AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಧಪುರದಲ್ಲಿ ರಂಜಾನ್ ಈದ್ ವೇಳೆ ಘರ್ಷಣೆ: ಈವರೆಗೆ 52 ಬಂಧನ

ರಂಜಾನ್ ಈದ್ ವೇಳೆ ರಾಜಸ್ಥಾನದ ಜೋಧಪುರದಲ್ಲಿ ನಡೆದಿದ್ದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 52 ಬಂಧಿಸಿರುವ ರಾಜಸ್ಥಾನ ಪೊಲೀಸರು, 42 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜೋಧಪುರದಲ್ಲಿ ರಂಜಾನ್ ಈದ್ ವೇಳೆ ಘರ್ಷಣೆ: ಈವರೆಗೆ 52 ಬಂಧನ
ರಂಜಾನ್ ಹಬ್ಬದ ದಿನ ಜೋಧಪುರದಲ್ಲಿ ನಡೆದಿದ್ದ ಹಿಂಸಾಚಾರ
TV9 Web
| Edited By: |

Updated on:May 04, 2022 | 11:26 AM

Share

ಜೈಪುರ: ರಂಜಾನ್ ಈದ್ ವೇಳೆ ರಾಜಸ್ಥಾನದ ಜೋಧಪುರದಲ್ಲಿ ನಡೆದಿದ್ದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 52 ಬಂಧಿಸಿರುವ ರಾಜಸ್ಥಾನ ಪೊಲೀಸರು, 42 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ತವರು ನಗರ ಜೋಧಪುರದಲ್ಲಿ ರಂಜಾನ್ ಈದ್ ದಿನದ ಸಂಜೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಘರ್ಷಣೆ ನಡೆದಿತ್ತು.

ಉದಯ್ ಮಂದಿರ ಮತ್ತು ನಾಗೋರಿ ಗೇಟ್ ಸೇರಿದಂತೆ ಜೋಧಪುರದ ಹಲವು ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿದಿದೆ. ಗಾಳಿಸುದ್ದಿ ಹರಡುವುದನ್ನು ತಡೆಯುವ ಉದ್ದೇಶದಿಂದ ಇಂಟರ್ನೆಟ್​ನಿರ್ಬಂಧಿಸಲಾಗಿದೆ.

ಜಾಲೋರಿ ಗೇಟ್ ಸರ್ಕಲ್​ನಲ್ಲಿ ಈದ್ ಬಾವುಟಗಳನ್ನು ಹಾರಿಸಿದ ನಂತರ ಎರಡೂ ಸಮುದಾಯಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ನಡೆದ ಕಲ್ಲುತೂರಾಟದಲಲ್ಲಿ ಐವರು ಪೊಲೀಸರು ಸೇರಿ ಹಲವರು ಗಾಯಗೊಂಡಿದ್ದರು. ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್​ಗಳನ್ನು ಸಿಡಿಸಿದ್ದರು. ಮೂರು ದಿನಗಳ ಪರಶುರಾಮ ಜಯಂತಿ ಸಂದರ್ಭದಲ್ಲಿಯೇ ಈ ಘರ್ಷಣೆ ನಡೆದಿದೆ.

ಹಿಂಸಾಚಾರದಲ್ಲಿ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ದೂರಿದ್ದರು. ‘ಹಣದುಬ್ಬರ, ನಿರುದ್ಯೋಗ ಹೆಚ್ಚಾಗಿದೆ. ಆರ್ಥಿಕ ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾಗಿರುವ ಬಿಜೆಪಿ ಇಂಥ ಕ್ಷುಲ್ಲಕ ರಾಜಕಾರಣದ ಮೂಲಕ ಜನರ ಗಮನ ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ ಎಂದು ದೂರಿದದರು. ದೆಹಲಿ, ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧೆಡೆ ಸಂಭವಿಸಿದ್ದ ಕೋಮು ಗಲಭೆಗಳ ಸಾಲಿಗೆ ಜೋಧಪುರವು ಹೊಸ ಸೇರ್ಪಡೆಯಾಗಿದೆ.

ಇದನ್ನೂ ಓದಿ: ನನ್ನ ರಾಜೀನಾಮೆ ಪತ್ರ ಯಾವಾಗಲೂ ಸೋನಿಯಾ ಗಾಂಧಿ ಬಳಿಯೇ ಇರುತ್ತದೆ: ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​

ಇದನ್ನೂ ಓದಿ: ರಾಜಸ್ಥಾನದಲ್ಲಿ 300 ವರ್ಷ ಹಳೆಯ ಶಿವನ ದೇವಸ್ಥಾನ ನೆಲಸಮ; ಗೆಹ್ಲೋಟ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

Published On - 11:26 am, Wed, 4 May 22

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?