Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಮೇರ್​ನಲ್ಲಿ ಕುಡಿದ ನಶೆಯಲ್ಲಿ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಐಎಎಸ್​, ಐಪಿಎಸ್​ ಅಧಿಕಾರಿ ಸಮೇತ ಐವರ ಅಮಾನತು

ಅಜ್ಮೇರ್​ನಲ್ಲಿ ಕುಡಿದ ನಶೆಯಲ್ಲಿ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಐಎಎಸ್​, ಐಪಿಎಸ್ ಅಧಿಕಾರಿ ಸಮೇತ ಐವರನ್ನು ಅಮಾನತುಗೊಳಿಸಲಾಗಿದೆ

ಅಜ್ಮೇರ್​ನಲ್ಲಿ ಕುಡಿದ ನಶೆಯಲ್ಲಿ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಐಎಎಸ್​, ಐಪಿಎಸ್​ ಅಧಿಕಾರಿ ಸಮೇತ ಐವರ ಅಮಾನತು
ರಾಜಸ್ಥಾನ ಐಎಎಸ್​ ಅಧಿಕಾರಿ
Follow us
ನಯನಾ ರಾಜೀವ್
|

Updated on: Jun 16, 2023 | 8:40 AM

ಅಜ್ಮೇರ್​ನಲ್ಲಿ ಕುಡಿದ ನಶೆಯಲ್ಲಿ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಐಎಎಸ್​, ಐಪಿಎಸ್ ಅಧಿಕಾರಿ ಸಮೇತ ಐವರನ್ನು ಅಮಾನತುಗೊಳಿಸಲಾಗಿದೆ. ಐಎಎಸ್​ ಅಧಿಕಾರಿ ಗಿರಿಧರ್ ಹಾಗೂ ಐಪಿಎಸ್ ಅಧಿಕಾರಿ ಸುಶೀಲ್ ಕುಮಾರ್ ಬಿಷ್ಣೋಯ್ ಸೇರಿದಂತೆ 8 ಮಂದಿಯನ್ನು ಸರ್ಕಾರ ಅಮಾನತುಗೊಳಿಸಿದೆ. ಹೋಟೆಲ್ ಮಕ್ರನಾ ರಾಜ್ ನಲ್ಲಿ ಈ ಘಟನೆ ನಡೆದಿತ್ತು. ಐಪಿಎಸ್ ಅಧಿಕಾರಿ ಮತ್ತು ಅವರ ಸ್ನೇಹಿತರು ಸೇರಿದಂತೆ ಕೆಲವು ಪೊಲೀಸರು ಲಾಠಿಯಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಜಗಳದ ವೇಳೆ ಇಬ್ಬರೂ ಅಧಿಕಾರಿಗಳು ಪಾನಮತ್ತರಾಗಿದ್ದರು.

ಜೂನ್ 11ರ ರಾತ್ರಿ 2 ಗಂಟೆಯ ವೇಳೆಗೆ ಪ್ರಕರಣ ನಡೆದಿದೆ. ಅದರ ವಿಡಿಯೋ ಮಂಗಳವಾರ ಹೊರಬಿದ್ದಿದೆ. ವೀಡಿಯೋ ಬಹಿರಂಗವಾದ ನಂತರ ಸರ್ಕಾರ ಇಬ್ಬರೂ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಐಎಎಸ್ ಗಿರ್ಧರ್ ಅವರು ಅಜ್ಮೀರ್ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದರು. ಐಎಎಸ್ ಮತ್ತು ಐಪಿಎಸ್ ಜೊತೆಗೆ ಗೇಗಲ್ ಪೊಲೀಸ್ ಠಾಣೆಯ ಎಎಸ್‌ಐ ರೂಪರಾಮ್, ಕಾನ್‌ಸ್ಟೆಬಲ್ ಗೌತಮ್, ಮುಖೇಶ್ ಯಾದವ್, ಟೋಂಕ್‌ನ ಕಾನ್‌ಸ್ಟೆಬಲ್ ಮುಖೇಶ್ ಜಾಟ್ ಮತ್ತು ಟೋಂಕ್ ಜಿಲ್ಲೆಯ ತಹಸಿಲ್‌ನ ಜೂನಿಯರ್ ಅಸಿಸ್ಟೆಂಟ್ ಹನುಮಾನ್ ಪ್ರಸಾದ್, ಟೋಂಕ್ ಪಟ್ವಾರಿ ನರೇಂದ್ರ ಸಿಂಗ್ ದಹಿಯಾ ಅವರನ್ನು ಅಮಾನತುಗೊಳಿಸಲಾಗಿದೆ.

ಮತ್ತಷ್ಟು ಓದಿ: ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ಕಾನೂನು ಸಮರ; ಪತಿಯ ವಿರುದ್ಧ ಆ್ಯಸಿಡ್ ದಾಳಿ, ಜೀವ ಬೆದರಿಕೆ ದೂರು ದಾಖಲಿಸಿದ ವರ್ತಿಕಾ

ಶಾಂತಿ ಕದಡಿದ್ದಕ್ಕಾಗಿ ಟೋಂಕ್ ನಿವಾಸಿ ಕಾನ್‌ಸ್ಟೆಬಲ್ ಮುಖೇಶ್ ಕುಮಾರ್, ಕಿರಿಯ ಸಹಾಯಕ, ನಾಗೌರ್ ನಿವಾಸಿ ಸುರೇಂದ್ರ ಜಾಟ್, ಸಿಕರ್ ನಿವಾಸಿ ಮುಖೇಶ್ ಜಾಟ್ ಮತ್ತು ಟೋಂಕ್ ಪಟ್ವಾರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್‌ಡಿಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಮೀನು ಪಡೆದಿದ್ದಾರೆ. ಆದರೂ ಪೊಲೀಸರು ಇದನ್ನು ಖಚಿತಪಡಿಸುತ್ತಿಲ್ಲ.

ರಾಜ್ಯ ಸರ್ಕಾರವು ಇತ್ತೀಚೆಗೆ ಐಪಿಎಸ್ ಅಧಿಕಾರಿ ಸುಶೀಲ್ ಬಿಷ್ಣೋಯ್ ಅವರನ್ನು ರಾಜ್ಯದಲ್ಲಿ ಹೊಸದಾಗಿ ರಚನೆಯಾದ ಗಂಗಾಪುರ ಜಿಲ್ಲೆಯ ಒಎಸ್‌ಡಿಯಾಗಿ ನೇಮಿಸಿತ್ತು. ಘಟನೆ ಕುರಿತು ಹೋಟೆಲ್ ಮಾಲೀಕರಿಂದ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಯಾಗಿರುವ ಬಿಷ್ಣೋಯ್, ಹೋಟೆಲ್ ಉದ್ಯೋಗಿಗಳು ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್