ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಜೀವಂತವಾಗಿ ಸುಟ್ಟು ಹಾಕಿದ್ದ ಇಬ್ಬರಿಗೆ ಮರಣದಂಡನೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಜೀವದಹನ ಮಾಡಿದ್ದ ಆರೋಪಿಗಳಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಕಲ್ಲಿದ್ದಲು ಕುಲುಮೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಜೀವ ದಹನ ಮಾಡಿದ ಪ್ರಕರಣದಲ್ಲಿ ಇಬ್ಬರಿಗೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ ಸೋಮವಾರ ಮರಣದಂಡನೆ ವಿಧಿಸಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಜೀವಂತವಾಗಿ ಸುಟ್ಟು ಹಾಕಿದ್ದ ಇಬ್ಬರಿಗೆ ಮರಣದಂಡನೆ

Updated on: May 21, 2024 | 8:50 AM

ಕಳೆದ ವರ್ಷ ಆಗಸ್ಟ್‌ನಲ್ಲಿ ಕಲ್ಲಿದ್ದಲು ಕುಲುಮೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಜೀವ ದಹನ ಮಾಡಿದ ಪ್ರಕರಣದಲ್ಲಿ ಇಬ್ಬರಿಗೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ ಸೋಮವಾರ ಮರಣದಂಡನೆ ವಿಧಿಸಿದೆ.
ದೇಹ ಸಂಪೂರ್ಣವಾಗಿ ಸುಟ್ಟುಹೋಗದ ಕಾರಣ ಬಳಿಕ ಅರೆಬೆಂದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕಾಲುವೆಗೆ ಎಸೆದಿದ್ದರು.

ತನಿಖೆ ಕೈಗೊಂಡ ಪೊಲೀಸರಿಗೆ ಕಾಲುವೆಯಲ್ಲಿ ತುಂಬಿದ ಗೋಣಿಚೀಲ ಸಿಕ್ಕಿತ್ತು, ಅದರೊಳಗೆ ದೇಹದ ಭಾಗಗಳಿದ್ದವು.
ಕುಟುಂಬಸ್ಥರು ಈ ಇಬ್ಬರ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ಪೊಲೀಸರು ಆರೋಪಿಗಳಿಬ್ಬರನ್ನು ಹಿಡಿದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾರೆ.

ಬಾಲಕಿಯ ಮೇಲೆ ನಡೆಸಿದ ಅತ್ಯಾಚಾರ ಬಳಿಕ ಹೇಗೆ ಕೊಂದಿದ್ದಾರೆ ಎಂಬುದನ್ನು ವಿವರಿಸಿದ್ದಾರೆ. ಎರಡು ದಿನಗಳ ಹಿಂದೆ ಇಬ್ಬರೂ ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿತ್ತು. ನಿನ್ನೆ ಇಬ್ಬರಿಗೂ ಮರಣದಂಡನೆ ವಿಧಿಸಲಾಗಿದೆ.
ಪ್ರಕರಣದ ವಿಚಾರಣೆ ವೇಳೆ 43 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಕೂಲಂಕುಷವಾಗಿ ತನಿಖೆ ನಡೆಸಿದ ಪೊಲೀಸರು 473 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಮತ್ತಷ್ಟು ಓದಿ: ಮಂಡ್ಯ: ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕನಿಂದ ಮತಾಂತರಕ್ಕೆ ಒತ್ತಾಯ

ಚಾರ್ಜ್​ಶೀಟ್​ನಲ್ಲಿರುವ ಮಾಹಿತಿ ಪ್ರಕಾರ ಅಂದು ಕಾಲು ಹಾಗೂ ಕನ್ಹಾ ಮರಕಡಿಯಲು ಹೊರಟಿದ್ದರು. ಆಡುಗಳನ್ನು ಮೇಯಿಸುತ್ತಿದ್ದ ಹುಡುಗಿಯನ್ನು ಕಂಡರು, ಇಬ್ಬರೂ ಆಕೆಯನ್ನು ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಆಕೆ ಓಡಿ ಹೋಗಲು ಯತ್ನಿಸಿದಾಗ ದೊಣ್ಣೆಯಿಂದ ಆಕೆಯ ತಲೆಗೆ ಹೊಡೆದಿದ್ದಾರೆ. ಆಕೆ ಪ್ರಜ್ಞಾಹೀನಳಾದಾಗ ಮತ್ತೆ ಇಬ್ಬರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಬಳಿಕ ಆಕೆಯ ಮುಖಕ್ಕೆ ಬೆಂಕಿ ಹಚ್ಚಿ ಇಡೀ ದೇಹವನ್ನು ಸುಡುವ ಪ್ರಯತ್ನ ಮಾಡಿದ್ದಾರೆ, ಆದರೆ ದೇಹ ಸಂಪೂರ್ಣವಾಗಿ ಸುಡದಿದ್ದಾಗ, ದೇಹವನ್ನು ಕತ್ತರಿಸಿ ಕಾಲುವೆಗೆ ಎಸೆದಿದ್ದಾರೆ.

ಬಾಲಕಿಯ ಮನೆಯವರು ಆಕೆಯನ್ನು ಹುಡುಕಿಕೊಂಡು ಹೊಲಕ್ಕೆ ಬಂದಾಗ ಸುಟ್ಟ ಮಡಕೆಯ ಬಳಿ ಮಗಳ ಬಟ್ಟೆ, ಚಪ್ಪಲಿ, ಬಳೆಗಳು ಪತ್ತೆಯಾಗಿತ್ತು. ಮಾಂಸದ ದುರ್ವಾಸನೆಯೂ ಬರುತ್ತಿತ್ತು. ಆಗ ಪೊಲೀಸರಿಗೆ ಮಾಹಿತಿ ನೀಡಿದ್ದರು.

ನ್ಯಾ. ಅನಿಲ್ ಗುಪ್ತಾ ಅವರು ಕಾಲು ಮತ್ತು ಕನ್ಹಾ ಕಲ್ಬೆಲಿಯಾ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ತಕ್ಷಣ ಕುಟುಂಬದವರ ಕಣ್ಣಂಚಲ್ಲಿ ನೀರು ಮೂಡಿತ್ತು. ಮಗಳಂತೂ ಹಿಂದಿರುಗುವುದಿಲ್ಲ ಆದರೆ ಆಕೆಯ ಸಾವಿಗೆ ನ್ಯಾಯ ಸಿಕ್ಕಿದೆ ಎನ್ನುವ ತೃಪ್ತಿ ಕಾಣುತ್ತಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us