ಕಾಂಗ್ರೆಸ್ ಪಕ್ಷದಿಂದ ಹೊರನಡೆದಿರುವ ಸಚಿನ್ ಪೈಲಟ್​ರಿಂದ ಹೊಸ ಬಾಂಬ್!

ಪುರಾತನ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ರಾಜಸ್ಥಾನದ ಯುವ ವರ್ಚಸ್ವೀ ನಾಯಕ ಸಚಿನ್ ಪೈಲಟ್ ಹೊಸ ಬಾಂಬ್ ಹಾಕಿದ್ದಾರೆ. ಪೈಲಟ್ ತಮ್ಮ ಜೊತೆಗೆ 20-30 ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಹೊರತದು ಸೀದಾ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದೇ ರಾಜಕೀಯ ಪಡಿತರು ಭಾವಿಸಿದ್ದರು. ಆದ್ರೆ ಈ ಬೆಳವಣಿಗೆಗಳಿಗೆ ತಣ್ಣೀರು ಎರಚಿರುವ ಸಚಿನ್ ಪೈಲಟ್​ ತಾನು ಬಿಜೆಪಿಯತ್ತ ಹೋಗುವ ಮನಸ್ಸು ಮಾಡಿಲ್ಲ. ನಾನು ಮತ್ತೊಮ್ಮೆ ಪುನರುಚ್ಚರಿಸುವೆ ನಾನು ಬಿಜೆಪಿ ಜೊತೆ ಕೈಜೋಡಿಸುತ್ತಿಲ್ಲ. ಬಿಜೆಪಿ ಪಕ್ಷಕ್ಕೆ ಹೋಗಿತ್ತೇನೆ ಎಂಬುದು ಕೇವಲ ನನ್ನ ಹೆಸರಿಗೆ, […]

ಕಾಂಗ್ರೆಸ್ ಪಕ್ಷದಿಂದ ಹೊರನಡೆದಿರುವ ಸಚಿನ್ ಪೈಲಟ್​ರಿಂದ ಹೊಸ ಬಾಂಬ್!
ಸಾಧು ಶ್ರೀನಾಥ್​

Updated on: Jul 15, 2020 | 11:05 AM

ಪುರಾತನ ಕಾಂಗ್ರೆಸ್ ಪಕ್ಷದಿಂದ ಹೊರಬಂದಿರುವ ರಾಜಸ್ಥಾನದ ಯುವ ವರ್ಚಸ್ವೀ ನಾಯಕ ಸಚಿನ್ ಪೈಲಟ್ ಹೊಸ ಬಾಂಬ್ ಹಾಕಿದ್ದಾರೆ. ಪೈಲಟ್ ತಮ್ಮ ಜೊತೆಗೆ 20-30 ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಹೊರತದು ಸೀದಾ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದೇ ರಾಜಕೀಯ ಪಡಿತರು ಭಾವಿಸಿದ್ದರು.

ಆದ್ರೆ ಈ ಬೆಳವಣಿಗೆಗಳಿಗೆ ತಣ್ಣೀರು ಎರಚಿರುವ ಸಚಿನ್ ಪೈಲಟ್​ ತಾನು ಬಿಜೆಪಿಯತ್ತ ಹೋಗುವ ಮನಸ್ಸು ಮಾಡಿಲ್ಲ. ನಾನು ಮತ್ತೊಮ್ಮೆ ಪುನರುಚ್ಚರಿಸುವೆ ನಾನು ಬಿಜೆಪಿ ಜೊತೆ ಕೈಜೋಡಿಸುತ್ತಿಲ್ಲ. ಬಿಜೆಪಿ ಪಕ್ಷಕ್ಕೆ ಹೋಗಿತ್ತೇನೆ ಎಂಬುದು ಕೇವಲ ನನ್ನ ಹೆಸರಿಗೆ, ನನ್ನ ರಾಜಕೀಯ ಭವಿಷ್ಯಕ್ಕೆ ಕಳಂಕ ತರುವ ಯತ್ನಗಳಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಬಹಳಷ್ಟು ಶ್ರಮಿಸಿರುವೆ. ನಾನು ಕಾಂಗ್ರೆಸ್​ ತೊರೆಯುವುದಿಲ್ಲ. ನಾನಿನ್ನೂ ಕಾಂಗ್ರೆಸ್​ ಪಕ್ಷದಲ್ಲಿಯೇ ಇದ್ದೇನೆ ಎಂದು ಹೇಳಿದ್ದಾರೆ. ಕುತೂಹಲಕಾರಿ ಸಂಗತಿಯೆಂದ್ರೆ ಕಳೆದ ಒಂದು ವಾರದಿಂದ ತಾನು ಕಾಂಗ್ರೆಸ್ ಪಕ್ಷದಿಂದ ವಿಮುಖವಾಗುತ್ತಿರುವುದಾಗಿ ಪೈಲಟ್ ಹೇಳಿದ್ದರು. ತದನಂತರ ಕಾಂಗ್ರೆಸ್ ಪಕ್ಷದ ಅತಿರಥ ಮಹಾರಥರು ಹತ್ತಾರು ದೂರವಾಣಿ ಕರೆಗಳನ್ನು ಮಾಡಿ, ​ಪೈಲಟ್​ರನ್ನು ಸಮಧಾನಪಡಿಸಲು ಯತ್ನಿಸಿದ್ದರಾದರೂ ಪೈಲಟ್ ಆ ಯಾವುದೇ ದೂರವಾಣಿ ಕರೆಗಳನ್ನು ಸ್ವೀಕರಿಸಿರಲಿಲ್ಲ.

Published On - 11:00 am, Wed, 15 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us