AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ವೈದ್ಯರ ಎಡವಟ್ಟು; ಮಗನ ಬದಲಿಗೆ ಪಾರ್ಶ್ವವಾಯು ಪೀಡಿತ ತಂದೆಗೆ ಆಪರೇಷನ್!

ರಾಜಸ್ಥಾನದಲ್ಲಿ ಮನೀಶ್ ಎಂಬ ವ್ಯಕ್ತಿ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಆಪರೇಷನ್ ಮಾಡಬೇಕಾಗಿತ್ತು. ಆದರೆ, ಆತನ ಬದಲಿಗೆ ಆತನ ಪಾರ್ಶ್ವವಾಯು ಪೀಡಿತ ತಂದೆಗೆ ವೈದ್ಯರು ಆಪರೇಷನ್ ಮಾಡಿದ್ದಾರೆ. ಆತ ತನ್ನ ತಂದೆಯ ದೇಹದ ಮೇಲೆ ಹೊಲಿಗೆಗಳನ್ನು ಗಮನಿಸಿದ ನಂತರ ತನ್ನ ತಂದೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಕಂಡುಕೊಂಡಿದ್ದಾರೆ. ಆಸ್ಪತ್ರೆಯ ಆಡಳಿತ ಮಂಡಳಿ ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ಕೆಲವೇ ದಿನಗಳಲ್ಲಿ ವರದಿಯನ್ನು ನೀಡುವ ಭರವಸೆ ನೀಡಿದೆ. ಈ ಘಟನೆಯು ಆಸ್ಪತ್ರೆಯಲ್ಲಿ ರೋಗಿಯ ಗುರುತಿನ ಪ್ರೋಟೋಕಾಲ್‌ಗಳು ಮತ್ತು ಶಸ್ತ್ರಚಿಕಿತ್ಸಾ ಸುರಕ್ಷತೆಯ ಬಗ್ಗೆ ಗಂಭೀರ ಕಳವಳಗಳನ್ನು ಸೃಷ್ಟಿಸಿದೆ.

ರಾಜಸ್ಥಾನದಲ್ಲಿ ವೈದ್ಯರ ಎಡವಟ್ಟು; ಮಗನ ಬದಲಿಗೆ ಪಾರ್ಶ್ವವಾಯು ಪೀಡಿತ ತಂದೆಗೆ ಆಪರೇಷನ್!
Operation
ಸುಷ್ಮಾ ಚಕ್ರೆ
|

Updated on: Apr 17, 2025 | 9:43 PM

Share

ಜೈಪುರ, ಏಪ್ರಿಲ್ 17: ರಾಜಸ್ಥಾನದ (Rajasthan) ಕೋಟಾ ವೈದ್ಯಕೀಯ ಕಾಲೇಜಿನ ವೈದ್ಯರು ದೊಡ್ಡ ಎಡವಟ್ಟು ಮಾಡಿ ಸುದ್ದಿಯಲ್ಲಿದ್ದಾರೆ. ಈ ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಪಘಾತಕ್ಕೊಳಗಾದ ವ್ಯಕ್ತಿಯ ಪಾರ್ಶ್ವವಾಯು ಪೀಡಿತ ತಂದೆಗೆ ವೈದ್ಯರು ತಪ್ಪಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವರದಿಗಳ ಪ್ರಕಾರ, ನಿಜವಾದ ರೋಗಿ ಮನೀಶ್ ಅಪಘಾತಕ್ಕೀಡಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ತೀವ್ರ ಗಾಯಗಳಾಗಿತ್ತು. ಅವರಿಗೆ ಶಸ್ತ್ರಚಿಕಿತ್ಸೆ ಶನಿವಾರ ನಡೆಯಬೇಕಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಆಸ್ಪತ್ರೆಯಲ್ಲಿ ಅವರು ಸಹಾಯಕ್ಕಾಗಿ ತನ್ನ ತಂದೆಗೆ ಕರೆ ಮಾಡಿದ್ದರು. ಆಪರೇಷನ್ ಮಾಡುವಾಗ ಸಹಾಯಕ್ಕಾಗಿ ಯಾರಾದರೂ ಬೇಕೆಂದು ಅವರು ಫೋನ್ ಮಾಡಿದ್ದರು. ಪಾರ್ಶ್ವವಾಯು ಪೀಡಿತರಾಗಿದ್ದ ಆತನ ತಂದೆ ಆಸ್ಪತ್ರೆಗೆ ಬಂದಿದ್ದರು.

ಆಪರೇಷನ್ ಥಿಯೇಟರ್ ಒಳಗೆ ಶಸ್ತ್ರಚಿಕಿತ್ಸೆಗೆ ಸಿದ್ಧವಾಗುತ್ತಿರುವಾಗ ತನ್ನ ತಂದೆ ಹೊರಗೆ ಕಾಯುತ್ತಿದ್ದರು ಎಂದು ಮನೀಶ್ ಹೇಳಿಕೊಂಡಿದ್ದಾರೆ. ಆದರೆ, ನಾನು ಹೊರಬಂದ ನಂತರ, ತನ್ನ ತಂದೆಯ ದೇಹದ ಮೇಲೆ 5-6 ಹೊಲಿಗೆಗಳನ್ನು ನೋಡಿದೆ. ತನ್ನ ತಂದೆಗೆ ತಪ್ಪಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ನನಗೆ ಗೊತ್ತಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:  ಆಪರೇಷನ್ ವೇಳೆ ಹೊಟ್ಟೆಯಲ್ಲಿ ಹತ್ತಿ ಬಿಟ್ಟ ವೈದ್ಯರು; ಆಸ್ಪತ್ರೆಯ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು

ಇದನ್ನೂ ಓದಿ
Image
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
Image
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
Image
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
Image
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

“ನಾನು ಶಸ್ತ್ರಚಿಕಿತ್ಸೆಯ ಕೊಠಡಿಯೊಳಗೆ ಇದ್ದೆ. ಏನಾಯಿತು ಎಂದು ನನಗೆ ತಿಳಿದಿಲ್ಲ, ಆದರೆ ಈಗ ನನ್ನ ತಂದೆಗೆ 5–6 ಹೊಲಿಗೆಗಳನ್ನು ಹಾಕಲಾಗಿದೆ” ಎಂದು ಮನೀಶ್ ಹೇಳಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ಹೆಸರು ತನಗೆ ನೆನಪಿಲ್ಲ ಎಂದು ರೋಗಿಯು ಉಲ್ಲೇಖಿಸಿದ್ದಾರೆ.

ಕೋಟಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಸಂಗೀತಾ ಸಕ್ಸೇನಾ ಅವರು ಈ ಘಟನೆಯ ಬಗ್ಗೆ ಗಮನ ಹರಿಸಿ, ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. “ನಾನು ಸೂಪರಿಂಟೆಂಡೆಂಟ್ ಅವರನ್ನು ಸಮಿತಿ ರಚಿಸಿ 2-3 ದಿನಗಳಲ್ಲಿ ವರದಿ ಸಲ್ಲಿಸುವಂತೆ ಕೇಳಿದ್ದೇನೆ. ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಅವರು ವಿಚಾರಿಸಿ ಏನಾಯಿತು ಎಂದು ತಿಳಿಸುತ್ತಾರೆ” ಎಂದು ಅವರು ANIಗೆ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ