AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ 18 ವರ್ಷದ ಸಾರ್ವಜನಿಕ ಸೇವೆ ಈ ರೀತಿ ಅಂತ್ಯವಾಗುತ್ತೆಂದು ನಿರೀಕ್ಷಿಸಿರಲಿಲ್ಲ: ರಾಜೀವ್ ಚಂದ್ರಶೇಖರ್

Rajeev Chandrashekhar X Post: ಚುನಾವಣಾ ಸೋಲಿನೊಂದಿಗೆ ನನ್ನ 18 ವರ್ಷದ ಸಾರ್ವಜನಿಕ ಅಂತ್ಯವಾಗುವ ನಿರೀಕ್ಷೆ ಇರಲಿಲ್ಲ ಎಂದು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಮೋದಿ ನೇತೃತ್ವದ ಎರಡನೇ ಸರ್ಕಾರದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ತನ್ನ ಪಾಲಿನ ಭಾಗ್ಯ ಎಂದು ಅವರು ಹೇಳಿಕೊಂಡಿದ್ದಾರೆ. ರಾಜೀವ್ ಚಂದ್ರಶೇಖರ್ ಅವರು ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸಿ ಶಶಿ ತರೂರ್ ಎದುರು ಸೋಲಪ್ಪಿದ್ದರು.

ನನ್ನ 18 ವರ್ಷದ ಸಾರ್ವಜನಿಕ ಸೇವೆ ಈ ರೀತಿ ಅಂತ್ಯವಾಗುತ್ತೆಂದು ನಿರೀಕ್ಷಿಸಿರಲಿಲ್ಲ: ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 09, 2024 | 7:57 PM

Share

ನವದೆಹಲಿ, ಜೂನ್ 9: ನನ್ನ ಸಾರ್ವಜನಿಕ ಜೀವನವು ಚುನಾವಣೆಯಲ್ಲಿ ಸೋಲಿನೊಂದಿಗೆ ಅಂತ್ಯವಾಗುತ್ತದೆ ಎಂದು ಭಾವಿಸಿರಲಿಲ್ಲ ಎಂದು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಂದು ಭಾನುವಾರ ಹೇಳಿದ್ದಾರೆ. ಮೋದಿ 2.0 ಸರ್ಕಾರದಲ್ಲಿ ಸಚಿವರಾಗಿದ್ದ ರಾಜೀವ್ ಚಂದ್ರಶೇಖರ್ ಅವರಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದೆ. ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್​ನ ಶಶಿ ತರೂರ್ ಎದುರು ಸೋಲಪ್ಪಿದ್ದರು. ಈ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಈ ವೇಳೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ ಅವರು, ತಾನು ಬಿಜೆಪಿ ಕಾರ್ಯಕರ್ತನಾಗಿ ಪಕ್ಷದ ಪರವಾಗಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ.

‘ಇವತ್ತು ನನ್ನ 18 ವರ್ಷದ ಸಾರ್ವಜನಿಕ ಸೇವೆ ಅಂತ್ಯವಾಗುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೋದಿ 2.0 ತಂಡದಲ್ಲಿ 3 ವರ್ಷ ಸೇವೆ ಸಲ್ಲಿಸುವ ಸೌಭಾಗ್ಯ ನನ್ನದಾಗಿತ್ತು. ಚುನಾವಣೆಯಲ್ಲಿ ಸೋಲು ಮೂಲಕ ನನ್ನ 18 ವರ್ಷದ ಸಾರ್ವಜನಿಕ ಸೇವೆ ನಿಲ್ಲಿಸುತ್ತೇನೆಂದು ಭಾವಿಸಿರಲಿಲ್ಲ. ನನಗೆ ಬೆಂಬಲ ನೀಡಿದ ಕಾರ್ಯಕರ್ತರು, ನಾಯಕರಿಗೆ ನನ್ನ ಧನ್ಯವಾದಗಳು. ಕಳೆದ 3 ವರ್ಷದಲ್ಲಿ ನನ್ನೊಂದಿಗೆ ಇದ್ದ ಸಹೋದ್ಯೋಗಿಗಳಿಗೂ ಧನ್ಯವಾದಗಳು. ಬಿಜೆಪಿ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ಕೆಲಸ ಮುಂದುವರಿಸುತ್ತೇನೆ,’ ಎಂದು ರಾಜೀವ್ ಚಂದ್ರಶೇಖರ್ ತಮ್ಮ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: 72 ಸಚಿವರು, 11 ಮಿತ್ರರಾಷ್ಟ್ರಗಳು, 24 ರಾಜ್ಯಗಳು; ಪ್ರಮಾಣ ವಚನ ಸ್ವೀಕರಿಸಿದ ಮೋದಿಯ ಹೊಸ ಟೀಂ

ರಾಜೀವ್ ಚಂದ್ರಶೇಖರ್ ಕೇರಳ ಮೂಲದವರಾದರೂ ಬೆಂಗಳೂರಿನ ಉದ್ಯಮಿಯಾಗಿದ್ದವರು. ಬಿಜೆಪಿಯ ವಿವಿಧ ಸ್ತರದ ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯಸಭೆ ಮೂಲಕ ಸಂಸತ್ ಪ್ರವೇಶಿಸಿದ ಅವರು 2020ರಲ್ಲಿ ಕೇಂದ್ರ ಸಚಿವರಾಗಿ ಕೆಲಸ ಆರಂಭಿಸಸಿದರು. ಎಲೆಕ್ಟ್ರಾನಿಕ್ಸ್, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಮೂರು ವರ್ಷ ಕೆಲಸ ಮಾಡಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಎದುರು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತರು. ಶಶಿತರೂರ್ ಶೇ. 37.2ರಷ್ಟು ಮತ ಪಡೆದರೆ, ರಾಜೀವ್ ಚಂದ್ರಶೇಖರ್ ಪಡೆದ ಮತಗಳ ಪ್ರಮಾಣ ಶೇ. 35.5ರಷ್ಟಿದೆ. ಸೋಲುವ ಮುನ್ನ ಕಠಿಣ ಪೈಪೋಟಿ ನೀಡುವಲ್ಲಿ ಸಫಲರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ