AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajeev Chandrasekhar: ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ರಾಜೀವ್ ಚಂದ್ರಶೇಖರ್ ಅವರು 26ನೇ ಬಾರಿ ಇಲ್ಲಿಗೆ ಭೇಟಿ ನೀಡುತ್ತಿದ್ದು, 'ನನ್ನ 26ನೇ ವರ್ಷದ ಅಯ್ಯಪ್ಪನ ದರ್ಶನ ಇದಾಗಿದೆ. ಸಾವಿರಾರು ಭಕ್ತರೊಂದಿಗೆ ಶಬರಿಮಲೆಯಲ್ಲಿ ತೆರಳಿದಾಗ ತೆಗೆದ ಫೋಟೋ' ಎಂದು ಅವರು ಹೇಳಿಕೊಂಡಿದ್ದಾರೆ.

Rajeev Chandrasekhar: ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
TV9 Web
| Edited By: |

Updated on: Aug 19, 2022 | 4:43 PM

Share

ಶಬರಿಮಲೆ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಅವರು ಕೇರಳದಲ್ಲಿರುವ ಶಬರಿಮಲೆಗೆ (Sabarimala) ಭೇಟಿ ನೀಡಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ್ದಾರೆ. ವಿಶೇಷವೆಂದರೆ ಇರುಮುಡಿ ಹೊತ್ತು, ಪಾದಯಾತ್ರೆ ಮೂಲಕವೇ ರಾಜೀವ್ ಚಂದ್ರಶೇಖರ್ ಶಬರಿಮಲೆ ಅಯ್ಯಪ್ಪ ಸ್ವಾಮಿ ಬೆಟ್ಟವನ್ನೇರಿದ್ದಾರೆ. ಬೇರೆ ಭಕ್ತರ ಜೊತೆ ಕಪ್ಪು ಬಟ್ಟೆ ಧರಿಸಿ, ಇರುಮುಡಿ ಹೊತ್ತು ಸಚಿವ ರಾಜೀವ್ ಚಂದ್ರಶೇಖರ್ ಬೆಟ್ಟ ಹತ್ತುತ್ತಿರುವ ಫೋಟೋಗಳು ವೈರಲ್ ಆಗಿವೆ. ಅಂದಹಾಗೆ, 26ನೇ ಬಾರಿ ರಾಜೀವ್ ಚಂದ್ರಶೇಖರ್ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.

ಕೊವಿಡ್-19 ಅಲೆಯ ನಂತರ ಶಬರಿಮಲೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಇಲ್ಲಿಗೆ ಆಗಮಿಸಿದ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರದ ಅಯ್ಯಪ್ಪ ಭಕ್ತರನ್ನು ಭೇಟಿಯಾದ ಪೋಟೊಗಳನ್ನು ರಾಜೀವ್ ಚಂದ್ರಶೇಖರ್ ಅವರು ಕೂ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Sabarimala Temple: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ

ಶಬರಿಮಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರದ ಅಯ್ಯಪ್ಪ ಭಕ್ತರನ್ನು ಭೇಟಿಯಾದ ಹೆಚ್ಚಿನ ಚಿತ್ರಗಳು ಇದಾಗಿದ್ದು, ಅವರಲ್ಲಿ ಹಲವರು ಕೋವಿಡ್ ನಂತರ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ರಾಜೀವ್ ಚಂದ್ರಶೇಖರ್ ಅವರು 26ನೇ ಬಾರಿ ಇಲ್ಲಿಗೆ ಭೇಟಿ ನೀಡುತ್ತಿದ್ದು, ‘ನನ್ನ 26ನೇ ವರ್ಷದ ಅಯ್ಯಪ್ಪನ ದರ್ಶನ ಇದಾಗಿದೆ. ಸಾವಿರಾರು ಭಕ್ತರೊಂದಿಗೆ ಶಬರಿಮಲೆಯಲ್ಲಿ ತೆರಳಿದಾಗ ತೆಗೆದ ಫೋಟೋ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kerala: ಶಬರಿಮಲೆ ಅಯ್ಯಪ್ಪ ದೇಗುಲದ ಗರ್ಭಗುಡಿ ಪ್ರವೇಶದ್ವಾರ ಬಳಿ, ವಿಜಯ ಮಲ್ಯ ನೀಡಿದ್ದ ಚಿನ್ನದ ಲೇಪಿತ ಛಾವಣಿ ಸೋರುತಿದೆ!

ಬೆಂಗಳೂರಿನ ಅಯ್ಯಪ್ಪ ದೇವಸ್ಥಾನದಿಂದ ಇರುಮುಡಿಕಟ್ಟು ತುಂಬಿಕೊಂಡು ಕೇರಳದ ಪಟ್ಟಣಂತಿಟ್ಟಗೆ ತೆರಳಿದ ಸಚಿವರು, ಯಾತ್ರಾರ್ಥಿಗಳೊಂದಿಗೆ ಪಾದಯಾತ್ರೆ ಆರಂಭಿಸಿದ್ದರು. ಇಂದು ಬೆಳಗ್ಗೆ ಪಂಜಾಬದಿಂದ ಇರುಮುಡಿ ಹೊತ್ತುಕೊಂಡು ಪಾದಯಾತ್ರೆ ಆರಂಭಿಸಿದ ರಾಜೀವ್ ಚಂದ್ರಶೇಖರ್ ಒಂದೂವರೆ ಗಂಟೆಯಲ್ಲಿ ಅಯ್ಯಪ್ಪ ಸ್ವಾಮಿಯ ಸನ್ನಿಧಾನ ತಲುಪಿದ್ದಾರೆ. ಅಯ್ಯಪ್ಪನ ದರ್ಶನ ಪಡೆದ ರಾಜೀವ್ ಚಂದ್ರಶೇಖರ್ ಬಳಿಕ ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ