ರಾಜಸ್ಥಾನ: ಆರೋಪಿ ಬಂಧನಕ್ಕೆ ಒತ್ತಾಯಿಸಿ ಬೃಹತ್ ನೀರಿನ ಟ್ಯಾಂಕ್​ ಏರಿ ಪ್ರತಿಭಟಿಸಿದ ಅತ್ಯಾಚಾರ ಸಂತ್ರಸ್ತೆ

ರಾಜಸ್ಥಾನದ ದೌಸಾ ಜಿಲ್ಲೆಯ ಸಿಕಂದರಾ ಪೊಲೀಸ್ ಠಾಣೆಯಲ್ಲಿ ಒಂದು ತಿಂಗಳ ಹಿಂದೆ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಕಳೆದ ಒಂದು ತಿಂಗಳು ಕಳೆದರೂ ಆರೋಪಿಯನ್ನು ಬಂಧಿಸದ ಕಾರಣ ಬೇಸರಗೊಂಡಿರುವ ಅತ್ಯಾಚಾರ ಸಂತ್ರಸ್ತೆ ಇಂದು ನೀರಿನ ಟ್ಯಾಂಕ್ ಮೇಲೆ ಹತ್ತಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ರಾಜಸ್ಥಾನ: ಆರೋಪಿ ಬಂಧನಕ್ಕೆ ಒತ್ತಾಯಿಸಿ ಬೃಹತ್ ನೀರಿನ ಟ್ಯಾಂಕ್​ ಏರಿ ಪ್ರತಿಭಟಿಸಿದ ಅತ್ಯಾಚಾರ ಸಂತ್ರಸ್ತೆ

Updated on: Feb 13, 2024 | 9:12 AM

ಅತ್ಯಾಚಾರ ಸಂತ್ರಸ್ತೆಯೊಬ್ಬರು ಬೃಹತ್ ನೀರಿನ ಟ್ಯಾಂಕ್​ ಏರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಘಟನೆ ನಡೆದು ಒಂದು ತಿಂಗಳಾದರೂ ಅತ್ಯಾಚಾರಿಯನ್ನು ಬಂಧಿಸದ ಕುರಿತು ಬೇಸರ ವ್ಯಕ್ತಪಡಿಸಿದರು, ಕೂಡಲೇ ಆತನನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮಹಿಳೆ ನೀರಿನ ಟ್ಯಾಂಕ್‌ ಏರಿದ್ದಾಳೆ. ಮಹಿಳೆಯ ಪ್ರಕಾರ ಆರೋಪಿ ವಿರುದ್ಧ ತಿಂಗಳ ಹಿಂದೆಯೇ ದೂರು ನೀಡಿದ್ದಳು.

ಆಕೆಯ ದೂರಿನ ಆಧಾರದ ಮೇಲೆ, ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಅವರು ಮ್ಯಾಜಿಸ್ಟ್ರೇಟ್‌ಗೆ ತನ್ನ ಹೇಳಿಕೆಯನ್ನು ಸಹ ದಾಖಲಿಸಿದ್ದಾರೆ. ಆದರೆ, ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ. ಇದರಿಂದ ಮನನೊಂದ ಮಹಿಳೆ ನೀರಿನ ಟ್ಯಾಂಕ್ ಹತ್ತಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಸುಮಾರು 3 ಗಂಟೆಗಳ ಕಾಲ ನೀರಿನ ಟ್ಯಾಂಕ್​ ಮೇಲೆಯೇ ಇದ್ದರು.

ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮಹಿಳೆಯನ್ನು ಕೆಳಗಿಳಿಸುವಂತೆ ಮನವೊಲಿಸಿದರು.
ಆಕೆಯ ಆತಂಕವನ್ನು ಆಲಿಸಿದ ಪೊಲೀಸರು ಭರವಸೆ ನೀಡಿದಾಗ, ಮಹಿಳೆ ನೀರಿನ ಟ್ಯಾಂಕ್​ನಿಂದ ಕೆಳಗಿಳಿದಿದ್ದಾರೆ.
ಪೊಲೀಸರು ಮಹಿಳೆಯನ್ನು ನೀರಿನ ಟ್ಯಾಂಕ್‌ನಿಂದ ಹೊರತೆಗೆದು ಮಹಿಳಾ ಅಪರಾಧ ಮತ್ತು ಸಂಶೋಧನಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಕಳುಹಿಸಿದ್ದಾರೆ.

ಮತ್ತಷ್ಟು ಓದಿ: ಕೊಪ್ಪಳ: ಪತಿಯನ್ನು ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರ, ಐವರು ಆರೋಪಿಗಳು ಅರೆಸ್ಟ್

ಸಂತ್ರಸ್ತೆಯ ಹೇಳಿಕೆಯನ್ನು ಎಲ್ಲಿ ದಾಖಲಿಸಲಾಗುತ್ತದೆ. ಇಡೀ ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಆಕೆಯ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳೆಗೆ ಭರವಸೆ ನೀಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:07 am, Tue, 13 February 24

Loading...
Unable to load recommendations.
Follow Us