AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪು ಮಾಹಿತಿ ಹರಡುವಿಕೆ ವಿರುದ್ಧ ಹೊಸ ಐಟಿ ಕಾನೂನು ಪರಿಣಾಮಕಾರಿ: ರಾಜೀವ್ ಚಂದ್ರಶೇಖರ್

ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ತಪ್ಪು ಮಾಹಿತಿ ಹರಡುವುದರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಮಾಡಿರುವ ಇತ್ತೀಚಿನ ತಿದ್ದುಪಡಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲಿವೆ ಎಂದು ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ತಪ್ಪು ಮಾಹಿತಿ ಹರಡುವಿಕೆ ವಿರುದ್ಧ ಹೊಸ ಐಟಿ ಕಾನೂನು ಪರಿಣಾಮಕಾರಿ: ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್Image Credit source: PTI
TV9 Web
| Edited By: |

Updated on: Oct 29, 2022 | 2:34 PM

Share

ನವದೆಹಲಿ: ಸಾಮಾಜಿಕ ಮಾಧ್ಯಮ ವೇದಿಕೆಗಳ (Social Media) ಮೂಲಕ ಕಾನೂನುಬಾಹಿರ ಚಟುವಟಿಕೆ ನಡೆಸುವುದು ಹಾಗೂ ತಪ್ಪು ಮಾಹಿತಿ ಹರಡುವುದರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಮಾಡಿರುವ ಇತ್ತೀಚಿನ ತಿದ್ದುಪಡಿಗಳು (IT rules) ಪರಿಣಾಮಕಾರಿಯಾಗಿ ಕೆಲಸ ಮಾಡಲಿವೆ ಎಂದು ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಟ್ವಿಟರ್ (Twitter), ಫೇಸ್​ಬುಕ್ (Facebook) ಸೇರಿದಂತೆ ಸಾಮಾಜಿಕ ಮಾಧ್ಯಮ (Social Media) ವೇದಿಕೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಮೇಲ್ಮನವಿ ವಿಚಾರಣೆಗೆ ಶೀಘ್ರದಲ್ಲೇ ‘ಸಾಮಾಜಿಕ ಮಾಧ್ಯಮ ಕುಂದುಕೊರತೆ ಮೇಲ್ಮನವಿ ಸಮಿತಿ’ಗಳನ್ನು ರಚಿಸುವ ಬಗ್ಗೆ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿತ್ತು. ಈ ವಿಚಾರವಾಗಿ ಸಚಿವರು ಮಾತನಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾಗರಿಕರ ಲಕ್ಷಾಂತರ ಸಂದೇಶಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ದೂರು ನೀಡಿದ ಹೊರತಾಗಿಯೂ ಸಾಮಾಜಿಕ ಮಾಧ್ಯಮ ಕಂಪನಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಇದನ್ನು ಸಹಿಸಲಾಗದು. ಈ ಕಾರಣಕ್ಕಾಗಿಯೇ ಮೂವರು ಸದಸ್ಯರ ಮೇಲ್ಮನವಿ ಸಮಿತಿ ರಚಿಸುವುದು ಅನಿವಾರ್ಯವಾಯಿತು ಎಂದು ಹೇಳಿದ್ದಾರೆ.

‘ನಾಗರಿಕರ ಹಿತಾಸಕ್ತಿ ಕಾಪಾಡಬೇಕಿದೆ’

ಇದನ್ನೂ ಓದಿ
Image
ಪರಾಗ್ ಅಗರ್​ವಾಲ್​ಗೆ ಸಿಗಲಿದೆ 346 ಕೋಟಿ ರೂ. ಪರಿಹಾರ
Image
ಮಾರುತಿ ಸುಜುಕಿ ನಿವ್ವಳ ಲಾಭ ಬರೋಬ್ಬರಿ ನಾಲ್ಕು ಪಟ್ಟು ಹೆಚ್ಚಳ
Image
ಟಿಡಿಎಸ್​ ಸಲ್ಲಿಕೆ ಗಡುವು ನವೆಂಬರ್ 30ಕ್ಕೆ ವಿಸ್ತರಿಸಿದ ಸಿಬಿಡಿಟಿ

‘ಡಿಜಿಟಲ್ ನಾಗರಿಕರ’ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಸಾಮಾಜಿಕ ಮಾಧ್ಯಮ ಕಂಪನಿಗಳು ಕಾರ್ಯನಿರ್ವಹಿಸಬೇಕು ಎಂದು ಸರ್ಕಾರ ಬಯಸುತ್ತದೆ. ಈ ಹಿಂದೆ ನಿಯಮಗಳ ಬಗ್ಗೆ ಬಳಕೆದಾರರಿಗೆ ತಿಳಿಸುವದಕ್ಕಷ್ಟೇ ಮಧ್ಯವರ್ತಿಗಳ ಕೆಲಸ ಸೀಮಿತವಾಗಿತ್ತು. ಆದರೆ, ಇನ್ನು ಮುಂದೆ ಅವರಿಗೆ ಸಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೆಚ್ಚು ಖಚಿತವಾದ ಹೊಣೆಗಾರಿಕೆ ಇರುತ್ತದೆ ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

‘ಕಂಪನಿ ಎಲ್ಲಿಯದ್ದೇ ಆಗಿರಲಿ, ಭಾರತದ ಕಾನೂನು ಪಾಲಿಸಬೇಕು’

ಸಾಮಾಜಿಕ ಮಾಧ್ಯಮ ಕಂಪನಿಗಳ ಪ್ರಧಾನ ಕಚೇರಿ ಅಮೆರಿಕದಲ್ಲೋ ಯುರೋಪ್​ನಲ್ಲೋ ಇರಬಹುದು. ಹಾಗೆಂದ ಮಾತ್ರಕ್ಕೆ ಅವರು ಭಾರತದಲ್ಲಿ ಕಾರ್ಯಾಚರಿಸುವಾಗ ಇಲ್ಲಿನ ಕಾನೂನುಗಳನ್ನು ಗೌರವಿಸದೇ ಇರುವಂತಿಲ್ಲ. ಭಾರತೀಯರ ಸಾಂವಿಧಾನಿಕ ಹಕ್ಕುಗಳನ್ನು ನಿರಾಕರಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.

ತಪ್ಪು ಮಾಹಿತಿ ತೆಗೆದುಹಾಕಲು 72 ಗಂಟೆ ಗಡುವು

ತಪ್ಪು ಮಾಹಿತಿ, ಅಕ್ರಮ ಒಳಗೊಂಡ, ಜಾತಿ, ಧರ್ಮ ಅಥವಾ ಇತರ ಯಾವುದೇ ಆಧಾರದಲ್ಲಿ ದ್ವೇಷ ಹರಡುವಂಥ ಕಂಟೆಂಟ್​ಗಳನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು 72 ಗಂಟೆಗಳ ಒಳಗಾಗಿ ತೆಗೆದುಹಾಕಬೇಕು. ವೈಯಕ್ತಿಕ ಅಭಿಪ್ರಾಯದ ನೆಲೆಯಲ್ಲಿ ಹೇಳುವುದಾದರೆ ಈ ಅವಧಿ ತುಸು ಹೆಚ್ಚೇ ಆಯಿತು. ಆದರೂ ಕಂಪನಿಗಳು ಎಚ್ಚೆತ್ತುಕೊಂಡು ಅಂಥ ಕಂಟೆಂಟ್​ಗಳನ್ನು ಬೇಗನೇ ತೆರವು ಮಾಡಬೇಕು ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮ ಕುಂದುಕೊರತೆಗಳಿಗೆ ಸಿಗಲಿದೆ ಪರಿಹಾರ; ಶೀಘ್ರದಲ್ಲೇ ಸರ್ಕಾರದಿಂದ ಸಮಿತಿ ರಚನೆ

‘ಸಾಮಾಜಿಕ ಮಾಧ್ಯಮ ಕುಂದುಕೊರತೆ ಮೇಲ್ಮನವಿ ಸಮಿತಿ’ಗಳನ್ನು ರಚಿಸುವ ಬಗ್ಗೆ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿತ್ತು. ಬಳಕೆದಾರರಿಗೆ ತಮ್ಮ ಸಮಸ್ಯೆಗಳಿಗೆ ಸಾಮಾಜಿಕ ಮಾಧ್ಯಮಗಳ ಕುಂದುಕೊರತೆ ವೇದಿಕೆಗಳಲ್ಲಿ ಪರಿಹಾರ ಸಿಗದಿದ್ದಲ್ಲಿ ಅಥವಾ ಅವುಗಳ ಪರಿಹಾರದಿಂದ ಸಮಾಧಾನ ಹೊಂದಿರದಿದ್ದಲ್ಲಿ ಈ ಮೇಲ್ಮನವಿ ಸಮಿತಿಗಳಲ್ಲಿ ಅರ್ಜಿ ಸಲ್ಲಿಸುವ ಅವಕಾಶವನ್ನು ಸರ್ಕಾರ ನೀಡಲಿದೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!