AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ

ಅನ್ನಾತೆ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ
ರಜನಿಕಾಂತ್
ರಾಜೇಶ್ ದುಗ್ಗುಮನೆ
| Edited By: |

Updated on:Dec 26, 2020 | 3:27 PM

Share

ಹೈದರಾಬಾದ್​: ರಕ್ತದೊತ್ತಡದಲ್ಲಿ ತೀವ್ರ ಏರಿಳಿತ ಕಂಡ ಹಿನ್ನೆಲೆಯಲ್ಲಿ ತಮಿಳಿನ ಸೂಪರ್​ಸ್ಟಾರ್​ ರಜನಿಕಾಂತ್​ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆದರೆ, ರಕ್ತದೊತ್ತಡ ತಗ್ಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.

‘ಅನ್ನಾತೆ’ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್​ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ರಜನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯರು, ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆದರೆ, ರಕ್ತದೊತ್ತಡ ಕಡಿಮೆ ಆಗಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮತ್ತೊಮ್ಮೆ ಅವರನ್ನು ಪರೀಕ್ಷೆ ಮಾಡಿ ರಾತ್ರಿ ಮತ್ತೆ ವರದಿ ನೀಡುತ್ತೇವೆ ಎಂದು ಹೇಳಿದ್ದಾರೆ.

ಇಂದು ಸಂಜೆ ಮತ್ತೊಂದು ಪರೀಕ್ಷೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಚೇತರಿಕೆ ಕಂಡಿದ್ದು ತಿಳಿದು ಬಂದರೆ ಅವರನ್ನು ಇಂದೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ವೈದ್ಯರು ಚಿಂತನೆ ನಡೆಸಿದ್ದಾರೆ. ಇನ್ನು, ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಜೊತೆಯಲ್ಲಿದ್ದವರಿಗೆ ಕೊರೊನಾ ಪಾಸಿಟಿವ್: ನಟ ರಜನಿಕಾಂತ್​ ಆಸ್ಪತ್ರೆಗೆ ದಾಖಲು

Published On - 3:27 pm, Sat, 26 December 20

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!