AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Politics: ರಾಜಸ್ಥಾನ ಕಾಂಗ್ರೆಸ್‌ ಆಂತರಿಕ ಕಲಹ: ಪಕ್ಷದಿಂದ ಹಾರಲು ಸಜ್ಜಾಗುತ್ತಿರುವ ಪೈಲಟ್‌

ರಾಜಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಮುಂದಿನ ರಾಜಕೀಯ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್​ನಲ್ಲಿಯೇ ಉಳಿಯುತ್ತಾರೋ ಅಥವಾ ಬಿಜೆಪಿ ಜತೆಗೆ ಕೈಜೋಡಿಸುತ್ತಾರೋ ಅಥವಾ ಏಕಾಂಗಿಯಾಗಿ ಹೊಸ ಪಕ್ಷವನ್ನು ಆರಂಭಿಸುತ್ತಾರೋ ಎನ್ನುವ ಚರ್ಚೆ ರಾಜಸ್ಥಾನ ರಾಜಕೀಯದಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿದೆ.

Rajasthan Politics: ರಾಜಸ್ಥಾನ ಕಾಂಗ್ರೆಸ್‌ ಆಂತರಿಕ ಕಲಹ: ಪಕ್ಷದಿಂದ ಹಾರಲು ಸಜ್ಜಾಗುತ್ತಿರುವ ಪೈಲಟ್‌
ಸಚಿನ್ ಪೈಲಟ್
ನಯನಾ ರಾಜೀವ್
|

Updated on: Jun 07, 2023 | 10:24 AM

Share

ರಾಜಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್(Sachin Pilot)  ಅವರ ಮುಂದಿನ ರಾಜಕೀಯ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್​ನಲ್ಲಿಯೇ ಉಳಿಯುತ್ತಾರೋ ಅಥವಾ ಬಿಜೆಪಿ ಜತೆಗೆ ಕೈಜೋಡಿಸುತ್ತಾರೋ ಅಥವಾ ಏಕಾಂಗಿಯಾಗಿ ಹೊಸ ಪಕ್ಷವನ್ನು ಆರಂಭಿಸುತ್ತಾರೋ ಎನ್ನುವ ಚರ್ಚೆ ರಾಜಸ್ಥಾನ ರಾಜಕೀಯದಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿದೆ. ರಾಜಸ್ಥಾನ ಮುಖ್ಯಮಮತ್ರಿ ಅಶೋಕ್ ಗೆಹ್ಲೋಟ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಆಂತರಿಕ ಕಲಹ ಮೂರ್ನಾಲ್ಕು ವರ್ಷಗಳಿಂದ ನಡೆಯುತ್ತಲೇ ಇದೆ. ಇದು ಈಗ ತಾರಕಕ್ಕೇರಿದ್ದು, ಮಲ್ಲಿಕಾರ್ಜುನ ಖರ್ಗೆಯ ಸಂಧಾನದ ಬಳಿಕವೂ ಸಚಿನ್ ಪೈಲಟ್ ಸಮಾಧಾನಗೊಂಡಿಲ್ಲ ಎನ್ನಲಾಗುತ್ತಿದೆ.

ಸಚಿನ್ ಪೈಲಟ್ ಅವರು ತಮ್ಮದೇ ಪಕ್ಷದ ಸರ್ಕಾರದ ಮುಂದೆ ಮೂರು ಬೇಡಿಕೆಗಳನ್ನು ಇಟ್ಟುಕೊಂಡು 15 ದಿನಗಳ ಗಡುವು ನೀಡಿದ್ದರು. ಈ ಮೂರು ಬೇಡಿಕೆಗಳು ಪ್ರಸ್ತುತ ಸನ್ನಿವೇಶದಲ್ಲಿ ಈಡೇರಿಸಲು ಗೆಹ್ಲೋಟ್ ಅವರಿಗೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಮೇ 29 ರಂದು ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ್ದರು. ಹೀಗಾಗಿ ಸಚಿನ್ ಪೈಲಟ್ ತಂದೆ ರಾಜೇಶ್ ಪೈಲಟ್ ಅವರ ಪುಣ್ಯ ತಿಥಿಯಾದ ಜೂನ್ 11 ರಂದು ಹೊಸ ಪಕ್ಷದ ಘೋಷಣೆ ಮಾಡುತ್ತಾರೆ ಅಥವಾ ತಮ್ಮ ರಾಜಕೀಯ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಸಚಿನ್ ಪೈಲಟ್ ಬೆಂಬಲಿಗರು ಹೇಳುತ್ತಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದಲ್ಲಿ ಜನಸಂಘರ್ಷ್ ಯಾತ್ರೆ: ನಾವು ಕರ್ನಾಟಕದ ಕಾಂಗ್ರೆಸ್ ಪಕ್ಷದಿಂದ ಕಲಿಯಬೇಕು ಎಂದ ಸಚಿನ್ ಪೈಲಟ್

ಆದರೆ ರಾಜಸ್ಥಾನ ಚುನಾವಣೆಗೆ ಇನ್ನೂ ಸಮಯವಿರುವ ಹಿನ್ನೆಲೆಯಲ್ಲಿ ಇಷ್ಟು ಬೇಗ ಸಚಿನ್ ಪೈಲಟ್ ನಿರ್ಧಾರ ಪ್ರಕಟಿಸುತ್ತಾರೆಯೋ ಅಥವಾ ಏನು ಮಾಡುತ್ತಾರೆ ಎನ್ನುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಎಷ್ಟೇ ಪ್ರಯತ್ನ ಮಾಡಿದರೂ ಸಚಿನ್ ಪೈಲಟ್ ಬೇರೆಯದ್ದೇ ಹಾದಿಯನ್ನು ಆರಿಸಿಕೊಂಡಿದ್ದಾರೆ. ಇನ್ನು ಕಾಂಗ್ರೆಸ್‌ನಲ್ಲಿ ಇರುವುದಿಲ್ಲ ಎಂದು ಬಹಳ ದಿನಗಳ ಹಿಂದೆಯೇ ನಿರ್ಧರಿಸಿದ್ದರು. ಮೇ 15 ರಂದು ಜೈಪುರದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪೈಲಟ್ ಘೋಷಿಸಿದ್ದನ್ನು ನೆನಪಿಸಿಕೊಳ್ಳಬಹುದು. ಆದರೆ ಕಾಂಗ್ರೆಸ್ ಮಾತ್ರ ಪೈಲಟ್ ಕಾಂಗ್ರೆಸ್​ನಲ್ಲಿಯೇ ಇರಲಿದ್ದಾರೆ ಎಂದು ಹೇಳುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ