ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ

ದೆಹಲಿಯಲ್ಲಿ 2 ದಿನಗಳ ಜಿ20 ಶೃಂಗಸಭೆ ನಿನ್ನೆಯಿಂದ ಶುರುವಾಗಿದೆ, ಎರಡನೇ ದಿನವಾದ ಇಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ತೆರಳಿದ್ದರೆ, ಇತ್ತ ಜಿ20 ನಾಯಕರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್​ಗೆ ಹೋಗಿದ್ದಾರೆ. ಸ್ಪೇನ್‌ನ ವೈಸ್​ಪ್ರೆಸಿಡೆಂಟ್ ನಾಡಿಯಾ ಕ್ಯಾಲ್ವಿನೋ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ಓಮನ್​ನ ಅಸ್ಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್ ತೆರಳಿದ್ದಾರೆ.

ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ
ಮಹಾತ್ಮ ಗಾಂಧಿ
Follow us
|

Updated on: Sep 10, 2023 | 8:50 AM

ದೆಹಲಿಯಲ್ಲಿ 2 ದಿನಗಳ ಜಿ20 ಶೃಂಗಸಭೆ ನಿನ್ನೆಯಿಂದ ಶುರುವಾಗಿದೆ, ಎರಡನೇ ದಿನವಾದ ಇಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ತೆರಳಿದ್ದರೆ, ಇತ್ತ ಜಿ20 ನಾಯಕರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್​ಗೆ ಹೋಗಿದ್ದಾರೆ. ಸ್ಪೇನ್‌ನ ವೈಸ್​ಪ್ರೆಸಿಡೆಂಟ್ ನಾಡಿಯಾ ಕ್ಯಾಲ್ವಿನೋ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ಓಮನ್​ನ ಅಸ್ಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್ ತೆರಳಿದ್ದಾರೆ.

ಜಿ20 ಶೃಂಗಸಭೆಯ ಎರಡನೇ ದಿನದ ವೇಳಾಪಟ್ಟಿ

8.15 ರಿಂದ 9 ರವರೆಗೆ – ಜಾಗತಿಕ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ರಾಜ್‌ಘಾಟ್ ತಲುಪುತ್ತಾರೆ. ರಾಜ್‌ಘಾಟ್‌ನಲ್ಲಿರುವ ಲೀಡರ್ಸ್ ಲಾಂಜ್‌ನಲ್ಲಿ ಶಾಂತಿ ಗೋಡೆಗೆ ಸಹಿ ಹಾಕಲಿದ್ದಾರೆ. ಬೆಳಿಗ್ಗೆ 9 ರಿಂದ 9.20 ರವರೆಗೆ – ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವರು. ಮಹಾತ್ಮ ಗಾಂಧೀಜಿಯವರ ನೆಚ್ಚಿನ ಭಕ್ತಿಗೀತೆಗಳ ನೇರಪ್ರಸಾರ ನಡೆಯಲಿದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ: ಅಕ್ಷರಧಾಮಕ್ಕೆ ಭೇಟಿಕೊಟ್ಟ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ

9.20 – ಜಾಗತಿಕ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ಲೀಡರ್ಸ್ ಲಾಂಜ್‌ಗೆ ತೆರಳುತ್ತಾರೆ ಮತ್ತು ನಂತರ ಭಾರತ್ ಮಂಟಪಕ್ಕೆ ತೆರಳುತ್ತಾರೆ. 9.40 ರಿಂದ 10.15 ರವರೆಗೆ – ಜಾಗತಿಕ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ಭಾರತ ಮಂಟಪವನ್ನು ತಲುಪುತ್ತಾರೆ. 10.15 ರಿಂದ 10.28 ರವರೆಗೆ ಭಾರತ ಮಂಟಪದ ದಕ್ಷಿಣ ಪ್ಲಾಜಾದಲ್ಲಿ ಸಸಿ ನೆಡುವ ಸಮಾರಂಭ ನಡೆಯಲಿದೆ. ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 12.30 ರವರೆಗೆ – ಜಿ 20 ಸಭೆಯ ಮೂರನೇ ಅಧಿವೇಶನ ಒನ್ ಫ್ಯೂಚರ್ ಪ್ರಾರಂಭವಾಗುತ್ತದೆ. ಸೆಪ್ಟೆಂಬರ್ 10 ರಂದು (ಭಾನುವಾರ) ಜಿ-20 ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ 9 ದೇಶಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ. ಜಿ20 ಶೃಂಗಸಭೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನಡುವೆ ಭಾನುವಾರ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದೆ. ಪ್ರಧಾನಿ ಮೋದಿ ಅವರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಮತ್ತು ಕೊಮೊರೊಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಇಯು/ಇಸಿ, ಬ್ರೆಜಿಲ್ ಮತ್ತು ನೈಜೀರಿಯಾ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಫ್ರಾನ್ಸ್ ಅಧ್ಯಕ್ಷರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ