AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಪಕ್ಷದ ಚಿಹ್ನೆ ಆಟೋರಿಕ್ಷಾ?

ತಮಿಳುನಾಡು ರಾಜಕೀಯ ರಂಗಕ್ಕೆ ಎಂಟ್ರಿಕೊಟ್ಟಿರುವ ಸೂಪರ್​​ಸ್ಟಾರ್ ರಜನಿಕಾಂತ್ ಅವರ ಪಕ್ಷದ ಹೆಸರು 'ಮಕ್ಕಳ್ ಸೇವೈ ಕಟ್ಚಿ' ಹಾಗೂ ಪಕ್ಷದ ಚಿಹ್ನೆ ಆಟೋ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು 'ಮಕ್ಕಳ್ ಸೇವೈ ಕಟ್ಚಿ' ಪಕ್ಷದ ಚಿಹ್ನೆ ಆಟೋರಿಕ್ಷಾ?
ರಜನಿಕಾಂತ್​
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 15, 2020 | 3:49 PM

Share

ಚೆನ್ನೈ: ತಮಿಳುನಾಡು ರಾಜಕೀಯ ರಂಗಕ್ಕೆ ಎಂಟ್ರಿಕೊಟ್ಟಿರುವ ಸೂಪರ್​​ಸ್ಟಾರ್ ರಜನಿಕಾಂತ್ ಅವರ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಹಾಗೂ ಪಕ್ಷದ ಚಿಹ್ನೆ ಆಟೋ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಮಕ್ಕಳ್ ಸೇವೈ ಕಟ್ಚಿ  ಪಕ್ಷದ ಚಿಹ್ನೆಯಾಗಿ ಆಟೋರಿಕ್ಷಾ ಬಳಕೆಗೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಅಂದ ಹಾಗೆ, ಪಕ್ಷದ ಹೆಸರು ಮತ್ತು ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ರಜನಿಕಾಂತ್ ಹೆಸರು ಉಲ್ಲೇಖಿಸಲಾಗಿದೆ. ಆದರೆ, ಅರ್ಜಿ ಸಲ್ಲಿಸಿದವರ ಹೆಸರು ಸದ್ಯ ಬಹಿರಂಗವಾಗಿಲ್ಲ.

ಪಕ್ಷದ ಚಿಹ್ನೆಯಾಗಿ ‘ಹಸ್ತ ಮುದ್ರೆ’ ಬೇಕು ಎಂದು ಮಕ್ಕಳ್ ಸೇವೈ ಕಟ್ಚಿ ಪಕ್ಷ ಮನವಿ ಸಲ್ಲಿಸಿತ್ತು. ಆದರೆ, ಈಗಾಗಲೇ ಹಸ್ತ ಚಿಹ್ನೆ ಕಾಂಗ್ರೆಸ್ ಪಕ್ಷದ ಚಿಹ್ನೆಯಾಗಿರುವುದರಿಂದ , ಮಕ್ಕಳ್ ಸೇವೈ ಕಟ್ಚಿ ಪಕ್ಷಕ್ಕೆ ಆಟೋರಿಕ್ಷಾ ಚಿಹ್ನೆ ನೀಡಲಾಗಿದೆ. ಅಂದ ಹಾಗೆ, 1995ರಲ್ಲಿ ರಿಲೀಸ್​ ಆದ ಬ್ಲಾಕ್ ಬಸ್ಟರ್ ಸಿನಿಮಾ ಬಾಷಾದಲ್ಲಿ ರಜನಿಕಾಂತ್ ಆಟೋಚಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ವದಂತಿಗೆ ಸ್ಪಷ್ಟನೆ ನೀಡಿದ ಸೂಪರ್​ಸ್ಟಾರ್ ರಜಿನಿಕಾಂತ್ ಒಳ್ಳೆಯದನ್ನು ಯೋಚಿಸೋಣ, ಒಳ್ಳೇದು ಮಾತಾಡೋಣ.  ಒಳ್ಳೆಯದನ್ನು ಮಾಡೋಣ, ಒಳ್ಳೆಯದು ಸಂಭವಿಸುತ್ತದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗುವವರೆಗೂ ಕಾಯಬೇಕು ಎಂದು ರಜನಿಕಾಂತ್  ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ

ರಜನಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ  ಅಭಿಮಾನಿಗಳು, ಬೆಂಬಲಿಗರು ಅಧಿಕೃತ ಘೋಷಣೆ ಆಗುವವರೆಗೂ ಕಾಯಬೇಕು  ಎಂದು ಅವರು ಹೇಳಿದ್ದಾರೆ.

ರಾಜಕೀಯಕ್ಕೆ ರಜನಿಕಾಂತ್: ಏನಾಗಬಹುದು ತಮಿಳುನಾಡು ರಾಜಕಾರಣ?

Published On - 12:07 pm, Tue, 15 December 20

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು