AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ 11 ಮಂದಿಯಲ್ಲಿ ಕಪ್ಪಾ ರೂಪಾಂತರಿ ವೈರಸ್​; ನಿರ್ಲಕ್ಷ್ಯ ಮಾಡುವ ವಿಚಾರವಲ್ಲವೆಂದ ಆರೋಗ್ಯ ಸಚಿವ

ಕಪ್ಪಾ ರೂಪಾಂತರಿ ವೈರಸ್​ ಭಾರತದಲ್ಲಿ ಮೊದಲು ಪತ್ತೆಯಾಗಿದ್ದು 2020ರ ಅಕ್ಟೋಬರ್​​ನಲ್ಲಿ. ಇದು ಕೊರೊನಾದ ಎರಡು ಬಾರಿ ರೂಪಾಂತರಗೊಂಡ ತಳಿಯಾಗಿದೆ. ಡೆಲ್ಟಾದಷ್ಟು ಅಪಾಯಕಾರಿ ಅಲ್ಲದಿದ್ದರೂ ನಿರ್ಲಕ್ಷ್ಯ ಮಾಡುವಂಥದ್ದಲ್ಲ.

ರಾಜಸ್ಥಾನದಲ್ಲಿ 11 ಮಂದಿಯಲ್ಲಿ ಕಪ್ಪಾ ರೂಪಾಂತರಿ ವೈರಸ್​; ನಿರ್ಲಕ್ಷ್ಯ ಮಾಡುವ ವಿಚಾರವಲ್ಲವೆಂದ ಆರೋಗ್ಯ ಸಚಿವ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 14, 2021 | 8:59 AM

Share

ಜೈಪುರ: ಕೊವಿಡ್-19 (Covid 19) ಸೋಂಕಿನ ಒಂದೊಂದೇ ರೂಪಾಂತರಿ ವೈರಸ್​ಗಳು ಹೊರಬರುತ್ತಲೇ ಇದ್ದು, ಆತಂಕ ಸೃಷ್ಟಿಸುತ್ತಿವೆ. ಕೊವಿಡ್​ 19 ರೂಪಾಂತರಿಗಳಲ್ಲಿ ಒಂದಾದ ಕಪ್ಪಾ ಹಾವಳಿ ಶುರುವಾಗಿದ್ದು, ರಾಜಸ್ಥಾನದಲ್ಲಿ 11 ಜನರಲ್ಲಿ ಈ ಕಪ್ಪಾ ವೈರಸ್​ (Kappa Variant) ಕಾಣಿಸಿಕೊಂಡಿದೆ. ಈ ವಿಚಾರವನ್ನು ಆರೋಗ್ಯ ಸಚಿವ ರಘು ಶರ್ಮಾ ತಿಳಿಸಿದ್ದಾರೆ.

11 ಜನರಲ್ಲಿ ಕಪ್ಪಾ ಸೋಂಕು ಕಾಣಿಸಿಕೊಂಡಿದೆ, ಅವರಲ್ಲಿ ಇಬ್ಬರು ಅಳ್ವಾರ್​ನವರು, ಇಬ್ಬರು ಜೈಪುರದವರು, ಇಬ್ಬರು ಬಾರ್ಮರ್​ ಮತ್ತು ಒಬ್ಬ ಭಿಲ್ವಾರಾದವರು ಎಂದು ರಘು ಶರ್ಮಾ ತಿಳಿಸಿದ್ದಾರೆ. ಈ ಹನ್ನೊಂದು ಮಂದಿಯಲ್ಲಿ 9 ಮಂದಿಯ ಮಾದರಿಯನ್ನು ದೆಹಲಿಯ ಐಜಿಐಬಿ ಪ್ರಯೋಗಾಲಯ ತಪಾಸಣೆ ಮಾಡಿ, ಕಪ್ಪಾ ಸೋಂಕು ತಗುಲಿದ್ದನ್ನು ದೃಢಪಡಿಸಿತ್ತು. ಹಾಗೇ ಇನ್ನಿಬ್ಬರ ಮಾದರಿಗಳನ್ನು ಜೈಪುರದ ಎಸ್​ಎಂಎಸ್​ ಮೆಡಿಕಲ್​ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪರೀಕ್ಷಿಸಲಾಗಿತ್ತು ಎಂದೂ ಅವರು ತಿಳಿಸಿದ್ದಾರೆ. ಕಪ್ಪಾ ರೂಪಾಂತರಿ ವೈರಸ್​ ಡೆಲ್ಟಾಕ್ಕೆ ಹೋಲಿಸಿದರೆ ಸ್ವಲ್ಪ ಸೌಮ್ಯವಾಗಿದೆ. ಆದರೆ ನಿರ್ಲಕ್ಷಿಸುವಂತಿಲ್ಲ. ಸಾರ್ವಜನಿಕರು ಕೊವಿಡ್​ 19 ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದೂ ರಘು ಶರ್ಮಾ ಹೇಳಿದ್ದಾರೆ.

ಕಪ್ಪಾ ರೂಪಾಂತರಿ ವೈರಸ್​ ಭಾರತದಲ್ಲಿ ಮೊದಲು ಪತ್ತೆಯಾಗಿದ್ದು 2020ರ ಅಕ್ಟೋಬರ್​​ನಲ್ಲಿ. ಇದು ಕೊರೊನಾದ ಎರಡು ಬಾರಿ ರೂಪಾಂತರಗೊಂಡ ತಳಿಯಾಗಿದೆ. ಡೆಲ್ಟಾದಷ್ಟು ಅಪಾಯಕಾರಿ ಅಲ್ಲದಿದ್ದರೂ ನಿರ್ಲಕ್ಷ್ಯ ಮಾಡುವಂಥದ್ದಲ್ಲ. ಲಸಿಕೆ ತೆಗೆದುಕೊಂಡವರಿಗೆ ಇದು ಅಷ್ಟಾಗಿ ಬಾಧಿಸಲಾರದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ರಾಜಸ್ಥಾನದಲ್ಲಿ 107 ಮಂದಿಯಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್ ಪತ್ತೆಯಾಗಿದೆ.

ಇದನ್ನೂ ಓದಿ: Safe Driving Tips: ಮಳೆಗಾಲದಲ್ಲಿ ವಾಹನ ಚಲಾಯಿಸುವುದು ಅಷ್ಟು ಸುಲಭವಲ್ಲ; ಸಂಚರಿಸುವಾಗ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ

(Rajasthan Records 11 Cases Of Kappa Variant)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ