AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪಿಎಫ್​ಐನ ಇಬ್ಬರು ಸದಸ್ಯರನ್ನು ಬಂಧಿಸಿದ ಎನ್​ಐಎ

ಜೈಪುರ ಮತ್ತು ಕೋಟಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ, ಜೊತೆಗೆ ಪಿಎಫ್‌ಐನ ಇತರ ಮೂವರು ಕೂಡ ವಶಕ್ಕೆ ಪಡೆದಿದೆ.

ರಾಜಸ್ಥಾನ: ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪಿಎಫ್​ಐನ ಇಬ್ಬರು ಸದಸ್ಯರನ್ನು ಬಂಧಿಸಿದ ಎನ್​ಐಎ
ಎನ್​ಐಎImage Credit source: The Economic Times
ನಯನಾ ರಾಜೀವ್
|

Updated on: Nov 03, 2023 | 7:21 PM

Share

ಜೈಪುರ ಮತ್ತು ಕೋಟಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ, ಜೊತೆಗೆ ಪಿಎಫ್‌ಐನ ಇತರ ಮೂವರು ಕೂಡ ವಶಕ್ಕೆ ಪಡೆದಿದೆ.

ಎನ್‌ಐಎ ಪ್ರಕಾರ, ಬಂಧಿತರನ್ನು ವಾಜಿದ್ ಅಲಿ ಮತ್ತು ಮುಬಾರಿಕ್ ಅಲಿ ಎಂದು ಗುರುತಿಸಲಾಗಿದೆ, ಜೊತೆಗೆ ಪಿಎಫ್‌ಐನ ಇತರ ಮೂವರು ಸದಸ್ಯರಾದ ಮೊಹಮ್ಮದ್ ಆಸಿಫ್, ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಸೊಹೈಲ್​ನನ್ನು ಕೂಡ ವಶಕ್ಕೆ ಪಡೆದಿದೆ.

2047 ರ ವೇಳೆಗೆ ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಕೇಂದ್ರ ಸರ್ಕಾರವನ್ನು ಹಿಂಸಾತ್ಮಕ ಕೃತ್ಯಗಳ ಮೂಲಕ ಉರುಳಿಸುವುದು ಅವರ ಗುರಿಯಾಗಿದೆ.

ಮತ್ತಷ್ಟು ಓದಿ: ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ

ರಾಜಸ್ಥಾನ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಮತ್ತು ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಮುಸ್ಲಿಂ ಯುವಕರನ್ನು ತೊಡಗಿಸಿಕೊಳ್ಳುವಲ್ಲಿ ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಆಸಿಫ್ ಭಾಗಿಯಾಗಿದ್ದಾರೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.

NIA ಪ್ರಕಾರ, PFI ಝಕಾತ್ (ಸಾಮಾಜಿಕ ಅಭಿವೃದ್ಧಿಗಾಗಿ ಒಂದು ರೀತಿಯ ದತ್ತಿ ನಿಧಿ) ಸೋಗಿನಲ್ಲಿ ಮುಸ್ಲಿಂ ಸಮುದಾಯದ ಸದಸ್ಯರಿಂದ ಹಣವನ್ನು ಸಂಗ್ರಹಿಸಿದೆ ಆದರೆ ಶಸ್ತ್ರಾಸ್ತ್ರ ತರಬೇತುದಾರರನ್ನು ಬೆಂಬಲಿಸಲು ಮತ್ತು ತರಬೇತಿ ಶಿಬಿರಗಳನ್ನು ಆಯೋಜಿಸುತ್ತದೆ. PFI ಅನ್ನು ಕೇಂದ್ರ ಸರ್ಕಾರವು ಸೆಪ್ಟೆಂಬರ್ 2022 ರಲ್ಲಿ ನಿಷೇಧಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ