AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಧಪುರದಲ್ಲಿ ರಂಜಾನ್ ಈದ್ ವೇಳೆ ಘರ್ಷಣೆ: ಈವರೆಗೆ 52 ಬಂಧನ

ರಂಜಾನ್ ಈದ್ ವೇಳೆ ರಾಜಸ್ಥಾನದ ಜೋಧಪುರದಲ್ಲಿ ನಡೆದಿದ್ದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 52 ಬಂಧಿಸಿರುವ ರಾಜಸ್ಥಾನ ಪೊಲೀಸರು, 42 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜೋಧಪುರದಲ್ಲಿ ರಂಜಾನ್ ಈದ್ ವೇಳೆ ಘರ್ಷಣೆ: ಈವರೆಗೆ 52 ಬಂಧನ
ರಂಜಾನ್ ಹಬ್ಬದ ದಿನ ಜೋಧಪುರದಲ್ಲಿ ನಡೆದಿದ್ದ ಹಿಂಸಾಚಾರ
TV9 Web
| Edited By: |

Updated on:May 04, 2022 | 11:26 AM

Share

ಜೈಪುರ: ರಂಜಾನ್ ಈದ್ ವೇಳೆ ರಾಜಸ್ಥಾನದ ಜೋಧಪುರದಲ್ಲಿ ನಡೆದಿದ್ದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 52 ಬಂಧಿಸಿರುವ ರಾಜಸ್ಥಾನ ಪೊಲೀಸರು, 42 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ತವರು ನಗರ ಜೋಧಪುರದಲ್ಲಿ ರಂಜಾನ್ ಈದ್ ದಿನದ ಸಂಜೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಘರ್ಷಣೆ ನಡೆದಿತ್ತು.

ಉದಯ್ ಮಂದಿರ ಮತ್ತು ನಾಗೋರಿ ಗೇಟ್ ಸೇರಿದಂತೆ ಜೋಧಪುರದ ಹಲವು ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿದಿದೆ. ಗಾಳಿಸುದ್ದಿ ಹರಡುವುದನ್ನು ತಡೆಯುವ ಉದ್ದೇಶದಿಂದ ಇಂಟರ್ನೆಟ್​ನಿರ್ಬಂಧಿಸಲಾಗಿದೆ.

ಜಾಲೋರಿ ಗೇಟ್ ಸರ್ಕಲ್​ನಲ್ಲಿ ಈದ್ ಬಾವುಟಗಳನ್ನು ಹಾರಿಸಿದ ನಂತರ ಎರಡೂ ಸಮುದಾಯಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ನಡೆದ ಕಲ್ಲುತೂರಾಟದಲಲ್ಲಿ ಐವರು ಪೊಲೀಸರು ಸೇರಿ ಹಲವರು ಗಾಯಗೊಂಡಿದ್ದರು. ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್​ಗಳನ್ನು ಸಿಡಿಸಿದ್ದರು. ಮೂರು ದಿನಗಳ ಪರಶುರಾಮ ಜಯಂತಿ ಸಂದರ್ಭದಲ್ಲಿಯೇ ಈ ಘರ್ಷಣೆ ನಡೆದಿದೆ.

ಹಿಂಸಾಚಾರದಲ್ಲಿ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ದೂರಿದ್ದರು. ‘ಹಣದುಬ್ಬರ, ನಿರುದ್ಯೋಗ ಹೆಚ್ಚಾಗಿದೆ. ಆರ್ಥಿಕ ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾಗಿರುವ ಬಿಜೆಪಿ ಇಂಥ ಕ್ಷುಲ್ಲಕ ರಾಜಕಾರಣದ ಮೂಲಕ ಜನರ ಗಮನ ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ ಎಂದು ದೂರಿದದರು. ದೆಹಲಿ, ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧೆಡೆ ಸಂಭವಿಸಿದ್ದ ಕೋಮು ಗಲಭೆಗಳ ಸಾಲಿಗೆ ಜೋಧಪುರವು ಹೊಸ ಸೇರ್ಪಡೆಯಾಗಿದೆ.

ಇದನ್ನೂ ಓದಿ: ನನ್ನ ರಾಜೀನಾಮೆ ಪತ್ರ ಯಾವಾಗಲೂ ಸೋನಿಯಾ ಗಾಂಧಿ ಬಳಿಯೇ ಇರುತ್ತದೆ: ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​

ಇದನ್ನೂ ಓದಿ: ರಾಜಸ್ಥಾನದಲ್ಲಿ 300 ವರ್ಷ ಹಳೆಯ ಶಿವನ ದೇವಸ್ಥಾನ ನೆಲಸಮ; ಗೆಹ್ಲೋಟ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

Published On - 11:26 am, Wed, 4 May 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ