My India My Life Goals: ಸತತ 9 ವರ್ಷಗಳಿಂದ ಗಂಗಾನದಿಯನ್ನು ಸ್ವಚ್ಛಗೊಳಿಸುತ್ತಿರುವ ರಾಜೇಶ್ ಶುಕ್ಲಾ

ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ಮನುಷ್ಯನ ಮೂಲಭೂತ ಕರ್ತವ್ಯ. ಪರಿಸರವಿಲ್ಲದೆ ಮನುಷ್ಯರಾದ ನಾವಿರಲು ಸಾಧ್ಯವಿಲ್ಲ. ಪರಿಸರ ಸಂರಕ್ಷಣೆ ಮಾಡಲು ನಮ್ಮಲ್ಲಿ ಹುಮ್ಮಸ್ಸು ಹಾಗೂ ಉತ್ಸಾಹ ಮೂಡಲು, ಸತತ 9 ವರ್ಷಗಳಿಂದಲೂ ಪರಿಸರ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿರುವ ರಾಜೇಶ್ ಶುಕ್ಲಾ ಅವರ ಸ್ಪೂರ್ತಿದಾಯಕ ಕಥೆಯನ್ನು ನೋಡೋಣ.

My India My Life Goals: ಸತತ 9 ವರ್ಷಗಳಿಂದ ಗಂಗಾನದಿಯನ್ನು ಸ್ವಚ್ಛಗೊಳಿಸುತ್ತಿರುವ ರಾಜೇಶ್ ಶುಕ್ಲಾ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 17, 2023 | 4:35 PM

ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. 2023 ರ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಕೇಂದ್ರವು ‘ಮೈ ಇಂಡಿಯಾ ಮೈ ಲೈಫ್ ಗೋಲ್’ (My India My Life Goals) ಎಂಬ ವಿಶೇಷ ಆಂದೋಲನಕ್ಕೆ ಚಾಲನೆ ನೀಡಿದೆ. ಈ ಕಾರ್ಯಕ್ರಮವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಒಂದು ಭಾಗವಾಗಿದ್ದು, ಈ ಆಂದೋಲನದ ಮುಖ್ಯ ಉದ್ದೇಶವೆಂದರೆ ಜನರಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಪರಿಸರ ಸಂರಕ್ಷಣೆಯ ಭಾಗವಾಗುವಂತೆ ಪ್ರೇರೇಪಿಸುವುದು. ಪರಿಸರ ಸಂರಕ್ಷಣೆಯೂ ಕೂಡಾ ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯವಾಗಿದೆ. ಟಿ.ವಿ9 ಕೂಡಾ ಈ ಅಭಿಯಾನದಲ್ಲಿ ಭಾಗವಹಿಸುತ್ತಿದ್ದು, ಪ್ರತಿಯೊಬ್ಬರೂ ಕೂಡಾ ಪರಿಸರವನ್ನು ಉಳಿಸಬೇಕು ಹಾಗೂ ಪರಿಸರದ ಸ್ವಚ್ಛತೆಯನ್ನು ಕಾಪಾಡಬೇಕೆಂದು ನಾವು ನಿಮ್ಮಲ್ಲಿ ಮನವಿ ಮಾಡುತ್ತಿದ್ದೇವೆ.

ಪರಿಸರ ಸಂರಕ್ಷಣೆಯಲ್ಲಿ ಹಾಗೂ ಮರಗಿಡಗಳನ್ನು ನೆಡುವಲ್ಲಿ ಸಾಲುಮರದ ತಿಮ್ಮಕ್ಕರವರ ಮಹಾನ್ ಸಾಧನೆಯ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಮರಗಿಡಗಳನ್ನು ಬೆಳೆಸಿದರೆ, ಪರಿಸರವನ್ನು ಉಳಿಸಲು ಸಾಧ್ಯ ಎಂದು ನಮಗೆಲ್ಲರಿಗೂ ಸ್ಪೂರ್ತಿ ತುಂಬಿದ ತಾಯಿಯವರು. ಇಂದು ನಾವು ನಿಮಗೆ ಉತ್ತರ ಪ್ರದೇಶದ ವಾರಣಾಸಿಯ ರಾಜೇಶ್ ಶುಕ್ಲಾ ಅವರ ಸ್ಪೂರ್ತಿದಾಯಕ ಕಥೆಯ ಬಗ್ಗೆ ತಿಳಿಸಿಕೊಡುತ್ತೇವೆ. ಪ್ರಕೃತಿಯನ್ನು ಸಂರಕ್ಷಿಸುವಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಶುಕ್ಲಾ ಅವರು ಸತತ 9 ವರ್ಷಗಳಿಂದಲೂ ಪರಿಸರ ರಕ್ಷಣೆಯ ಕಾರ್ಯದಲ್ಲಿ ನಿರತರಾಗಿದ್ದಾರೆ.

ಶುಕ್ಲಾ ಅವರ ಪರಿಸರ ಸ್ವಚ್ಛತೆಯ ದಿನಚರಿಯ ಬಗ್ಗೆ ನೋಡುವುದಾದರೆ, ಗಂಗಾ ಶುದ್ದೀಕರಣ ಕಾರ್ಯಕರ್ತರಾಗಿರುವ ರಾಜೇಶ್ ಶುಕ್ಲಾ ತನ್ನ ಕಾರ್ಯಕರ್ತರ ತಂಡದೊಂದಿಗೆ, ಪ್ರತಿದಿನ ಗಂಗಾ ನದಿಯನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಪ್ರತಿದಿನ ಬೆಳಗ್ಗೆ 5 ಗಂಟೆಗೆ, ರಾಜೇಶ್ ಶುಕ್ಲಾ ಅವರು ತಮ್ಮ ತಂಡದೊಂದಿಗೆ ಸ್ವಚ್ಛತಾ ಕಾರ್ಯಾಚರಣೆಯನ್ನು ಆಯೋಜಿಸಲು ತಮ್ಮ ಸ್ಕೂಟರ್​​ನಲ್ಲಿ ಗಂಗಾ ನದಿಯ ದಡಕ್ಕೆ ಹೋಗುತ್ತಾರೆ. ಪ್ರತಿದಿನ ಅವರು ತಮ್ಮ ತಂಡದೊಂದಿಗೆ ಮೂರು ಗಂಟೆಗಳ ಕಾಲ ನದಿಯನ್ನು ಸ್ವಚ್ಛಗೊಳಿಸುತ್ತಾರೆ. ಹಾಗೂ ಗಂಗಾ ನದಿಯನ್ನು ಸ್ವಚ್ಛವಾಗಿಡಲು ಮತ್ತು ನದಿಯಲ್ಲಿ ಕಸವನ್ನು ಎಸೆಯುವ ಮೂಲಕ ನದಿಯನ್ನು ಕಲುಷಿತಗೊಳಿಸದಂತೆ ಅಲ್ಲಿಗೆ ಬರುವ ಭಕ್ತರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಒಂಬತ್ತು ವರ್ಷಗಳಿಂದ, ಶುಕ್ಲಾ ಅವರು ನದಿಯಲ್ಲಿ ಬಿಡುವ ಪಾಲಿಥಿನ್ ಚೀಲಗಳು, ಇನ್ನಿತರ ಕಸಗಳಿಂದ ನದಿನೀರಿಗೆ ಉಂಟಾಗುವಂತಹ ಹಾನಿಕಾರಕ ಸ್ವರೂಪಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: My India My Life Goals; ಮಿಷನ್ ಲೈಫ್ ನೊಂದಿಗೆ ಹೆಜ್ಜೆ ಹಾಕುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ: ಜಿ ಕಿಶನ್ ರೆಡ್ಡಿ. ಕೇಂದ್ರ ಸಚಿವ

ನಾವು ಸಾಮೂಹಿಕ ಜವಬ್ದಾರಿಯನ್ನು ತೆಗೆದುಕೊಂಡರೆ ನಮ್ಮ ಪರಿಸರವು ಸುಧಾರಿಸುತ್ತದೆ ಮತ್ತು ನಮ್ಮ ದೇಶವೂ ಸ್ವಚ್ಛ ಮತ್ತು ಸದೃಢವಾಗುತ್ತದೆ ಹಾಗೂ ಪರಿಸರ ಸಂರಕ್ಷಣೆಗಾಗಿ ನಾವೆಲ್ಲರೂ ಹೋರಾಡಿದರೆ ಮಾತ್ರ ಪರಿಸರ ಸುಧಾರಿಸುತ್ತದೆ ಆಗ ಮಾತ್ರ ಸ್ವಸ್ಥ ಭಾರತ ಉದಯವಾಗುತ್ತದೆ ಎಂದು ರಾಜೇಶ್ ಶುಕ್ಲಾ ಹೇಳುತ್ತಾರೆ. ನಮ್ಮ ರಾಷ್ಟ್ರವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಪರಿಸರಕ್ಕಾಗಿ ಸಂಘಟಿತವಾಗಿ ಹೋರಾಡಲು ಇವರ ಕಥೆ ನಮಗೆ ಸ್ಪೂರ್ತಿ ನೀಡುತ್ತದೆ.

ಮೈ ಇಂಡಿಯಾ ಮೈ ಲೈಫ್ ಗೋಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್