Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯದಲ್ಲಿ ಮತ್ತೆ ಏರುಪೇರು; ಅಮೆರಿಕಾಗೆ ಹಾರಿದ ತಲೈವಾ ರಜನಿಕಾಂತ್​

ಕೆಲದಿನಗಳ ಹಿಂದೆ ರಜನಿ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ರು. ತಮ್ಮ ನೆಚ್ಚಿನ ನಟ ದಿಢೀರ್ ಅಂತಾ ಆಸ್ಪತ್ರೆ  ಸೇರಿದ್ದು ಎಲ್ಲರಿಗೂ ಶಾಕ್ ನೀಡಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ರಜನಿಕಾಂತ್ ಪರದಾಡಿದ್ದರು. ಈಗಲೂ ರಜನಿಕಾಂತ್ ಆರೋಗ್ಯ ಸುಧಾರಿಸಿಲ್ಲ. ಹೀಗಾಗಿಯೇ ಸದ್ಯ ರಜನಿ ಹೆಚ್ಚಿನ ಚಿಕಿತ್ಸೆಗೆ ಅಮೆರಿಕಗೆ ತೆರಳಿದ್ದಾರಂತೆ.

ಆರೋಗ್ಯದಲ್ಲಿ ಮತ್ತೆ ಏರುಪೇರು; ಅಮೆರಿಕಾಗೆ ಹಾರಿದ ತಲೈವಾ ರಜನಿಕಾಂತ್​
ಸೂಪರ್​ ಸ್ಟಾರ್ ರಜನಿಕಾಂತ್ ಅಮೆರಿಕಕ್ಕೆ ಪಯಣ..
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on:Jan 02, 2021 | 9:49 AM

ಚೆನ್ನೈ: ತಮಿಳರ ಪಾಲಿನ ತಲೈವಾ, ಭಾರತದ ಸಿನಿ ರಂಗದ ಅನಭಿಶಕ್ತ ದೊರೆಯಾಗಿರುವ ಸೂಪರ್​ ಸ್ಟಾರ್ ರಜನಿಕಾಂತ್ ಅಮೆರಿಕಕ್ಕೆ ಹಾರಿದ್ದಾರೆ. ಇಷ್ಟಕ್ಕೂ ಸೂಪರ್ ಸ್ಟಾರ್ ರಜನಿಕಾಂತ್ ಅಮೆರಿಕಕ್ಕೆ ಹೋಗಿದ್ದಾದ್ರೂ ಏಕೆ..? ಇದರ ಹಿಂದಿನ ಉದ್ದೇಶವಾದ್ರೂ ಏನು ಅಂದ್ರೆ..

ಕೆಲದಿನಗಳ ಹಿಂದೆ ರಜನಿ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ರು. ತಮ್ಮ ನೆಚ್ಚಿನ ನಟ ದಿಢೀರ್ ಅಂತಾ ಆಸ್ಪತ್ರೆ  ಸೇರಿದ್ದು ಎಲ್ಲರಿಗೂ ಶಾಕ್ ನೀಡಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ರಜನಿಕಾಂತ್ ಪರದಾಡಿದ್ದರು. ಈಗಲೂ ರಜನಿಕಾಂತ್ ಆರೋಗ್ಯ ಸುಧಾರಿಸಿಲ್ಲ. ಹೀಗಾಗಿಯೇ ಸದ್ಯ ರಜನಿ ಹೆಚ್ಚಿನ ಚಿಕಿತ್ಸೆಗೆ ಅಮೆರಿಕಾಗೆ ತೆರಳಿದ್ದಾರಂತೆ.

ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಹೊರ ಬಂದಿದ್ರೂ.. ಇತ್ತೀಚೆಗೆ ಅನಾರೋಗ್ಯದ ಕಾರಣಕ್ಕೆ ಹೈದ್ರಾಬಾದ್​ನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ರು. ಈ ಮಧ್ಯೆ ರಕ್ತದೊತ್ತಡ ಏರುಪೇರಾಗಿದ್ದು, ರಜನಿ ಆರೋಗ್ಯ ಸುಧಾರಿಸಿರಲಿಲ್ಲ. ಚಿಕಿತ್ಸೆ ಪಡೆದು ಇತ್ತೀಚಿಗಷ್ಟೇ ಆಸ್ಪತ್ರೆಯಿಂದ ಹೊರ ಬಂದಿದ್ರೂ, ಸಮಸ್ಯೆ ಬಗೆಹರಿದಿರಲಿಲ್ಲ. ಹೀಗಾಗಿ ರಜನಿ ಮತ್ತೆ ಆಸ್ಪತ್ರೆಯತ್ತ ಮುಖ ಮಾಡಿದ್ದಾರೆ.

ಅಂದಹಾಗೆ ತಮ್ಮ ಹೊಸ ರಾಜಕೀಯ ಪಕ್ಷದ ಮೂಲಕ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸದ್ದು ಮಾಡಬೇಕಿದ್ದ ತಲೈವಾಗೆ ಆರೋಗ್ಯ ಕೈಕೊಟ್ಟಿದೆ. ಇದು ಅವ್ರಿಗೆ ಅತೀವ ನೋವುಂಟು ಮಾಡಿದೆ. ಇದು ರಜನಿಕಾಂತ್ ಅಭಿಮಾನಿಗಳಿಗೂ ನೋವು ತಂದಿದ್ದು, ನೆಚ್ಚಿನ ನಟನಿಗೆ ಏನಾಯ್ತೋ ಅಂತಾ ಚಿಂತೆಯಲ್ಲಿದ್ದಾರೆ. ಇಷ್ಟೆಲ್ಲದರ ನಡುವೆ ಸದ್ಯಕ್ಕೆ ರಾಜಕೀಯದಿಂದ ದೂರ ಉಳಿಯುವ ನಿರ್ಧಾರವನ್ನ ರಜನಿ ತೆಗೆದುಕೊಂಡಿರುವುದು ಅಭಿಮಾನಿಗಳಿಗೆ ಶಾಕ್ ಮೇಲೆ ಶಾಕ್ ನೀಡಿದಂತಾಗಿದೆ.

ಒಟ್ನಲ್ಲಿ ರಜನಿ ಅನಾರೋಗ್ಯದ ವಿಚಾರ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದೆ. ಆದ್ರೆ ರಜನಿ ಸದ್ಯಕ್ಕೆ ರಾಜಕೀಯದಿಂದ ಮಾತ್ರ ರೆಸ್ಟ್ ಪಡೆಯಲಿದ್ದಾರೆ. ಆದರೆ ಚಿತ್ರರಂಗದಲ್ಲಿ ಮುಂದುವರಿಯಲಿದ್ದಾರೆ. ಅಣ್ಣಾತೆ ಚಿತ್ರದ ಶೂಟಿಂಗ್ ನಡೀತಿದ್ದು, ರಜನಿ ಸಂಪೂರ್ಣ ಗುಣಮುಖರಾದ ಬಳಿಕ ಶೂಟಿಂಗ್ ಮುಂದುವರೆಯಲಿದೆ.

Published On - 9:41 am, Sat, 2 January 21

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ