AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Politics: 2020ರಲ್ಲಿ ರಾಜಸ್ಥಾನ ಸರ್ಕಾರವನ್ನು ಕಾಪಾಡಿದ್ದು ವಸುಂಧರಾ ರಾಜೇ ಎಂಬ ಗೆಹ್ಲೋಟ್ ಹೇಳಿಕೆಗೆ ತಿರುಗೇಟು

2020ರಲ್ಲಿ ತಮ್ಮದೇ ಪಕ್ಷದ ಶಾಸಕರು ಬಂಡಾಯ ಎದ್ದಿದ್ದಾಗ ವಸುಂಧರಾ ರಾಜೇ(Vasundhara Raje) ಹಾಗೂ ಇಬ್ಬರು ಬಿಜೆಪಿ ಶಾಸಕರು ಸರ್ಕಾರ ಉಳಿಸಲು ಸಹಾಯ ಮಾಡಿದ್ದರು ಎನ್ನುವ ಅಶೋಕ್ ಗೆಹ್ಲೋಟ್ ಹೇಳಿಕೆಗೆ ವಸುಂಧರಾ ರಾಜೇ ತಿರುಗೇಟು ನೀಡಿದ್ದಾರೆ

Rajasthan Politics: 2020ರಲ್ಲಿ ರಾಜಸ್ಥಾನ ಸರ್ಕಾರವನ್ನು ಕಾಪಾಡಿದ್ದು ವಸುಂಧರಾ ರಾಜೇ ಎಂಬ ಗೆಹ್ಲೋಟ್ ಹೇಳಿಕೆಗೆ ತಿರುಗೇಟು
ವಸುಂಧರಾ ರಾಜೇ, ಅಶೋಕ್ ಗೆಹ್ಲೋಟ್Image Credit source: Republicworld.com
ನಯನಾ ರಾಜೀವ್
|

Updated on: May 08, 2023 | 8:43 AM

Share

2020ರಲ್ಲಿ ತಮ್ಮದೇ ಪಕ್ಷದ ಶಾಸಕರು ಬಂಡಾಯ ಎದ್ದಿದ್ದಾಗ ವಸುಂಧರಾ ರಾಜೇ(Vasundhara Raje) ಹಾಗೂ ಇಬ್ಬರು ಬಿಜೆಪಿ ಶಾಸಕರು ಸರ್ಕಾರ ಉಳಿಸಲು ಸಹಾಯ ಮಾಡಿದ್ದರು ಎನ್ನುವ ಅಶೋಕ್ ಗೆಹ್ಲೋಟ್ ಹೇಳಿಕೆಗೆ ವಸುಂಧರಾ ರಾಜೇ ತಿರುಗೇಟು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸುಳ್ಳು ಹೇಳುತ್ತಿದ್ದಾರೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಹೇಳಿದ್ದಾರೆ.

ಲಂಚ ಪಡೆಯುವುದು ಮತ್ತು ನೀಡುವುದು ಎರಡೂ ಅಪರಾಧ ಎಂದು ವಸುಂಧರಾ ರಾಜೆ ಹೇಳಿದ್ದಾರೆ. ಅವರ ಶಾಸಕರು ಹಣ ತೆಗೆದುಕೊಂಡಿದ್ದರೆ, ಎಫ್‌ಐಆರ್ ದಾಖಲಿಸಿ. ಅವರದೇ ಪಕ್ಷದಲ್ಲಿ ಬಂಡಾಯವೆದ್ದು ಜನಸಮೂಹ ಪಾತಾಳಕ್ಕೆ ಹೋಗುತ್ತಿದೆ ಎಂಬ ಕಾರಣಕ್ಕೆ ಸಿಟ್ಟಿನಲ್ಲಿ ಈ ರೀತಿ ಅತಿರೇಕದ ಹಾಗೂ ಸತ್ಯವಲ್ಲದ ಆರೋಪಗಳನ್ನು ಮಾಡುವುದೇಕೆ ಎಂದಿದ್ದಾರೆ.

ಮುಖ್ಯಮಂತ್ರಿ ಗೆಹ್ಲೋಟ್ ನನ್ನನ್ನು ಹೊಗಳಿರುವುದು ನನ್ನ ವಿರುದ್ಧದ ದೊಡ್ಡ ಷಡ್ಯಂತ್ರ. ಜೀವನದಲ್ಲಿ ಗೆಹ್ಲೋಟ್ ನನ್ನನ್ನು ಅವಮಾನಿಸಿದಷ್ಟು ಯಾರೂ ಅವಮಾನಿಸಲು ಸಾಧ್ಯವಿಲ್ಲ. 2023 ರ ಚುನಾವಣೆಯಲ್ಲಿ ಐತಿಹಾಸಿಕ ಸೋಲನ್ನು ತಪ್ಪಿಸಲು ಅವರು ಇಂತಹ ಕಪೋಲಕಲ್ಪಿತ ಕಥೆಗಳನ್ನು ರಚಿಸುತ್ತಿದ್ದಾರೆ, ಇದು ದುರದೃಷ್ಟಕರ ಆದರೆ ಅವರ ಕುತಂತ್ರವು ಯಶಸ್ವಿಯಾಗುವುದಿಲ್ಲ.

ಮತ್ತಷ್ಟು ಓದಿ: ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಜಗಳದ ನಡುವೆಯೇ ರಾಜಸ್ಥಾನ ಕಾಂಗ್ರೆಸ್​​ನಲ್ಲಿ ಶೀಘ್ರದಲ್ಲೇ ಮೇಜರ್ ಸರ್ಜರಿ?

ಅಶೋಕ್ ಗೆಹ್ಲೋಟ್​ ಹೇಳಿದ್ದೇನು? ಸಚಿನ್ ಪೈಲಟ್ ನೇತೃತ್ವದಲ್ಲಿ ಬಂಡಾಯವೆದ್ದಿದ್ದ ಕಾಂಗ್ರೆಸ್ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯಿಂದ ಅವರು ಪಡೆದಿದ್ದ ಹಣವನ್ನು ಮರಳಿಸಲಿ. ಇದರಿಂದ ಅವರು ಯಾವುದೇ ಒತ್ತಡವಿಲ್ಲದೆ ತಮ್ಮ ಕೆಲಸ ಮಾಡಿಕೊಳ್ಳಬಹುದು ಎಂದು ಗೆಹ್ಲೋಟ್ ಸಲಹೆ ನೀಡಿದ್ದಾರೆ.

2020ರ ಜುಲೈನಲ್ಲಿ ಸಚಿನ್ ಪೈಲಟ್ ಮತ್ತು 18 ಇತರೆ ಶಾಸಕರು ಗೆಹ್ಲೋಟ್ ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದರು. ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನಗೊಳ್ಳುವುದು ನಿಶ್ಚಿತ ಎಂದು ಹೇಳಲಾಗಿತ್ತು. ಸುಮಾರು ಒಂದು ತಿಂಗಳ ಗೊಂದಲ ಬಳಿಕ ಹೈಕಮಾಂಡ್ ಮಧ್ಯಪ್ರವೇಶದೊಂದಿಗೆ ಕೊನೆಗೂ ಬಂಡಾಯ ಶಮನಗೊಂಡಿತ್ತು.

ಆಗ ರಾಜಸ್ಥಾನದ ಡಿಸಿಎಂ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸಚಿನ್ ಪೈಲಟ್ ಅವರನ್ನು ಆ ಹುದ್ದೆಗಳಿಂದ ಕಿತ್ತು ಹಾಕಲಾಗಿತ್ತು. ಧೋಲ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗೆಹ್ಲೋಟ್, ಮೂರು ವರ್ಷದ ಹಿಂದೆ ತಮ್ಮ ಸರ್ಕಾರ ಉಳಿಯಲು ಸಾಧ್ಯವಾಗಿದ್ದು ಬಿಜೆಪಿಯ ಮೂವರು ನಾಯಕರಿಂದ ಎಂದು ಮಾಜಿ ಸಿಎಂ ವಸುಂಧರಾ ರಾಜೇ, ಮಾಜಿ ವಿಧಾನಸಭೆ ಸ್ಪೀಕರ್ ಕೈಲಾಶ್ ಮೇಘವಾಲ್ ಮತ್ತು ಶಾಸಕಿ ಶೋಭರಾಣಿ ಕುಶ್ವಾಹ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

2020ರ ಜುಲೈನಲ್ಲಿ, ಸಚಿನ್ ಪೈಲಟ್ ಮತ್ತು ಅವರ 18 ನಿಷ್ಠಾವಂತರು ಗೆಹ್ಲೋಟ್ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದರು. ಆದರೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಧ್ಯಪ್ರವೇಶದ ನಂತರ ಒಂದು ತಿಂಗಳ ಬಳಿಕ ಬಿಕ್ಕಟ್ಟು ಕೊನೆಗೊಂಡಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ