AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಬಿಕಾನೇರ್‌ನಲ್ಲಿ ತರಬೇತಿ ವೇಳೆ ಸ್ಫೋಟ; ಇಬ್ಬರು ಯೋಧರ ಸಾವು

ರಾಜಸ್ಥಾನದಲ್ಲಿ ತರಬೇತಿ ವೇಳೆ ಟ್ಯಾಂಕರ್‌ನಲ್ಲಿ ಮದ್ದುಗುಂಡುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ತುಂಬಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಮೃತಪಟ್ಟಿರುವ ಅಶುತೋಶ್ ಮಿಶ್ರಾ ಉತ್ತರ ಪ್ರದೇಶದ ಡಿಯೋರಿಯಾದವರು. ಜಿತೇಂದ್ರ ರಾಜಸ್ಥಾನದ ದೌಸಾದ ನಿವಾಸಿಯಾಗಿದ್ದಾರೆ. ಈ ವಾರ ಗುಂಡಿನ ಚಕಮಕಿಯಲ್ಲಿ ನಡೆದ ಎರಡನೇ ಮಾರಣಾಂತಿಕ ಘಟನೆ ಇದಾಗಿದೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ ತರಬೇತಿ ವೇಳೆ ಸ್ಫೋಟ; ಇಬ್ಬರು ಯೋಧರ ಸಾವು
Soldiers
ಸುಷ್ಮಾ ಚಕ್ರೆ
|

Updated on: Dec 18, 2024 | 4:49 PM

Share

ಜೈಪುರ: ತರಬೇತಿ ಅಭ್ಯಾಸದ ವೇಳೆ ಇಂದು ಟ್ಯಾಂಕ್‌ನಲ್ಲಿ ಮದ್ದುಗುಂಡುಗಳನ್ನು ತುಂಬುತ್ತಿದ್ದಾಗ ರಾಜಸ್ಥಾನದ ಬಿಕಾನೇರ್‌ನ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇದು ಈ ವಾರ ಈ ವ್ಯಾಪ್ತಿಯಲ್ಲಿ ನಡೆದ ಎರಡನೇ ಮಾರಣಾಂತಿಕ ಘಟನೆಯಾಗಿದೆ. ಅವರು ಮದ್ದುಗುಂಡುಗಳನ್ನು ಲೋಡ್ ಮಾಡುವಾಗ ಚಾರ್ಜರ್ ಸ್ಫೋಟಗೊಂಡಿದೆ ಎಂದು ಭಾರತೀಯ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಅಮಿತಾಭ್ ಶರ್ಮಾ ಹೇಳಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಖಚಿತಪಡಿಸಿದ್ದಾರೆ.

ಈ ಸ್ಫೋಟದ ಬಗ್ಗೆ ಮಾಹಿತಿ ಬಂದ ತಕ್ಷಣ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. “ಮೂರು ಸೈನಿಕರು ಟ್ಯಾಂಕ್‌ನೊಂದಿಗೆ ಅಭ್ಯಾಸ ನಡೆಸುತ್ತಿದ್ದರು. ಸ್ಫೋಟದಲ್ಲಿ ಅಶುತೋಷ್ ಮಿಶ್ರಾ ಮತ್ತು ಜಿತೇಂದ್ರ ಎಂಬ ಯೋಧರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಯೋಧನನ್ನು ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಕರೆದೊಯ್ಯಲಾಗಿದೆ” ಎಂದು ಬಿಕಾನೇರ್ ಸರ್ಕಲ್ ಆಫೀಸರ್ ನರೇಂದ್ರ ಕುಮಾರ್ ಪೂನಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ಅತುಲ್ ಸಂತ್ರಸ್ತ ಅಲ್ಲ, ನಾನೇ ನಿಜವಾದ ಸಂತ್ರಸ್ತೆ: ಪೊಲೀಸರ ಮುಂದೆ ಸ್ಫೋಟಕ ಅಂಶ ಬಿಚ್ಚಿಟ್ಟ ಪತ್ನಿ

ಮೃತಪಟ್ಟಿರುವ ಅಶುತೋಶ್ ಮಿಶ್ರಾ ಉತ್ತರ ಪ್ರದೇಶದ ಡಿಯೋರಿಯಾದವರು. ಜಿತೇಂದ್ರ ರಾಜಸ್ಥಾನದ ದೌಸಾದ ನಿವಾಸಿಯಾಗಿದ್ದಾರೆ. ಅವರ ಮೃತದೇಹಗಳನ್ನು ಸೂರತ್‌ಗಢ ಸೇನಾ ಠಾಣೆಗೆ ಕೊಂಡೊಯ್ಯಲಾಯಿತು.

ಇದೇ ರೀತಿ ಭಾನುವಾರ ಗನ್ ಟೋಯಿಂಗ್ ವಾಹನಕ್ಕೆ ಬಂದೂಕಿಗೆ ಕೊಕ್ಕೆ ಹಾಕುತ್ತಿದ್ದಾಗ ಗನ್ನರ್ ಚಂದ್ರಪ್ರಕಾಶ್ ಪಟೇಲ್ ಮೃತಪಟ್ಟಿದ್ದರು. ವಾಹನ ಇದ್ದಕ್ಕಿದ್ದಂತೆ ಹಿಂದಕ್ಕೆ ಜಾರಿದ್ದರಿಂದ ಚಂದ್ರಪ್ರಕಾಶ್ ಪಟೇಲ್ ಮಾರಣಾಂತಿಕವಾಗಿ ಗಾಯಗೊಂಡು ಮೃತಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!