AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್​ಸ್ಟಾರ್​

‘ಅಣ್ಣಾತೆ’ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್​ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ರಜನಿಕಾಂತ್​ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್​ಸ್ಟಾರ್​
ರಜನಿಕಾಂತ್​
ರಾಜೇಶ್ ದುಗ್ಗುಮನೆ
| Edited By: |

Updated on:Dec 27, 2020 | 6:03 PM

Share

ಹೈದರಾಬಾದ್: ತೀವ್ರ ರಕ್ತದೊತ್ತಡದಿಂದ ಬಳಲುತ್ತಿದ್ದ ಸೂಪರ್​ ಸ್ಟಾರ್​ ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಮಧ್ಯಾಹ್ನ 3:30ರ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ.

‘ಅಣ್ಣಾತೆ’ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್​ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಈಗ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ​ಅಭಿಮಾನಿಗಳಿಗೆ ಸಮಾಧಾನ ತಂದಿದೆ.

ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ರಜನಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿತ್ತು. ನಿನ್ನೆ ರಜನಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು,  ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆದರೆ, ರಕ್ತದೊತ್ತಡ ಕಡಿಮೆ ಆಗಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ,  ಎಂದು ಹೇಳಿದ್ದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಜನಿಕಾಂತ್

ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ

Published On - 3:46 pm, Sun, 27 December 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ