AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾಗೆ 8 ಖಾತೆ; ದಿಯಾ ಕುಮಾರಿ ಹಣಕಾಸು ಸಚಿವೆ

ಜೈಪುರದ ಹಿಂದಿನ ರಾಜಮನೆತನಕ್ಕೆ ಸೇರಿದ ಉಪಮುಖ್ಯಮಂತ್ರಿ ದಿಯಾ ಕುಮಾರಿ  ಅವರಿಗೆ ಹಣಕಾಸು ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಆರು ಇಲಾಖೆಗಳು ಮತ್ತು ಉಪ ಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಅವರಿಗೆ ಉನ್ನತ ಶಿಕ್ಷಣ ಇಲಾಖೆ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸೇರಿದಂತೆ ನಾಲ್ಕು ಇಲಾಖೆ ಜವಾಬ್ದಾರಿ ನೀಡಲಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾಗೆ 8 ಖಾತೆ; ದಿಯಾ ಕುಮಾರಿ ಹಣಕಾಸು ಸಚಿವೆ
ಭಜನ್ ಲಾಲ್ ಶರ್ಮಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 05, 2024 | 5:53 PM

Share

ಜೈಪುರ ಜನವರಿ 05: ರಾಜಸ್ಥಾನದ (Rajasthan) ನೂತನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ (Bhajan Lal Sharma) ಅವರು ಗೃಹ ಸೇರಿದಂತೆ ಎಂಟು ಖಾತೆಗಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಹೊಸ ಬಿಜೆಪಿ (BJP) ಆಡಳಿತದಲ್ಲಿ ಯಾರು ಯಾವ ಜವಾಬ್ದಾರಿಗಳನ್ನು ನಿಭಾಯಿಸುತ್ತಾರೆ ಎಂಬುದನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಬಹುತೇಕ ನಾಯಕರು ಮೊದಲ ಬಾರಿಗೆ ಸಚಿವರಾಗಿದ್ದಾರೆ. ಕಾಂಗ್ರೆಸ್ (Congress) ಅನ್ನು ಕೆಳಗಿಳಿಸಿ ಹೊಸ ಬಿಜೆಪಿ ಸರ್ಕಾರ ರಚನೆಯಾದ 15 ದಿನಗಳ ನಂತರ ಖಾತೆಗಳ ಘೋಷಣೆ ಕೂಡ ಬಂದಿದೆ.

ಬಿಜೆಪಿ ಎಚ್ಚರಿಕೆಯಿಂದ ನೀಡಬೇಕಾದ ಜವಾಬ್ದಾರಿಗಳ ಪಟ್ಟಿ ಮಾಡಿದ್ದು, ಅದಕ್ಕಾಗಿಯೇ ಬಹು ನಿರೀಕ್ಷಿತ ಘೋಷಣೆ ಮಾಡಲು ಇಷ್ಟು ಸಮಯ ತೆಗೆದುಕೊಂಡಿತು ಎನ್ನಲಾಗುತ್ತಿದೆ.

ಜೈಪುರದ ಹಿಂದಿನ ರಾಜಮನೆತನಕ್ಕೆ ಸೇರಿದ ಉಪಮುಖ್ಯಮಂತ್ರಿ ದಿಯಾ ಕುಮಾರಿ  ಅವರಿಗೆ ಹಣಕಾಸು ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಆರು ಇಲಾಖೆಗಳು ಮತ್ತು ಉಪ ಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಅವರಿಗೆ ಉನ್ನತ ಶಿಕ್ಷಣ ಇಲಾಖೆ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸೇರಿದಂತೆ ನಾಲ್ಕು ಇಲಾಖೆ ಜವಾಬ್ದಾರಿ ನೀಡಲಾಗಿದೆ.

ಕ್ಯಾಬಿನೆಟ್ ಸಚಿವ ಕಿರೋಡಿ ಲಾಲ್ ಮೀನಾ ಅವರಿಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಕೈಗಾರಿಕೆ ಮತ್ತು ವಾಣಿಜ್ಯ, ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ:ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆ: ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾಗೆ ಸಚಿವ ಸ್ಥಾನ 

ಗಜೇಂದ್ರ ಸಿಂಗ್ ಖಿಮ್ಸರ್ ಅವರಿಗೆ ವೈದ್ಯಕೀಯ ಆರೋಗ್ಯ ಮತ್ತು ವಿಜ್ಞಾನ (ಇಎಸ್ಐ) ಮತ್ತು ಮದನ್ ದಿಲಾವರ್ ಶಿಕ್ಷಣ ( ಪ್ರಾಥಮಿಕ ಮತ್ತು ಪ್ರೌಢ), ಸಂಸ್ಕೃತ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವರ ಖಾತೆ ನೀಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!