AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಆರೋಗ್ಯ ಅಸೆಂಬ್ಲಿಯ ಪ್ರಮುಖ ಸಮಿತಿ ಅಧ್ಯಕ್ಷರಾಗಿ ಭಾರತದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ನೇಮಕ

ಭಾರತದ ರಾಜೇಶ್ ಭೂಷಣ್ ಅವರನ್ನು 75 ನೇ ವಿಶ್ವ ಆರೋಗ್ಯ ಅಸೆಂಬ್ಲಿಯ ಬಿ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಟ್ವೀಟ್ ಮಾಡಿದೆ.

ವಿಶ್ವ ಆರೋಗ್ಯ ಅಸೆಂಬ್ಲಿಯ ಪ್ರಮುಖ ಸಮಿತಿ ಅಧ್ಯಕ್ಷರಾಗಿ ಭಾರತದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ನೇಮಕ
ರಾಜೇಶ್ ಭೂಷಣ್
TV9 Web
| Edited By: |

Updated on:May 24, 2022 | 7:52 PM

Share

ದೆಹಲಿ: ಭಾರತದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್  (Rajesh Bhushan)ಅವರನ್ನು ಮಂಗಳವಾರ 75 ನೇ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ (75th World Health Assembly) ಪ್ರಮುಖ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಮಿತಿ ಪ್ರಾಥಮಿಕವಾಗಿ ವಿಶ್ವಸಂಸ್ಥೆಯ ಆರೋಗ್ಯ ಸಂಸ್ಥೆಯ ಹಣಕಾಸು ಮತ್ತು ನಿರ್ವಹಣೆ ವಿಷಯಗಳನ್ನು ನಿಭಾಯಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ವಾರ್ಷಿಕ ಸಭೆಯು ಮೇ 22 ಮತ್ತು 28 ರ ನಡುವೆ ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿ ನಡೆಯಲಿದೆ. ಆರೋಗ್ಯವನ್ನು ಉತ್ತೇಜಿಸಲು ಮತ್ತು ಪ್ರಪಂಚದಾದ್ಯಂತ ರೋಗದ ಹೊರೆಯನ್ನು ಕಡಿಮೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪಿಸಲಾಗಿತ್ತು. ವಿಶ್ವ ಸಂಸ್ಥೆಯ ಭಾಗವಾಗಿರುವ ಇದು ಭಾರತವನ್ನು ಒಳಗೊಂಡಿರುವ ತನ್ನ 194 ಸದಸ್ಯ ರಾಷ್ಟ್ರಗಳಿಂದ ತನ್ನ ಗುರಿಗಳು ಮತ್ತು ಆದ್ಯತೆಗಳಿಗೆ ನಿರ್ದೇಶನವನ್ನು ತೆಗೆದುಕೊಳ್ಳುತ್ತದೆ. ಪ್ರತಿ ವರ್ಷ ವರ್ಲ್ಡ್ ಹೆಲ್ತ್ ಅಸೆಂಬ್ಲಿಯು ಆರೋಗ್ಯ ಸವಾಲುಗಳು ಮತ್ತು ವಿಮರ್ಶೆಗೆ ಪ್ರತಿಕ್ರಿಯೆಗಳ ದೀರ್ಘ ಮತ್ತು ಸಂಕೀರ್ಣ ಪಟ್ಟಿಯನ್ನು ಹೊಂದಿದೆ. ಅಸೆಂಬ್ಲಿಯು ಸಮಿತಿ A ಮತ್ತು ಸಮಿತಿ B ಎಂಬ ಎರಡು ರೀತಿಯ ಸಮಿತಿಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಸಮಿತಿ ಎ ತಾಂತ್ರಿಕ ಮತ್ತು ಆರೋಗ್ಯ ವಿಷಯಗಳನ್ನು ಚರ್ಚಿಸಲು ಉದ್ದೇಶಿಸಲಾಗಿದೆ. ಅದೇ ವೇಳೆ ಸಮಿತಿ ಬಿ ಹಣಕಾಸು ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಚರ್ಚಿಸುತ್ತದೆ. ರಾಜೇಶ್ ಭೂಷಣ್ ಅವರನ್ನು ಸಮಿತಿ ಬಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಭಾರತದ ರಾಜೇಶ್ ಭೂಷಣ್ ಅವರನ್ನು 75 ನೇ ವಿಶ್ವ ಆರೋಗ್ಯ ಅಸೆಂಬ್ಲಿಯ ಬಿ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಟ್ವೀಟ್ ಮಾಡಿದೆ.

ಭಾರತದ ಪ್ರೆಸ್ ಆಂಡ್ ಇನ್ಫಾರ್ಮೇಷನ್ ಬ್ಯೂರೋ ಪ್ರಕಾರ ಸಮಿತಿ B, ಈ ವರ್ಷ, ಅನೇಕ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿ ವರದಿಗಳನ್ನು ಸಿದ್ಧಪಡಿಸುತ್ತದೆ. ವಿಷಯಗಳು ಪೂರ್ವ ಜೆರುಸಲೆಮ್ ಮತ್ತು ಆಕ್ರಮಿತ ಸಿರಿಯನ್ ಗೋಲಾನ್ ಸೇರಿದಂತೆ ಆಕ್ರಮಿತ ಪ್ಯಾಲೇಸ್ಟಿನಿಯನ್ ಪ್ರದೇಶದ ಆರೋಗ್ಯ ಪರಿಸ್ಥಿತಿಗಳನ್ನು ಒಳಗೊಂಡಿವೆ. 2022-2023 ವರ್ಷದ ಡಬ್ಲ್ಯುಎಚ್ ಒ ಬಜೆಟ್, ಲೈಂಗಿಕ ಶೋಷಣೆಯ ತಡೆಗಟ್ಟುವಿಕೆ, ಡಬ್ಲ್ಯುಎಚ್​​ಒ ಸುಧಾರಣೆಗಳು, ಜಾಗತಿಕ ಕಾರ್ಯತಂತ್ರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಕ್ರಿಯಾ ಯೋಜನೆ, ನಾವೀನ್ಯತೆ ಮತ್ತು ಬೌದ್ಧಿಕ ಆಸ್ತಿ, ಡಬ್ಲ್ಯುಎಚ್​​ಒನ ಆಡಿಟ್ ವರದಿ ಮತ್ತು ಅಂತರ್ ಸರ್ಕಾರಿ ಸಂಸ್ಥೆಗಳ ಸಮಸ್ಯೆಗಳ ಬಗ್ಗೆ ವರದಿ ಸಿದ್ಧ ಪಡಿಸಲಿದೆ..

ಇದಕ್ಕೆ ಪ್ರತಿಕ್ರಿಯೆಯಾಗಿ ಆರೋಗ್ಯ ಕಾರ್ಯದರ್ಶಿ ಅವರು “ಇದು ಭಾರತಕ್ಕೆ ಸಂದ ಗೌರವದೆ” ಎಂದು ಹೇಳಿದರು.

ಇದನ್ನೂ ಓದಿ
Image
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ; ಜಾಗರೂಕರಾಗಿರಿ ಎಂದ ಕೇಂದ್ರ
Image
ಶೇ 5-10 ಕೊವಿಡ್ ಪ್ರಕರಣಗಳಿಗೆ ಆಸ್ಪತ್ರೆ ಅಗತ್ಯವಿರುತ್ತದೆ, ಈ‌ ಪರಿಸ್ಥಿತಿ ಬಹಳ ವೇಗವಾಗಿ ಬದಲಾಗಬಹುದು: ರಾಜೇಶ್ ಭೂಷಣ್
Image
Coronavirus: ಕೊವಿಡ್ ಟೆಸ್ಟ್ ಹೆಚ್ಚಳಕ್ಕೆ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸೂಚನೆ
Image
ವಿಶ್ವದಲ್ಲಿ ಕೊರೊನಾ 4 ಬಾರಿ ಉಲ್ಬಣವಾಗಿದೆ: ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 358 ಕ್ಕೆ ಏರಿಕೆಯಾಗುತ್ತಿದ್ದಂತೆ ಕೇಂದ್ರದಿಂದ ಎಚ್ಚರಿಕೆ

ಏತನ್ಮಧ್ಯೆ, ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಎರಡನೇ ಅವಧಿಯನ್ನು ಮುಂದುವರಿಸುವ ಸಾಧ್ಯತೆಯಿದೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಜನರ ಪ್ರಕಾರ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 7:35 pm, Tue, 24 May 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ