಕು’; ಈ ಹೇಳಿಕೆ ಇದೇ ಮೊದಲೇನಲ್ಲ! ಮೊದಲು ಯಾರೆಲ್ಲಾ ಹೇಳಿದ್ದರು ಎಂಬ ವಿವರ ಇಲ್ಲಿದೆ: 2005 ರಲ್ಲಿ ಆಗಿನ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರು ಬಿಹಾರದ ರಸ್ತೆಗಳ ಬಗ್ಗೆ ಹೇಮಾ ಮಾಲಿನಿ ಅವರ ಕೆನ್ನೆಯಂತೆಯೇ ಇಲ್ಲಿನ ರಸ್ತೆಗಳು ಸುಗಮವಾಗಿರುತ್ತವೆ ಎಂದು ಹೇಳಿದ್ದರು. ಈ ವಿವಾದದ ನಂತರ 2013 ರಲ್ಲಿ ಆಗಿನ ಉತ್ತರ ಪ್ರದೇಶ ಸಚಿವ ರಾಜಾರಾಮ್ ಪಾಂಡೆ ಅವರು ಹೇಮಾ ಮಾಲಿನಿ ಅವರ ಕೆನ್ನೆಗಳನ್ನು ಉತ್ತಮ ರಸ್ತೆಗೆ ಹೋಲಿಸಿದ್ದರು. 2019 ರ ಅಕ್ಟೋಬರ್‌ನಲ್ಲಿ ಮಧ್ಯಪ್ರದೇಶದ ಆಗಿನ ಸಚಿವ ಪಿಸಿ ಶರ್ಮಾ ಅವರು ಇದೇ ರೀತಿಯ ಹೇಳಿಕೆ ನೀಡಿದ್ದರು. ಇದರ ನಂತರ, 2019ರ ನವೆಂಬರ್​ನಲ್ಲಿ ಛತ್ತೀಸ್‌ಗಢದ ಅಂದಿನ ಸಚಿವ ಖವಾಸಿ ಲಖ್ಮಾ ಕೂಡ ಹೇಮಾ ಮಾಲಿನಿಯ ಕೆನ್ನೆಯಂತಹ ರಸ್ತೆಗಳನ್ನು ನಿರ್ಮಿಸಲು ಹೇಳಿಕೆ ನೀಡಿದ್ದರು. ಇದೀಗ ಈ ಸಾಲಿಗೆ ರಾಜಸ್ಥಾನದ ಸಚಿವ ರಾಜೇಂದ್ರ ಸಿಂಗ್ ಕೂಡ ಸೇರ್ಪಡೆಯಾಗಿದ್ದು, ಅವರು ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ, ಕತ್ರಿನಾ ಕೈಫ್ ಕೆನ್ನೆಯನ್ನು ಉದಾಹರಿಸಿದ್ದಾರೆ.

ಹೇಮಾ ಮಾಲಿನಿ ಮಥುರಾದಿಂದ ಬಿಜೆಪಿಯ ಸಂಸದರಾಗಿ ಆಯ್ಕೆಗೊಂಡಿದ್ದರು. ಅಚ್ಚರಿಯ ವಿಚಾರವೆಂದರೆ ಇದುವರೆಗೆ ಹೇಮಾ ಮಾಲಿನಿ ಕೆನ್ನೆಯನ್ನು ರಸ್ತೆಗೆ ಹೋಲಿಸಿ ಹೇಳಿಕೆ ನೀಡಿರುವ ಎಲ್ಲಾ ಸಚಿವರೂ ಬಿಜೆಪಿಯ ವಿರೋಧ ಪಕ್ಷಗಳಿಂದ ಬಂದವರಾಗಿದ್ದಾರೆ!

ಇದನ್ನೂ ಓದಿ:

ಬಾತ್ ರೂಂ ಮತ್ತು ವಾಶ್ ಬೇಶನ್ ಪೈಪ್​ನಲ್ಲಿ ದುಡ್ಡಿನ ಕಂತೆ ಹಾಕಿದ್ದ ಪಿಡಬ್ಲೂಡಿ ಶಾಂತಗೌಡ; ವಿಡಿಯೋ ನೋಡಿ

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ

Published On - 3:08 pm, Wed, 24 November 21

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್