AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷದಿಂದ ಹೊರನಡೆದಿರುವ ಸಚಿನ್ ಪೈಲಟ್​ರಿಂದ ಹೊಸ ಬಾಂಬ್!

ಪುರಾತನ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ರಾಜಸ್ಥಾನದ ಯುವ ವರ್ಚಸ್ವೀ ನಾಯಕ ಸಚಿನ್ ಪೈಲಟ್ ಹೊಸ ಬಾಂಬ್ ಹಾಕಿದ್ದಾರೆ. ಪೈಲಟ್ ತಮ್ಮ ಜೊತೆಗೆ 20-30 ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಹೊರತದು ಸೀದಾ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದೇ ರಾಜಕೀಯ ಪಡಿತರು ಭಾವಿಸಿದ್ದರು. ಆದ್ರೆ ಈ ಬೆಳವಣಿಗೆಗಳಿಗೆ ತಣ್ಣೀರು ಎರಚಿರುವ ಸಚಿನ್ ಪೈಲಟ್​ ತಾನು ಬಿಜೆಪಿಯತ್ತ ಹೋಗುವ ಮನಸ್ಸು ಮಾಡಿಲ್ಲ. ನಾನು ಮತ್ತೊಮ್ಮೆ ಪುನರುಚ್ಚರಿಸುವೆ ನಾನು ಬಿಜೆಪಿ ಜೊತೆ ಕೈಜೋಡಿಸುತ್ತಿಲ್ಲ. ಬಿಜೆಪಿ ಪಕ್ಷಕ್ಕೆ ಹೋಗಿತ್ತೇನೆ ಎಂಬುದು ಕೇವಲ ನನ್ನ ಹೆಸರಿಗೆ, […]

ಕಾಂಗ್ರೆಸ್ ಪಕ್ಷದಿಂದ ಹೊರನಡೆದಿರುವ ಸಚಿನ್ ಪೈಲಟ್​ರಿಂದ ಹೊಸ ಬಾಂಬ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 15, 2020 | 11:05 AM

Share

ಪುರಾತನ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ರಾಜಸ್ಥಾನದ ಯುವ ವರ್ಚಸ್ವೀ ನಾಯಕ ಸಚಿನ್ ಪೈಲಟ್ ಹೊಸ ಬಾಂಬ್ ಹಾಕಿದ್ದಾರೆ. ಪೈಲಟ್ ತಮ್ಮ ಜೊತೆಗೆ 20-30 ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಹೊರತದು ಸೀದಾ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದೇ ರಾಜಕೀಯ ಪಡಿತರು ಭಾವಿಸಿದ್ದರು.

ಆದ್ರೆ ಈ ಬೆಳವಣಿಗೆಗಳಿಗೆ ತಣ್ಣೀರು ಎರಚಿರುವ ಸಚಿನ್ ಪೈಲಟ್​ ತಾನು ಬಿಜೆಪಿಯತ್ತ ಹೋಗುವ ಮನಸ್ಸು ಮಾಡಿಲ್ಲ. ನಾನು ಮತ್ತೊಮ್ಮೆ ಪುನರುಚ್ಚರಿಸುವೆ ನಾನು ಬಿಜೆಪಿ ಜೊತೆ ಕೈಜೋಡಿಸುತ್ತಿಲ್ಲ. ಬಿಜೆಪಿ ಪಕ್ಷಕ್ಕೆ ಹೋಗಿತ್ತೇನೆ ಎಂಬುದು ಕೇವಲ ನನ್ನ ಹೆಸರಿಗೆ, ನನ್ನ ರಾಜಕೀಯ ಭವಿಷ್ಯಕ್ಕೆ ಕಳಂಕ ತರುವ ಯತ್ನಗಳಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಬಹಳಷ್ಟು ಶ್ರಮಿಸಿರುವೆ. ನಾನು ಕಾಂಗ್ರೆಸ್​ ತೊರೆಯುವುದಿಲ್ಲ. ನಾನಿನ್ನೂ ಕಾಂಗ್ರೆಸ್​ ಪಕ್ಷದಲ್ಲಿಯೇ ಇದ್ದೇನೆ ಎಂದು ಹೇಳಿದ್ದಾರೆ. ಕುತೂಹಲಕಾರಿ ಸಂಗತಿಯೆಂದ್ರೆ ಕಳೆದ ಒಂದು ವಾರದಿಂದ ತಾನು ಕಾಂಗ್ರೆಸ್ ಪಕ್ಷದಿಂದ ವಿಮುಖವಾಗುತ್ತಿರುವುದಾಗಿ ಪೈಲಟ್ ಹೇಳಿದ್ದರು. ತದನಂತರ ಕಾಂಗ್ರೆಸ್ ಪಕ್ಷದ ಅತಿರಥ ಮಹಾರಥರು ಹತ್ತಾರು ದೂರವಾಣಿ ಕರೆಗಳನ್ನು ಮಾಡಿ, ​ಪೈಲಟ್​ರನ್ನು ಸಮಧಾನಪಡಿಸಲು ಯತ್ನಿಸಿದ್ದರಾದರೂ ಪೈಲಟ್ ಆ ಯಾವುದೇ ದೂರವಾಣಿ ಕರೆಗಳನ್ನು ಸ್ವೀಕರಿಸಿರಲಿಲ್ಲ.

Published On - 11:00 am, Wed, 15 July 20

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ