AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯದಲ್ಲಿ ಮತ್ತೆ ಏರುಪೇರು; ಅಮೆರಿಕಾಗೆ ಹಾರಿದ ತಲೈವಾ ರಜನಿಕಾಂತ್​

ಕೆಲದಿನಗಳ ಹಿಂದೆ ರಜನಿ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ರು. ತಮ್ಮ ನೆಚ್ಚಿನ ನಟ ದಿಢೀರ್ ಅಂತಾ ಆಸ್ಪತ್ರೆ  ಸೇರಿದ್ದು ಎಲ್ಲರಿಗೂ ಶಾಕ್ ನೀಡಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ರಜನಿಕಾಂತ್ ಪರದಾಡಿದ್ದರು. ಈಗಲೂ ರಜನಿಕಾಂತ್ ಆರೋಗ್ಯ ಸುಧಾರಿಸಿಲ್ಲ. ಹೀಗಾಗಿಯೇ ಸದ್ಯ ರಜನಿ ಹೆಚ್ಚಿನ ಚಿಕಿತ್ಸೆಗೆ ಅಮೆರಿಕಗೆ ತೆರಳಿದ್ದಾರಂತೆ.

ಆರೋಗ್ಯದಲ್ಲಿ ಮತ್ತೆ ಏರುಪೇರು; ಅಮೆರಿಕಾಗೆ ಹಾರಿದ ತಲೈವಾ ರಜನಿಕಾಂತ್​
ಸೂಪರ್​ ಸ್ಟಾರ್ ರಜನಿಕಾಂತ್ ಅಮೆರಿಕಕ್ಕೆ ಪಯಣ..
ಪೃಥ್ವಿಶಂಕರ
| Edited By: |

Updated on:Jan 02, 2021 | 9:49 AM

Share

ಚೆನ್ನೈ: ತಮಿಳರ ಪಾಲಿನ ತಲೈವಾ, ಭಾರತದ ಸಿನಿ ರಂಗದ ಅನಭಿಶಕ್ತ ದೊರೆಯಾಗಿರುವ ಸೂಪರ್​ ಸ್ಟಾರ್ ರಜನಿಕಾಂತ್ ಅಮೆರಿಕಕ್ಕೆ ಹಾರಿದ್ದಾರೆ. ಇಷ್ಟಕ್ಕೂ ಸೂಪರ್ ಸ್ಟಾರ್ ರಜನಿಕಾಂತ್ ಅಮೆರಿಕಕ್ಕೆ ಹೋಗಿದ್ದಾದ್ರೂ ಏಕೆ..? ಇದರ ಹಿಂದಿನ ಉದ್ದೇಶವಾದ್ರೂ ಏನು ಅಂದ್ರೆ..

ಕೆಲದಿನಗಳ ಹಿಂದೆ ರಜನಿ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ರು. ತಮ್ಮ ನೆಚ್ಚಿನ ನಟ ದಿಢೀರ್ ಅಂತಾ ಆಸ್ಪತ್ರೆ  ಸೇರಿದ್ದು ಎಲ್ಲರಿಗೂ ಶಾಕ್ ನೀಡಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ರಜನಿಕಾಂತ್ ಪರದಾಡಿದ್ದರು. ಈಗಲೂ ರಜನಿಕಾಂತ್ ಆರೋಗ್ಯ ಸುಧಾರಿಸಿಲ್ಲ. ಹೀಗಾಗಿಯೇ ಸದ್ಯ ರಜನಿ ಹೆಚ್ಚಿನ ಚಿಕಿತ್ಸೆಗೆ ಅಮೆರಿಕಾಗೆ ತೆರಳಿದ್ದಾರಂತೆ.

ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಹೊರ ಬಂದಿದ್ರೂ.. ಇತ್ತೀಚೆಗೆ ಅನಾರೋಗ್ಯದ ಕಾರಣಕ್ಕೆ ಹೈದ್ರಾಬಾದ್​ನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ರು. ಈ ಮಧ್ಯೆ ರಕ್ತದೊತ್ತಡ ಏರುಪೇರಾಗಿದ್ದು, ರಜನಿ ಆರೋಗ್ಯ ಸುಧಾರಿಸಿರಲಿಲ್ಲ. ಚಿಕಿತ್ಸೆ ಪಡೆದು ಇತ್ತೀಚಿಗಷ್ಟೇ ಆಸ್ಪತ್ರೆಯಿಂದ ಹೊರ ಬಂದಿದ್ರೂ, ಸಮಸ್ಯೆ ಬಗೆಹರಿದಿರಲಿಲ್ಲ. ಹೀಗಾಗಿ ರಜನಿ ಮತ್ತೆ ಆಸ್ಪತ್ರೆಯತ್ತ ಮುಖ ಮಾಡಿದ್ದಾರೆ.

ಅಂದಹಾಗೆ ತಮ್ಮ ಹೊಸ ರಾಜಕೀಯ ಪಕ್ಷದ ಮೂಲಕ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸದ್ದು ಮಾಡಬೇಕಿದ್ದ ತಲೈವಾಗೆ ಆರೋಗ್ಯ ಕೈಕೊಟ್ಟಿದೆ. ಇದು ಅವ್ರಿಗೆ ಅತೀವ ನೋವುಂಟು ಮಾಡಿದೆ. ಇದು ರಜನಿಕಾಂತ್ ಅಭಿಮಾನಿಗಳಿಗೂ ನೋವು ತಂದಿದ್ದು, ನೆಚ್ಚಿನ ನಟನಿಗೆ ಏನಾಯ್ತೋ ಅಂತಾ ಚಿಂತೆಯಲ್ಲಿದ್ದಾರೆ. ಇಷ್ಟೆಲ್ಲದರ ನಡುವೆ ಸದ್ಯಕ್ಕೆ ರಾಜಕೀಯದಿಂದ ದೂರ ಉಳಿಯುವ ನಿರ್ಧಾರವನ್ನ ರಜನಿ ತೆಗೆದುಕೊಂಡಿರುವುದು ಅಭಿಮಾನಿಗಳಿಗೆ ಶಾಕ್ ಮೇಲೆ ಶಾಕ್ ನೀಡಿದಂತಾಗಿದೆ.

ಒಟ್ನಲ್ಲಿ ರಜನಿ ಅನಾರೋಗ್ಯದ ವಿಚಾರ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದೆ. ಆದ್ರೆ ರಜನಿ ಸದ್ಯಕ್ಕೆ ರಾಜಕೀಯದಿಂದ ಮಾತ್ರ ರೆಸ್ಟ್ ಪಡೆಯಲಿದ್ದಾರೆ. ಆದರೆ ಚಿತ್ರರಂಗದಲ್ಲಿ ಮುಂದುವರಿಯಲಿದ್ದಾರೆ. ಅಣ್ಣಾತೆ ಚಿತ್ರದ ಶೂಟಿಂಗ್ ನಡೀತಿದ್ದು, ರಜನಿ ಸಂಪೂರ್ಣ ಗುಣಮುಖರಾದ ಬಳಿಕ ಶೂಟಿಂಗ್ ಮುಂದುವರೆಯಲಿದೆ.

Published On - 9:41 am, Sat, 2 January 21

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?