AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಬೆಂಚಿನ ಮೇಲೆ ಮಗಳನ್ನು ಮಲಗಿಸಿ, ನಿದ್ರೆ ಬಂದ ಬಳಿಕ ಸರೋವರಕ್ಕೆ ಎಸೆದು ಕೊಂದ ತಾಯಿ

ಅಮ್ಮ ಜತೆಗಿದ್ದಾಳೆಂದು ನೆಮ್ಮದಿಯಿಂದ ಮಲಗಿದ್ದ ಮಗು, ತನ್ನ ತಾಯಿಯೇ ತನ್ನ ಕೊಲ್ಲಬಹುದು ಎನ್ನುವ ಸಣ್ಣ ಊಹೆಯೂ ಆ ಮಗುವಿಗೆ ಇರದು. ಯಮನ ಕೈಯಿಂದಲೂ ತನ್ನ ಮಗುವನ್ನು ಕಾಪಾಡಿಕೊಳ್ಳುವ ಶಕ್ತಿ ತಾಯಿಗಿರುತ್ತೆ ಅಂತಾರೆ, ಆದರೆ ಆಕೆಯೇ ತನ್ನ ಮಗುವ ಯಮನ ಕೈಗಿಟ್ಟುಬಿಟ್ಟಳೇ. ಮೂರು ವರ್ಷದ ಮಗಳನ್ನು ಕಲ್ಲು ಬೆಂಚಿನ ಮೇಲೆ ಮಲಗಿಸಿ ನಿದ್ರೆ ಬಂದ ಬಳಿಕ ಆಕೆಯನ್ನು ತಾಯಿ ಸರೋವರಕ್ಕೆ ಎಸೆದು ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಅಜ್ಮೀರ್​ನಲ್ಲಿ ನಡೆದಿದೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಮಹಿಳೆ ಅಜ್ಮೀರ್‌ನ ಅನಾ ಸಾಗರ್ ಸರೋವರದ ಬಳಿ ಮಗುವಿನೊಂದಿಗೆ ಹಲವು ಗಂಟೆಗಳ ಕಾಲ ಕಳೆದ ನಂತರ ತಾಯಿ ಈ ಕೃತ್ಯವೆಸಗಿದ್ದಾರೆ. ಆರೋಪಿಯನ್ನು ಅಂಜಲಿ ಅಲಿಯಾಸ್ ಪ್ರಿಯಾ ಸಿಂಗ್ ಎಂದು ಗುರುತಿಸಲಾಗಿದ್ದು, ಆಕೆ ಮೂಲತಃ ಉತ್ತರ ಪ್ರದೇಶದ ಬನಾರಸ್ ಜಿಲ್ಲೆಯ ಸಕುಲ್ಪುರದವಳು.

ಕಲ್ಲು ಬೆಂಚಿನ ಮೇಲೆ ಮಗಳನ್ನು ಮಲಗಿಸಿ, ನಿದ್ರೆ ಬಂದ ಬಳಿಕ ಸರೋವರಕ್ಕೆ ಎಸೆದು ಕೊಂದ ತಾಯಿ
ಆರೋಪಿ ಮಹಿಳೆ
ನಯನಾ ರಾಜೀವ್
|

Updated on: Sep 18, 2025 | 2:35 PM

Share

ಅಜ್ಮೀರ್, ಸೆಪ್ಟೆಂಬರ್ 18: ಮೂರು ವರ್ಷದ ಮಗಳನ್ನು ಕಲ್ಲು ಬೆಂಚಿನ ಮೇಲೆ ಮಲಗಿಸಿ ನಿದ್ರೆ ಬಂದ ಬಳಿಕ ಆಕೆಯನ್ನು ತಾಯಿ ಸರೋವರಕ್ಕೆ ಎಸೆದು ಕೊಲೆ(Murder) ಮಾಡಿರುವ ಘಟನೆ ರಾಜಸ್ಥಾನದ ಅಜ್ಮೀರ್​ನಲ್ಲಿ ನಡೆದಿದೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಮಹಿಳೆ ಅಜ್ಮೀರ್‌ನ ಅನಾ ಸಾಗರ್ ಸರೋವರದ ಬಳಿ ಮಗುವಿನೊಂದಿಗೆ ಹಲವು ಗಂಟೆಗಳ ಕಾಲ ಕಳೆದ ನಂತರ ತಾಯಿ ಈ ಕೃತ್ಯವೆಸಗಿದ್ದಾಳೆ.

ಆರೋಪಿಯನ್ನು ಅಂಜಲಿ ಅಲಿಯಾಸ್ ಪ್ರಿಯಾ ಸಿಂಗ್ ಎಂದು ಗುರುತಿಸಲಾಗಿದ್ದು, ಆಕೆ ಮೂಲತಃ ಉತ್ತರ ಪ್ರದೇಶದ ಬನಾರಸ್ ಜಿಲ್ಲೆಯ ಸಕುಲ್ಪುರದವಳು. ಆಕೆ ಅಜ್ಮೀರ್‌ನ ದತನಗರ ಪ್ರದೇಶದಲ್ಲಿ ಆಕ್ಲೇಶ್ ಗುಪ್ತಾ ಎಂಬ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದಳು. ಅಂಜಲಿ ತನ್ನ ಪತಿಯಿಂದ ಬೇರ್ಪಟ್ಟಿದ್ದಳು, ಅವರಿಗೆ ಒಬ್ಬಳು ಮಗಳಿದ್ದಳು.

ಪೊಲೀಸರ ಮಾಹಿತಿ ಪ್ರಕಾರ, ಕ್ರಿಶ್ಚಿಯನ್ ಗಂಜ್ ಠಾಣೆಯ ಪೊಲೀಸರು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬಜರಂಗ್ ಘರ್ ಛೇದಕ ಬಳಿ ಅಂಜಲಿ ಮತ್ತು ಅಕ್ಲೇಶ್ ಅವರನ್ನು ನೋಡಿದಾಗ ಅವರಿಗೆ ಅನುಮಾನ ಬಂದಿತ್ತು. ಅವರನ್ನು ಪ್ರಶ್ನಿಸಿದಾಗ, ಮಹಿಳೆ ತನ್ನ ಮಗಳು ಕಾಣೆಯಾಗಿದ್ದಾಳೆ ಮತ್ತು ಅವಳನ್ನು ಹುಡುಕುತ್ತಿದ್ದೇವೆ ಎಂದು ಸುಳ್ಳು ಹೇಳಿದ್ದಳು.

ಮತ್ತಷ್ಟು ಓದಿ: ಇಳಿ ವಯಸ್ಸಿನಲ್ಲಿ ಮದುವೆ ಕನಸು ಹೊತ್ತು ಅಮೆರಿಕದಿಂದ ಭಾರತಕ್ಕೆ ಬಂದ ಮಹಿಳೆಯ ಬರ್ಬರ ಹತ್ಯೆ

ಆದರೆ, ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ರಾತ್ರಿ 10 ರಿಂದ ಬೆಳಗಿನ ಜಾವ 1.30 ರ ನಡುವೆ ಮಗು ಅಂಜಲಿ ಜೊತೆಗಿರುವುದು ಕಂಡುಬಂದಿದೆ. ಹೆಚ್ಚಿನ ದೃಶ್ಯಗಳಲ್ಲಿ ಅಂಜಲಿ ಹಳೆಯ ಅನಾ ಸಾಗರ್ ಸರೋವರ ಪ್ರದೇಶಕ್ಕೆ ಹೋಗಿ, ಅಲ್ಲಿ ತನ್ನ ಮಗಳನ್ನು ಬೆಂಚ್ ಮೇಲೆ ಮಲಗಿಸಿದ್ದಾಳೆ ಎಂದು ತಿಳಿದುಬಂದಿದೆ.

ನಿರಂತರ ವಿಚಾರಣೆಯ ನಂತರ, ಅಂಜಲಿ ತನ್ನ ಮಗಳನ್ನು ರೇಲಿಂಗ್ ಕಾಣದ ಭಾಗದ ಮೂಲಕ ಸರೋವರಕ್ಕೆ ತಳ್ಳಿದ್ದಾಗಿ ಒಪ್ಪಿಕೊಂಡಿದ್ದಾಳೆ. ನಂತರ ಪೊಲೀಸರು ಅನಾ ಸಾಗರ್ ಸರೋವರದಿಂದ ಮಗುವಿನ ಶವವನ್ನು ವಶಪಡಿಸಿಕೊಂಡರು. ಅಂಜಲಿ ನಾಪತ್ತೆಯಾಗಿರುವ ಬಗ್ಗೆ ಆಕೆಯ ಪತಿ ಬನಾರಸ್‌ನಲ್ಲಿ ಈಗಾಗಲೇ ನಾಪತ್ತೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!