AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajeev Chandrasekhar: ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ರಾಜೀವ್ ಚಂದ್ರಶೇಖರ್ ಅವರು 26ನೇ ಬಾರಿ ಇಲ್ಲಿಗೆ ಭೇಟಿ ನೀಡುತ್ತಿದ್ದು, 'ನನ್ನ 26ನೇ ವರ್ಷದ ಅಯ್ಯಪ್ಪನ ದರ್ಶನ ಇದಾಗಿದೆ. ಸಾವಿರಾರು ಭಕ್ತರೊಂದಿಗೆ ಶಬರಿಮಲೆಯಲ್ಲಿ ತೆರಳಿದಾಗ ತೆಗೆದ ಫೋಟೋ' ಎಂದು ಅವರು ಹೇಳಿಕೊಂಡಿದ್ದಾರೆ.

Rajeev Chandrasekhar: ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
TV9 Web
| Updated By: ಸುಷ್ಮಾ ಚಕ್ರೆ|

Updated on: Aug 19, 2022 | 4:43 PM

Share

ಶಬರಿಮಲೆ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಅವರು ಕೇರಳದಲ್ಲಿರುವ ಶಬರಿಮಲೆಗೆ (Sabarimala) ಭೇಟಿ ನೀಡಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ್ದಾರೆ. ವಿಶೇಷವೆಂದರೆ ಇರುಮುಡಿ ಹೊತ್ತು, ಪಾದಯಾತ್ರೆ ಮೂಲಕವೇ ರಾಜೀವ್ ಚಂದ್ರಶೇಖರ್ ಶಬರಿಮಲೆ ಅಯ್ಯಪ್ಪ ಸ್ವಾಮಿ ಬೆಟ್ಟವನ್ನೇರಿದ್ದಾರೆ. ಬೇರೆ ಭಕ್ತರ ಜೊತೆ ಕಪ್ಪು ಬಟ್ಟೆ ಧರಿಸಿ, ಇರುಮುಡಿ ಹೊತ್ತು ಸಚಿವ ರಾಜೀವ್ ಚಂದ್ರಶೇಖರ್ ಬೆಟ್ಟ ಹತ್ತುತ್ತಿರುವ ಫೋಟೋಗಳು ವೈರಲ್ ಆಗಿವೆ. ಅಂದಹಾಗೆ, 26ನೇ ಬಾರಿ ರಾಜೀವ್ ಚಂದ್ರಶೇಖರ್ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.

ಕೊವಿಡ್-19 ಅಲೆಯ ನಂತರ ಶಬರಿಮಲೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಇಲ್ಲಿಗೆ ಆಗಮಿಸಿದ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರದ ಅಯ್ಯಪ್ಪ ಭಕ್ತರನ್ನು ಭೇಟಿಯಾದ ಪೋಟೊಗಳನ್ನು ರಾಜೀವ್ ಚಂದ್ರಶೇಖರ್ ಅವರು ಕೂ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Sabarimala Temple: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ

ಶಬರಿಮಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರದ ಅಯ್ಯಪ್ಪ ಭಕ್ತರನ್ನು ಭೇಟಿಯಾದ ಹೆಚ್ಚಿನ ಚಿತ್ರಗಳು ಇದಾಗಿದ್ದು, ಅವರಲ್ಲಿ ಹಲವರು ಕೋವಿಡ್ ನಂತರ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ರಾಜೀವ್ ಚಂದ್ರಶೇಖರ್ ಅವರು 26ನೇ ಬಾರಿ ಇಲ್ಲಿಗೆ ಭೇಟಿ ನೀಡುತ್ತಿದ್ದು, ‘ನನ್ನ 26ನೇ ವರ್ಷದ ಅಯ್ಯಪ್ಪನ ದರ್ಶನ ಇದಾಗಿದೆ. ಸಾವಿರಾರು ಭಕ್ತರೊಂದಿಗೆ ಶಬರಿಮಲೆಯಲ್ಲಿ ತೆರಳಿದಾಗ ತೆಗೆದ ಫೋಟೋ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kerala: ಶಬರಿಮಲೆ ಅಯ್ಯಪ್ಪ ದೇಗುಲದ ಗರ್ಭಗುಡಿ ಪ್ರವೇಶದ್ವಾರ ಬಳಿ, ವಿಜಯ ಮಲ್ಯ ನೀಡಿದ್ದ ಚಿನ್ನದ ಲೇಪಿತ ಛಾವಣಿ ಸೋರುತಿದೆ!

ಬೆಂಗಳೂರಿನ ಅಯ್ಯಪ್ಪ ದೇವಸ್ಥಾನದಿಂದ ಇರುಮುಡಿಕಟ್ಟು ತುಂಬಿಕೊಂಡು ಕೇರಳದ ಪಟ್ಟಣಂತಿಟ್ಟಗೆ ತೆರಳಿದ ಸಚಿವರು, ಯಾತ್ರಾರ್ಥಿಗಳೊಂದಿಗೆ ಪಾದಯಾತ್ರೆ ಆರಂಭಿಸಿದ್ದರು. ಇಂದು ಬೆಳಗ್ಗೆ ಪಂಜಾಬದಿಂದ ಇರುಮುಡಿ ಹೊತ್ತುಕೊಂಡು ಪಾದಯಾತ್ರೆ ಆರಂಭಿಸಿದ ರಾಜೀವ್ ಚಂದ್ರಶೇಖರ್ ಒಂದೂವರೆ ಗಂಟೆಯಲ್ಲಿ ಅಯ್ಯಪ್ಪ ಸ್ವಾಮಿಯ ಸನ್ನಿಧಾನ ತಲುಪಿದ್ದಾರೆ. ಅಯ್ಯಪ್ಪನ ದರ್ಶನ ಪಡೆದ ರಾಜೀವ್ ಚಂದ್ರಶೇಖರ್ ಬಳಿಕ ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ