AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ

ಅನ್ನಾತೆ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ
ರಜನಿಕಾಂತ್
ರಾಜೇಶ್ ದುಗ್ಗುಮನೆ
| Edited By: |

Updated on:Dec 26, 2020 | 3:27 PM

Share

ಹೈದರಾಬಾದ್​: ರಕ್ತದೊತ್ತಡದಲ್ಲಿ ತೀವ್ರ ಏರಿಳಿತ ಕಂಡ ಹಿನ್ನೆಲೆಯಲ್ಲಿ ತಮಿಳಿನ ಸೂಪರ್​ಸ್ಟಾರ್​ ರಜನಿಕಾಂತ್​ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆದರೆ, ರಕ್ತದೊತ್ತಡ ತಗ್ಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.

‘ಅನ್ನಾತೆ’ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್​ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ರಜನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯರು, ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆದರೆ, ರಕ್ತದೊತ್ತಡ ಕಡಿಮೆ ಆಗಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮತ್ತೊಮ್ಮೆ ಅವರನ್ನು ಪರೀಕ್ಷೆ ಮಾಡಿ ರಾತ್ರಿ ಮತ್ತೆ ವರದಿ ನೀಡುತ್ತೇವೆ ಎಂದು ಹೇಳಿದ್ದಾರೆ.

ಇಂದು ಸಂಜೆ ಮತ್ತೊಂದು ಪರೀಕ್ಷೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಚೇತರಿಕೆ ಕಂಡಿದ್ದು ತಿಳಿದು ಬಂದರೆ ಅವರನ್ನು ಇಂದೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ವೈದ್ಯರು ಚಿಂತನೆ ನಡೆಸಿದ್ದಾರೆ. ಇನ್ನು, ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಜೊತೆಯಲ್ಲಿದ್ದವರಿಗೆ ಕೊರೊನಾ ಪಾಸಿಟಿವ್: ನಟ ರಜನಿಕಾಂತ್​ ಆಸ್ಪತ್ರೆಗೆ ದಾಖಲು

Published On - 3:27 pm, Sat, 26 December 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ