AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಬಿಕಾನೇರ್‌ನಲ್ಲಿ ತರಬೇತಿ ವೇಳೆ ಸ್ಫೋಟ; ಇಬ್ಬರು ಯೋಧರ ಸಾವು

ರಾಜಸ್ಥಾನದಲ್ಲಿ ತರಬೇತಿ ವೇಳೆ ಟ್ಯಾಂಕರ್‌ನಲ್ಲಿ ಮದ್ದುಗುಂಡುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ತುಂಬಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಮೃತಪಟ್ಟಿರುವ ಅಶುತೋಶ್ ಮಿಶ್ರಾ ಉತ್ತರ ಪ್ರದೇಶದ ಡಿಯೋರಿಯಾದವರು. ಜಿತೇಂದ್ರ ರಾಜಸ್ಥಾನದ ದೌಸಾದ ನಿವಾಸಿಯಾಗಿದ್ದಾರೆ. ಈ ವಾರ ಗುಂಡಿನ ಚಕಮಕಿಯಲ್ಲಿ ನಡೆದ ಎರಡನೇ ಮಾರಣಾಂತಿಕ ಘಟನೆ ಇದಾಗಿದೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ ತರಬೇತಿ ವೇಳೆ ಸ್ಫೋಟ; ಇಬ್ಬರು ಯೋಧರ ಸಾವು
Soldiers
ಸುಷ್ಮಾ ಚಕ್ರೆ
|

Updated on: Dec 18, 2024 | 4:49 PM

Share

ಜೈಪುರ: ತರಬೇತಿ ಅಭ್ಯಾಸದ ವೇಳೆ ಇಂದು ಟ್ಯಾಂಕ್‌ನಲ್ಲಿ ಮದ್ದುಗುಂಡುಗಳನ್ನು ತುಂಬುತ್ತಿದ್ದಾಗ ರಾಜಸ್ಥಾನದ ಬಿಕಾನೇರ್‌ನ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇದು ಈ ವಾರ ಈ ವ್ಯಾಪ್ತಿಯಲ್ಲಿ ನಡೆದ ಎರಡನೇ ಮಾರಣಾಂತಿಕ ಘಟನೆಯಾಗಿದೆ. ಅವರು ಮದ್ದುಗುಂಡುಗಳನ್ನು ಲೋಡ್ ಮಾಡುವಾಗ ಚಾರ್ಜರ್ ಸ್ಫೋಟಗೊಂಡಿದೆ ಎಂದು ಭಾರತೀಯ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಅಮಿತಾಭ್ ಶರ್ಮಾ ಹೇಳಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಖಚಿತಪಡಿಸಿದ್ದಾರೆ.

ಈ ಸ್ಫೋಟದ ಬಗ್ಗೆ ಮಾಹಿತಿ ಬಂದ ತಕ್ಷಣ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. “ಮೂರು ಸೈನಿಕರು ಟ್ಯಾಂಕ್‌ನೊಂದಿಗೆ ಅಭ್ಯಾಸ ನಡೆಸುತ್ತಿದ್ದರು. ಸ್ಫೋಟದಲ್ಲಿ ಅಶುತೋಷ್ ಮಿಶ್ರಾ ಮತ್ತು ಜಿತೇಂದ್ರ ಎಂಬ ಯೋಧರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಯೋಧನನ್ನು ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಕರೆದೊಯ್ಯಲಾಗಿದೆ” ಎಂದು ಬಿಕಾನೇರ್ ಸರ್ಕಲ್ ಆಫೀಸರ್ ನರೇಂದ್ರ ಕುಮಾರ್ ಪೂನಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ಅತುಲ್ ಸಂತ್ರಸ್ತ ಅಲ್ಲ, ನಾನೇ ನಿಜವಾದ ಸಂತ್ರಸ್ತೆ: ಪೊಲೀಸರ ಮುಂದೆ ಸ್ಫೋಟಕ ಅಂಶ ಬಿಚ್ಚಿಟ್ಟ ಪತ್ನಿ

ಮೃತಪಟ್ಟಿರುವ ಅಶುತೋಶ್ ಮಿಶ್ರಾ ಉತ್ತರ ಪ್ರದೇಶದ ಡಿಯೋರಿಯಾದವರು. ಜಿತೇಂದ್ರ ರಾಜಸ್ಥಾನದ ದೌಸಾದ ನಿವಾಸಿಯಾಗಿದ್ದಾರೆ. ಅವರ ಮೃತದೇಹಗಳನ್ನು ಸೂರತ್‌ಗಢ ಸೇನಾ ಠಾಣೆಗೆ ಕೊಂಡೊಯ್ಯಲಾಯಿತು.

ಇದೇ ರೀತಿ ಭಾನುವಾರ ಗನ್ ಟೋಯಿಂಗ್ ವಾಹನಕ್ಕೆ ಬಂದೂಕಿಗೆ ಕೊಕ್ಕೆ ಹಾಕುತ್ತಿದ್ದಾಗ ಗನ್ನರ್ ಚಂದ್ರಪ್ರಕಾಶ್ ಪಟೇಲ್ ಮೃತಪಟ್ಟಿದ್ದರು. ವಾಹನ ಇದ್ದಕ್ಕಿದ್ದಂತೆ ಹಿಂದಕ್ಕೆ ಜಾರಿದ್ದರಿಂದ ಚಂದ್ರಪ್ರಕಾಶ್ ಪಟೇಲ್ ಮಾರಣಾಂತಿಕವಾಗಿ ಗಾಯಗೊಂಡು ಮೃತಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ