AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್​ನಲ್ಲಿ ಮಾತನಾಡುತ್ತಾ ಕಾರು ಚಾಲನೆ: ದಂಡ ಕಟ್ಟು ಅಂದ್ರೆ, ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ವಿದ್ಯಾರ್ಥಿ

ಮೊಬೈಲ್​ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ವ್ಯಕ್ತಿಗೆ ಕಾರು ನಿಲ್ಲಿಸಿ ದಂಡ ಕಟ್ಟುವಂತೆ ಹೇಳಿದ್ದಕ್ಕೆ ಪೊಲೀಸ್​ರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ.

ಫೋನ್​ನಲ್ಲಿ ಮಾತನಾಡುತ್ತಾ ಕಾರು ಚಾಲನೆ: ದಂಡ ಕಟ್ಟು ಅಂದ್ರೆ, ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ವಿದ್ಯಾರ್ಥಿ
ಕಾರುImage Credit source: India Today
ನಯನಾ ರಾಜೀವ್
|

Updated on: May 09, 2023 | 11:38 AM

Share

ಮೊಬೈಲ್​ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿಯೊಬ್ಬ ಕಾರು ನಿಲ್ಲಿಸಿ ದಂಡ ಕಟ್ಟುವಂತೆ ಹೇಳಿದ್ದಕ್ಕೆ ಪೊಲೀಸ್​ರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ. ಪೊಲೀಸರನ್ನು ಕಾರಿನ ಬಾನೆಟ್​ ಮೇಲೆ ಸುಮಾರು 500 ಮೀಟರ್​ ಎಳೆದೊಯ್ದಿದ್ದಾರೆ, ಮೊಬೈಲ್​ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿರುವಾಗ ಪೊಲೀಸರು ಕಾರನ್ನು ಅಡ್ಡಗಟ್ಟಿದ್ದರು, ಆಗ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆರೋಪಿ ಚಾಲಕ, ಓಮರಾಮ್ ದೇವಸಿಯನ್ನು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಬಂಧಿಸಲಾಗಿದೆ, ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆ. ಜೋಧ್‌ಪುರದ ಮೆಡಿಕಲ್ ಇಂಟರ್‌ಸೆಕ್ಷನ್‌ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಠಾಣಾಧಿಕಾರಿಯೊಬ್ಬರು ಕಾರ್ ಡ್ರೈವರ್‌ಗೆ ನಿಲ್ಲಿಸಲು ಸೂಚಿಸಿದ್ದರು, ಆದರೆ ದಂಡ ಕಟ್ಟುವುದರಿಂದ ತಪ್ಪಿಸಿಕೊಳ್ಳಲು ಹೋಗಿ ಪೊಲೀಸರಿಗೆ ಡಿಕ್ಕಿ ಹೊಡೆದಿದ್ದ..

ಮತ್ತಷ್ಟು ಓದಿ: ದೆಹಲಿ: ವ್ಯಕ್ತಿಯನ್ನು 3 ಕಿ.ಮೀ ಬಾನೆಟ್​ ಮೇಲೆ ಎಳೆದೊಯ್ದ ಸಂಸದರ ಕಾರು

ನಂತರ ಸ್ಥಳಕ್ಕಾಗಮಿಸಿದ ಶಾಸ್ತ್ರಿನಗರ ಠಾಣೆಯ ಪೊಲೀಸ್ ಅಧಿಕಾರಿಗಳು ಕಾರು ಚಾಲಕ ಓಮರಾಮ್ ದೇವಸಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ ಗೋವಿಂದ್ ವ್ಯಾಸ್ ಅವರ ಕೈಗಳಿಗೆ ಗಾಯಗಳಾಗಿದ್ದು, ಅವರ ಮೊಬೈಲ್ ಫೋನ್‌ಗೆ ಹಾನಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ