AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪಿಎಫ್​ಐನ ಇಬ್ಬರು ಸದಸ್ಯರನ್ನು ಬಂಧಿಸಿದ ಎನ್​ಐಎ

ಜೈಪುರ ಮತ್ತು ಕೋಟಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ, ಜೊತೆಗೆ ಪಿಎಫ್‌ಐನ ಇತರ ಮೂವರು ಕೂಡ ವಶಕ್ಕೆ ಪಡೆದಿದೆ.

ರಾಜಸ್ಥಾನ: ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪಿಎಫ್​ಐನ ಇಬ್ಬರು ಸದಸ್ಯರನ್ನು ಬಂಧಿಸಿದ ಎನ್​ಐಎ
ಎನ್​ಐಎImage Credit source: The Economic Times
ನಯನಾ ರಾಜೀವ್
|

Updated on: Nov 03, 2023 | 7:21 PM

Share

ಜೈಪುರ ಮತ್ತು ಕೋಟಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ, ಜೊತೆಗೆ ಪಿಎಫ್‌ಐನ ಇತರ ಮೂವರು ಕೂಡ ವಶಕ್ಕೆ ಪಡೆದಿದೆ.

ಎನ್‌ಐಎ ಪ್ರಕಾರ, ಬಂಧಿತರನ್ನು ವಾಜಿದ್ ಅಲಿ ಮತ್ತು ಮುಬಾರಿಕ್ ಅಲಿ ಎಂದು ಗುರುತಿಸಲಾಗಿದೆ, ಜೊತೆಗೆ ಪಿಎಫ್‌ಐನ ಇತರ ಮೂವರು ಸದಸ್ಯರಾದ ಮೊಹಮ್ಮದ್ ಆಸಿಫ್, ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಸೊಹೈಲ್​ನನ್ನು ಕೂಡ ವಶಕ್ಕೆ ಪಡೆದಿದೆ.

2047 ರ ವೇಳೆಗೆ ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಕೇಂದ್ರ ಸರ್ಕಾರವನ್ನು ಹಿಂಸಾತ್ಮಕ ಕೃತ್ಯಗಳ ಮೂಲಕ ಉರುಳಿಸುವುದು ಅವರ ಗುರಿಯಾಗಿದೆ.

ಮತ್ತಷ್ಟು ಓದಿ: ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ

ರಾಜಸ್ಥಾನ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಮತ್ತು ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಮುಸ್ಲಿಂ ಯುವಕರನ್ನು ತೊಡಗಿಸಿಕೊಳ್ಳುವಲ್ಲಿ ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಆಸಿಫ್ ಭಾಗಿಯಾಗಿದ್ದಾರೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.

NIA ಪ್ರಕಾರ, PFI ಝಕಾತ್ (ಸಾಮಾಜಿಕ ಅಭಿವೃದ್ಧಿಗಾಗಿ ಒಂದು ರೀತಿಯ ದತ್ತಿ ನಿಧಿ) ಸೋಗಿನಲ್ಲಿ ಮುಸ್ಲಿಂ ಸಮುದಾಯದ ಸದಸ್ಯರಿಂದ ಹಣವನ್ನು ಸಂಗ್ರಹಿಸಿದೆ ಆದರೆ ಶಸ್ತ್ರಾಸ್ತ್ರ ತರಬೇತುದಾರರನ್ನು ಬೆಂಬಲಿಸಲು ಮತ್ತು ತರಬೇತಿ ಶಿಬಿರಗಳನ್ನು ಆಯೋಜಿಸುತ್ತದೆ. PFI ಅನ್ನು ಕೇಂದ್ರ ಸರ್ಕಾರವು ಸೆಪ್ಟೆಂಬರ್ 2022 ರಲ್ಲಿ ನಿಷೇಧಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ