AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್​ನಲ್ಲಿ ಮಾತನಾಡುತ್ತಾ ಕಾರು ಚಾಲನೆ: ದಂಡ ಕಟ್ಟು ಅಂದ್ರೆ, ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ವಿದ್ಯಾರ್ಥಿ

ಮೊಬೈಲ್​ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ವ್ಯಕ್ತಿಗೆ ಕಾರು ನಿಲ್ಲಿಸಿ ದಂಡ ಕಟ್ಟುವಂತೆ ಹೇಳಿದ್ದಕ್ಕೆ ಪೊಲೀಸ್​ರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ.

ಫೋನ್​ನಲ್ಲಿ ಮಾತನಾಡುತ್ತಾ ಕಾರು ಚಾಲನೆ: ದಂಡ ಕಟ್ಟು ಅಂದ್ರೆ, ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ವಿದ್ಯಾರ್ಥಿ
ಕಾರುImage Credit source: India Today
ನಯನಾ ರಾಜೀವ್
|

Updated on: May 09, 2023 | 11:38 AM

Share

ಮೊಬೈಲ್​ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿಯೊಬ್ಬ ಕಾರು ನಿಲ್ಲಿಸಿ ದಂಡ ಕಟ್ಟುವಂತೆ ಹೇಳಿದ್ದಕ್ಕೆ ಪೊಲೀಸ್​ರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ. ಪೊಲೀಸರನ್ನು ಕಾರಿನ ಬಾನೆಟ್​ ಮೇಲೆ ಸುಮಾರು 500 ಮೀಟರ್​ ಎಳೆದೊಯ್ದಿದ್ದಾರೆ, ಮೊಬೈಲ್​ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿರುವಾಗ ಪೊಲೀಸರು ಕಾರನ್ನು ಅಡ್ಡಗಟ್ಟಿದ್ದರು, ಆಗ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆರೋಪಿ ಚಾಲಕ, ಓಮರಾಮ್ ದೇವಸಿಯನ್ನು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಬಂಧಿಸಲಾಗಿದೆ, ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆ. ಜೋಧ್‌ಪುರದ ಮೆಡಿಕಲ್ ಇಂಟರ್‌ಸೆಕ್ಷನ್‌ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಠಾಣಾಧಿಕಾರಿಯೊಬ್ಬರು ಕಾರ್ ಡ್ರೈವರ್‌ಗೆ ನಿಲ್ಲಿಸಲು ಸೂಚಿಸಿದ್ದರು, ಆದರೆ ದಂಡ ಕಟ್ಟುವುದರಿಂದ ತಪ್ಪಿಸಿಕೊಳ್ಳಲು ಹೋಗಿ ಪೊಲೀಸರಿಗೆ ಡಿಕ್ಕಿ ಹೊಡೆದಿದ್ದ..

ಮತ್ತಷ್ಟು ಓದಿ: ದೆಹಲಿ: ವ್ಯಕ್ತಿಯನ್ನು 3 ಕಿ.ಮೀ ಬಾನೆಟ್​ ಮೇಲೆ ಎಳೆದೊಯ್ದ ಸಂಸದರ ಕಾರು

ನಂತರ ಸ್ಥಳಕ್ಕಾಗಮಿಸಿದ ಶಾಸ್ತ್ರಿನಗರ ಠಾಣೆಯ ಪೊಲೀಸ್ ಅಧಿಕಾರಿಗಳು ಕಾರು ಚಾಲಕ ಓಮರಾಮ್ ದೇವಸಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ ಗೋವಿಂದ್ ವ್ಯಾಸ್ ಅವರ ಕೈಗಳಿಗೆ ಗಾಯಗಳಾಗಿದ್ದು, ಅವರ ಮೊಬೈಲ್ ಫೋನ್‌ಗೆ ಹಾನಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್