AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್​ನಲ್ಲಿ ಮಾತನಾಡುತ್ತಾ ಕಾರು ಚಾಲನೆ: ದಂಡ ಕಟ್ಟು ಅಂದ್ರೆ, ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ವಿದ್ಯಾರ್ಥಿ

ಮೊಬೈಲ್​ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ವ್ಯಕ್ತಿಗೆ ಕಾರು ನಿಲ್ಲಿಸಿ ದಂಡ ಕಟ್ಟುವಂತೆ ಹೇಳಿದ್ದಕ್ಕೆ ಪೊಲೀಸ್​ರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ.

ಫೋನ್​ನಲ್ಲಿ ಮಾತನಾಡುತ್ತಾ ಕಾರು ಚಾಲನೆ: ದಂಡ ಕಟ್ಟು ಅಂದ್ರೆ, ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ವಿದ್ಯಾರ್ಥಿ
ಕಾರುImage Credit source: India Today
ನಯನಾ ರಾಜೀವ್
|

Updated on: May 09, 2023 | 11:38 AM

Share

ಮೊಬೈಲ್​ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿಯೊಬ್ಬ ಕಾರು ನಿಲ್ಲಿಸಿ ದಂಡ ಕಟ್ಟುವಂತೆ ಹೇಳಿದ್ದಕ್ಕೆ ಪೊಲೀಸ್​ರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ. ಪೊಲೀಸರನ್ನು ಕಾರಿನ ಬಾನೆಟ್​ ಮೇಲೆ ಸುಮಾರು 500 ಮೀಟರ್​ ಎಳೆದೊಯ್ದಿದ್ದಾರೆ, ಮೊಬೈಲ್​ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿರುವಾಗ ಪೊಲೀಸರು ಕಾರನ್ನು ಅಡ್ಡಗಟ್ಟಿದ್ದರು, ಆಗ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ ಎಳೆದೊಯ್ದಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆರೋಪಿ ಚಾಲಕ, ಓಮರಾಮ್ ದೇವಸಿಯನ್ನು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಬಂಧಿಸಲಾಗಿದೆ, ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆ. ಜೋಧ್‌ಪುರದ ಮೆಡಿಕಲ್ ಇಂಟರ್‌ಸೆಕ್ಷನ್‌ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಠಾಣಾಧಿಕಾರಿಯೊಬ್ಬರು ಕಾರ್ ಡ್ರೈವರ್‌ಗೆ ನಿಲ್ಲಿಸಲು ಸೂಚಿಸಿದ್ದರು, ಆದರೆ ದಂಡ ಕಟ್ಟುವುದರಿಂದ ತಪ್ಪಿಸಿಕೊಳ್ಳಲು ಹೋಗಿ ಪೊಲೀಸರಿಗೆ ಡಿಕ್ಕಿ ಹೊಡೆದಿದ್ದ..

ಮತ್ತಷ್ಟು ಓದಿ: ದೆಹಲಿ: ವ್ಯಕ್ತಿಯನ್ನು 3 ಕಿ.ಮೀ ಬಾನೆಟ್​ ಮೇಲೆ ಎಳೆದೊಯ್ದ ಸಂಸದರ ಕಾರು

ನಂತರ ಸ್ಥಳಕ್ಕಾಗಮಿಸಿದ ಶಾಸ್ತ್ರಿನಗರ ಠಾಣೆಯ ಪೊಲೀಸ್ ಅಧಿಕಾರಿಗಳು ಕಾರು ಚಾಲಕ ಓಮರಾಮ್ ದೇವಸಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ ಗೋವಿಂದ್ ವ್ಯಾಸ್ ಅವರ ಕೈಗಳಿಗೆ ಗಾಯಗಳಾಗಿದ್ದು, ಅವರ ಮೊಬೈಲ್ ಫೋನ್‌ಗೆ ಹಾನಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’