AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ

ದೆಹಲಿಯಲ್ಲಿ 2 ದಿನಗಳ ಜಿ20 ಶೃಂಗಸಭೆ ನಿನ್ನೆಯಿಂದ ಶುರುವಾಗಿದೆ, ಎರಡನೇ ದಿನವಾದ ಇಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ತೆರಳಿದ್ದರೆ, ಇತ್ತ ಜಿ20 ನಾಯಕರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್​ಗೆ ಹೋಗಿದ್ದಾರೆ. ಸ್ಪೇನ್‌ನ ವೈಸ್​ಪ್ರೆಸಿಡೆಂಟ್ ನಾಡಿಯಾ ಕ್ಯಾಲ್ವಿನೋ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ಓಮನ್​ನ ಅಸ್ಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್ ತೆರಳಿದ್ದಾರೆ.

ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ
ಮಹಾತ್ಮ ಗಾಂಧಿ
ನಯನಾ ರಾಜೀವ್
|

Updated on: Sep 10, 2023 | 8:50 AM

Share

ದೆಹಲಿಯಲ್ಲಿ 2 ದಿನಗಳ ಜಿ20 ಶೃಂಗಸಭೆ ನಿನ್ನೆಯಿಂದ ಶುರುವಾಗಿದೆ, ಎರಡನೇ ದಿನವಾದ ಇಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ತೆರಳಿದ್ದರೆ, ಇತ್ತ ಜಿ20 ನಾಯಕರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್​ಗೆ ಹೋಗಿದ್ದಾರೆ. ಸ್ಪೇನ್‌ನ ವೈಸ್​ಪ್ರೆಸಿಡೆಂಟ್ ನಾಡಿಯಾ ಕ್ಯಾಲ್ವಿನೋ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ಓಮನ್​ನ ಅಸ್ಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್ ತೆರಳಿದ್ದಾರೆ.

ಜಿ20 ಶೃಂಗಸಭೆಯ ಎರಡನೇ ದಿನದ ವೇಳಾಪಟ್ಟಿ

8.15 ರಿಂದ 9 ರವರೆಗೆ – ಜಾಗತಿಕ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ರಾಜ್‌ಘಾಟ್ ತಲುಪುತ್ತಾರೆ. ರಾಜ್‌ಘಾಟ್‌ನಲ್ಲಿರುವ ಲೀಡರ್ಸ್ ಲಾಂಜ್‌ನಲ್ಲಿ ಶಾಂತಿ ಗೋಡೆಗೆ ಸಹಿ ಹಾಕಲಿದ್ದಾರೆ. ಬೆಳಿಗ್ಗೆ 9 ರಿಂದ 9.20 ರವರೆಗೆ – ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವರು. ಮಹಾತ್ಮ ಗಾಂಧೀಜಿಯವರ ನೆಚ್ಚಿನ ಭಕ್ತಿಗೀತೆಗಳ ನೇರಪ್ರಸಾರ ನಡೆಯಲಿದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ: ಅಕ್ಷರಧಾಮಕ್ಕೆ ಭೇಟಿಕೊಟ್ಟ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ

9.20 – ಜಾಗತಿಕ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ಲೀಡರ್ಸ್ ಲಾಂಜ್‌ಗೆ ತೆರಳುತ್ತಾರೆ ಮತ್ತು ನಂತರ ಭಾರತ್ ಮಂಟಪಕ್ಕೆ ತೆರಳುತ್ತಾರೆ. 9.40 ರಿಂದ 10.15 ರವರೆಗೆ – ಜಾಗತಿಕ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ಭಾರತ ಮಂಟಪವನ್ನು ತಲುಪುತ್ತಾರೆ. 10.15 ರಿಂದ 10.28 ರವರೆಗೆ ಭಾರತ ಮಂಟಪದ ದಕ್ಷಿಣ ಪ್ಲಾಜಾದಲ್ಲಿ ಸಸಿ ನೆಡುವ ಸಮಾರಂಭ ನಡೆಯಲಿದೆ. ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 12.30 ರವರೆಗೆ – ಜಿ 20 ಸಭೆಯ ಮೂರನೇ ಅಧಿವೇಶನ ಒನ್ ಫ್ಯೂಚರ್ ಪ್ರಾರಂಭವಾಗುತ್ತದೆ. ಸೆಪ್ಟೆಂಬರ್ 10 ರಂದು (ಭಾನುವಾರ) ಜಿ-20 ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ 9 ದೇಶಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ. ಜಿ20 ಶೃಂಗಸಭೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನಡುವೆ ಭಾನುವಾರ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದೆ. ಪ್ರಧಾನಿ ಮೋದಿ ಅವರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಮತ್ತು ಕೊಮೊರೊಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಇಯು/ಇಸಿ, ಬ್ರೆಜಿಲ್ ಮತ್ತು ನೈಜೀರಿಯಾ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಫ್ರಾನ್ಸ್ ಅಧ್ಯಕ್ಷರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ