AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯದಲ್ಲಿ ಮತ್ತೆ ಏರುಪೇರು; ಅಮೆರಿಕಾಗೆ ಹಾರಿದ ತಲೈವಾ ರಜನಿಕಾಂತ್​

ಕೆಲದಿನಗಳ ಹಿಂದೆ ರಜನಿ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ರು. ತಮ್ಮ ನೆಚ್ಚಿನ ನಟ ದಿಢೀರ್ ಅಂತಾ ಆಸ್ಪತ್ರೆ  ಸೇರಿದ್ದು ಎಲ್ಲರಿಗೂ ಶಾಕ್ ನೀಡಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ರಜನಿಕಾಂತ್ ಪರದಾಡಿದ್ದರು. ಈಗಲೂ ರಜನಿಕಾಂತ್ ಆರೋಗ್ಯ ಸುಧಾರಿಸಿಲ್ಲ. ಹೀಗಾಗಿಯೇ ಸದ್ಯ ರಜನಿ ಹೆಚ್ಚಿನ ಚಿಕಿತ್ಸೆಗೆ ಅಮೆರಿಕಗೆ ತೆರಳಿದ್ದಾರಂತೆ.

ಆರೋಗ್ಯದಲ್ಲಿ ಮತ್ತೆ ಏರುಪೇರು; ಅಮೆರಿಕಾಗೆ ಹಾರಿದ ತಲೈವಾ ರಜನಿಕಾಂತ್​
ಸೂಪರ್​ ಸ್ಟಾರ್ ರಜನಿಕಾಂತ್ ಅಮೆರಿಕಕ್ಕೆ ಪಯಣ..
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Jan 02, 2021 | 9:49 AM

Share

ಚೆನ್ನೈ: ತಮಿಳರ ಪಾಲಿನ ತಲೈವಾ, ಭಾರತದ ಸಿನಿ ರಂಗದ ಅನಭಿಶಕ್ತ ದೊರೆಯಾಗಿರುವ ಸೂಪರ್​ ಸ್ಟಾರ್ ರಜನಿಕಾಂತ್ ಅಮೆರಿಕಕ್ಕೆ ಹಾರಿದ್ದಾರೆ. ಇಷ್ಟಕ್ಕೂ ಸೂಪರ್ ಸ್ಟಾರ್ ರಜನಿಕಾಂತ್ ಅಮೆರಿಕಕ್ಕೆ ಹೋಗಿದ್ದಾದ್ರೂ ಏಕೆ..? ಇದರ ಹಿಂದಿನ ಉದ್ದೇಶವಾದ್ರೂ ಏನು ಅಂದ್ರೆ..

ಕೆಲದಿನಗಳ ಹಿಂದೆ ರಜನಿ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ರು. ತಮ್ಮ ನೆಚ್ಚಿನ ನಟ ದಿಢೀರ್ ಅಂತಾ ಆಸ್ಪತ್ರೆ  ಸೇರಿದ್ದು ಎಲ್ಲರಿಗೂ ಶಾಕ್ ನೀಡಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ರಜನಿಕಾಂತ್ ಪರದಾಡಿದ್ದರು. ಈಗಲೂ ರಜನಿಕಾಂತ್ ಆರೋಗ್ಯ ಸುಧಾರಿಸಿಲ್ಲ. ಹೀಗಾಗಿಯೇ ಸದ್ಯ ರಜನಿ ಹೆಚ್ಚಿನ ಚಿಕಿತ್ಸೆಗೆ ಅಮೆರಿಕಾಗೆ ತೆರಳಿದ್ದಾರಂತೆ.

ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಹೊರ ಬಂದಿದ್ರೂ.. ಇತ್ತೀಚೆಗೆ ಅನಾರೋಗ್ಯದ ಕಾರಣಕ್ಕೆ ಹೈದ್ರಾಬಾದ್​ನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ರು. ಈ ಮಧ್ಯೆ ರಕ್ತದೊತ್ತಡ ಏರುಪೇರಾಗಿದ್ದು, ರಜನಿ ಆರೋಗ್ಯ ಸುಧಾರಿಸಿರಲಿಲ್ಲ. ಚಿಕಿತ್ಸೆ ಪಡೆದು ಇತ್ತೀಚಿಗಷ್ಟೇ ಆಸ್ಪತ್ರೆಯಿಂದ ಹೊರ ಬಂದಿದ್ರೂ, ಸಮಸ್ಯೆ ಬಗೆಹರಿದಿರಲಿಲ್ಲ. ಹೀಗಾಗಿ ರಜನಿ ಮತ್ತೆ ಆಸ್ಪತ್ರೆಯತ್ತ ಮುಖ ಮಾಡಿದ್ದಾರೆ.

ಅಂದಹಾಗೆ ತಮ್ಮ ಹೊಸ ರಾಜಕೀಯ ಪಕ್ಷದ ಮೂಲಕ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸದ್ದು ಮಾಡಬೇಕಿದ್ದ ತಲೈವಾಗೆ ಆರೋಗ್ಯ ಕೈಕೊಟ್ಟಿದೆ. ಇದು ಅವ್ರಿಗೆ ಅತೀವ ನೋವುಂಟು ಮಾಡಿದೆ. ಇದು ರಜನಿಕಾಂತ್ ಅಭಿಮಾನಿಗಳಿಗೂ ನೋವು ತಂದಿದ್ದು, ನೆಚ್ಚಿನ ನಟನಿಗೆ ಏನಾಯ್ತೋ ಅಂತಾ ಚಿಂತೆಯಲ್ಲಿದ್ದಾರೆ. ಇಷ್ಟೆಲ್ಲದರ ನಡುವೆ ಸದ್ಯಕ್ಕೆ ರಾಜಕೀಯದಿಂದ ದೂರ ಉಳಿಯುವ ನಿರ್ಧಾರವನ್ನ ರಜನಿ ತೆಗೆದುಕೊಂಡಿರುವುದು ಅಭಿಮಾನಿಗಳಿಗೆ ಶಾಕ್ ಮೇಲೆ ಶಾಕ್ ನೀಡಿದಂತಾಗಿದೆ.

ಒಟ್ನಲ್ಲಿ ರಜನಿ ಅನಾರೋಗ್ಯದ ವಿಚಾರ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದೆ. ಆದ್ರೆ ರಜನಿ ಸದ್ಯಕ್ಕೆ ರಾಜಕೀಯದಿಂದ ಮಾತ್ರ ರೆಸ್ಟ್ ಪಡೆಯಲಿದ್ದಾರೆ. ಆದರೆ ಚಿತ್ರರಂಗದಲ್ಲಿ ಮುಂದುವರಿಯಲಿದ್ದಾರೆ. ಅಣ್ಣಾತೆ ಚಿತ್ರದ ಶೂಟಿಂಗ್ ನಡೀತಿದ್ದು, ರಜನಿ ಸಂಪೂರ್ಣ ಗುಣಮುಖರಾದ ಬಳಿಕ ಶೂಟಿಂಗ್ ಮುಂದುವರೆಯಲಿದೆ.

Published On - 9:41 am, Sat, 2 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!